ರಸ್ತೆ ಗುಂಡಿ ಮುಚ್ಚಲು ಊರವರಿಂದಲೇ ಶ್ರಮದಾನ


Team Udayavani, Oct 6, 2019, 5:08 AM IST

0510KDPP12

ಕುಂದಾಪುರ: ಮೂಡಬಗೆ – ಕೆಂಜಿಮನೆ ರಸ್ತೆಯ ಮಾರ್ಡಿ ಸಮೀಪದ ಕದ್ರಿಹಕ್ಲುವಿನಿಂದ ಆಜ್ರಿವರೆಗಿನ ರಸ್ತೆ ಸಂಪೂರ್ಣ ಹೊಂಡ – ಗುಂಡಿಗಳಿಂದ ಕೂಡಿದ್ದು, ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇರೆ ದಾರಿ ಕಾಣದ ಊರವರು ಈಗ ಶ್ರಮದಾನದ ಮೂಲಕ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ.

ಮೂಡುಬಗೆಯಿಂದ ಕೆಂಜಿಮನೆಗೆ ತೆರಳುವ ರಸ್ತೆಯುದ್ದಕ್ಕೂ ಸುಮಾರು 7 ಕಿ.ಮೀ. ದೂರದವರೆಗೂ ಸಂಪೂರ್ಣ ಹದಗೆಟ್ಟು ಹೋಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರವೇ ಕಷ್ಟಕರವೆನಿಸಿದೆ. ಇದರಿಂದ ಈಗ ದಿನ ನಿತ್ಯ ಸಂಕಷ್ಟ ಅನುಭವಿಸುತ್ತಿರುವ ವಾಹನ ಸವಾರರು, ಯುವಕರು ಸೇರಿಕೊಂಡು ಮಳೆ ಸ್ವಲ್ಪ ಕಡಿಮೆಯಾಗಿರುವುದರಿಂದ ರಸ್ತೆಗೆ ಮಣ್ಣು ಹಾಕಿ, ಮುಚ್ಚುವ ಪ್ರಯತ್ನ ಮಾಡಿದ್ದಾರೆ. ಶ್ರಮದಾನದಲ್ಲಿ ಮಾರ್ಡಿಯ ಹತ್ತಾರು ಯುವಕರು ಭಾಗವಹಿಸಿದ್ದರು.

6 ವರ್ಷಗಳ ಹಿಂದೆ ಡಾಮರೀಕರಣ
ಮೂಡುಬಗೆಯಿಂದ ಕೊಡ್ಲಾಡಿ, ಮಾರ್ಡಿ, ಆಜ್ರಿ, ಕೂಡ್ಗಿಯಾಗಿ ಕೆಂಜಿಮನೆ ಕಡೆಗೆ ಸಂಪರ್ಕ ಕಲ್ಪಿಸುವ ಸುಮಾರು 7 ಕಿ.ಮೀ. ದೂರದ ರಸ್ತೆಗೆ 6 ವರ್ಷಗಳ ಹಿಂದೆ ಡಾಮರೀಕರಣವಾಯಿತು. ಆ ಬಳಿಕ ಒಮ್ಮೆ ಅಂದರೆ 2 ವರ್ಷಗಳ ಹಿಂದೆ ಹೊಂಡ- ಗುಂಡಿ ಬಿದ್ದ ಕಡೆಗಳಲ್ಲಿ ತೇಪೆ ಹಾಕಲಾಗಿತ್ತು. ಆ ಬಳಿಕ ಇತ್ತ ಯಾರೂ ಸುಳಿಯಲೂ ಇಲ್ಲ. ಈಗ ಸಂಪೂರ್ಣ ಹದಗೆಟ್ಟು ಹೋಗಿದೆ.

ಬಸ್‌ ಸಂಚಾರಕ್ಕೆ ಸಂಚಕಾರ
ಈ ಮಾರ್ಗವಾಗಿ 1 ಸರಕಾರಿ ಬಸ್‌ ದಿನಾ 4 ಟ್ರಿಪ್‌ ಸಂಚರಿಸುತ್ತಿದ್ದರೆ, 2 ಖಾಸಗಿ ಬಸ್‌ಗಳು ದಿನಕ್ಕೆ 3 ಟ್ರಿಪ್‌ ಸಂಚರಿಸುತ್ತವೆ. ಈಗ ಹದಗೆಟ್ಟ ರಸ್ತೆಯಿಂದಾಗಿ ಈ ಮಾರ್ಗವಾಗಿ ಬಸ್‌ಗಳು ಸಂಚರಿಸಲು ಹಿಂದೇಟು ಹಾಕುತ್ತಿವೆ. ಇನ್ನಾದರೂ ರಸ್ತೆ ದುರಸ್ತಿಗೆ ಮುಂದಾಗದಿದ್ದರೆ, ಈ ಮಾರ್ಗವಾಗಿ ಬಸ್‌ ಸಂಚಾರಕ್ಕೆ ಸಂಚಕಾರ ಉಂಟಾಗುವ ಸಂಭವವೂ ಇದೆ. ಅನೇಕ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಇದೇ ಬಸ್‌ಗಳನ್ನು ಅವಲಂಬಿಸಿರುವುದರಿಂದ ಅವರಿಗೆ ತೊಂದರೆಯಾಗಲಿದೆ.

ದುರಸ್ತಿಗೆ ಆಗ್ರಹ
ಚುನಾವಣೆ ಸಮಯದಲ್ಲಿ ರಸ್ತೆಯ ದುರಸ್ತಿ ಮಾಡಿಕೊಡುತ್ತೇವೆ ಎನ್ನುತ್ತಾರೆ. ಮತದಾನದ ಮುಗಿದ ಬಳಿಕ ಜನಪ್ರತಿನಿಧಿಳು ಇತ್ತ ಗಮನ ಹರಿಸುವುದಿಲ್ಲ. ನಿತ್ಯ ಈ ಹೊಂಡ – ಗುಂಡಿಗಳಿಂದ ಸ್ಥಳೀಯರು ಸಂಕಷ್ಟ ಅನುಭವಿಸುತ್ತಿದ್ದು, ಇನ್ನಾದರೂ ಈ ರಸ್ತೆಯ ದುರಸ್ತಿ ಮಾಡಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

congress

Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!

1-asaas

BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

1-weeqwewqe

T20; ಐನೂರರ ಕ್ಲಬ್‌ ಸೇರಿದ ಸುನೀಲ್‌ ನಾರಾಯಣ್‌

1-aaaaa

Netravathi ನದಿಯಲ್ಲಿ ತಾಯಿ,‌ಮಗು ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ

1-wqewwqewq

IPL; RCB ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್‌ಗಳ ಜಯ

BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ

BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqwewqe

Bhagavad Gita ಸಮ್ಮೇಳನದಿಂದ ಶ್ರೀಕೃಷ್ಣನಿಗೆ ಅತೀವ ಸಂತೋಷ: ಪುತ್ತಿಗೆ ಶ್ರೀ

Crime: ಪ್ರತ್ಯೇಕ ಪ್ರಕರಣ: ಮಟ್ಕಾ ಆಡುತ್ತಿದ್ದ ಮೂವರು ವಶಕ್ಕೆ

Crime: ಪ್ರತ್ಯೇಕ ಪ್ರಕರಣ: ಮಟ್ಕಾ ಆಡುತ್ತಿದ್ದ ಮೂವರು ವಶಕ್ಕೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qewqwewqe

Bhagavad Gita ಸಮ್ಮೇಳನದಿಂದ ಶ್ರೀಕೃಷ್ಣನಿಗೆ ಅತೀವ ಸಂತೋಷ: ಪುತ್ತಿಗೆ ಶ್ರೀ

congress

Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!

taliban

Afghan ವ್ಯಭಿಚಾರಿ ಸ್ತ್ರೀಯರಿಗೆ ರಸ್ತೆ ಮಧ್ಯೆಯೇ ಕಲ್ಲೇಟು: ತಾಲಿಬಾನ್‌ ಘೋಷಣೆ!

1-asaas

BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.