ಮುಂಡ್ಕೂರಿನಲ್ಲಿ ಆತಂಕ ಸೃಷ್ಠಿಸಿದ ಮುಂಬೈನ ವ್ಯಕ್ತಿ ಕ್ವಾರಂಟೈನ್ ಗೆ
Team Udayavani, May 16, 2020, 5:32 PM IST
ಬೆಳ್ಮಣ್: ಮುಂಬೈಯಲ್ಲಿ ಉದ್ಯೋಗದಲ್ಲಿರುವ ಮುಂಡ್ಕೂರು ಗ್ರಾಮದ ನಿವಾಸಿಯೋರ್ವರು ಸರಕು ಸಾಗಟದ ವಾಹನದಲ್ಲಿ ಮುಂಬೈನಿಂದ ನೇರವಾಗಿ ಮನೆಗೆ ಬಂದು ಪರಿಸರದಲ್ಲಿ ಆತಂಕ ಸೃಷ್ಠಿಸಿದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಈ ವ್ಯಕ್ತಿಯು ಉದ್ಯೋಗ ನಿಮಿತ್ತ ಮುಂಬೈನಲ್ಲಿದ್ದರು. ಇವರು ಲಾಕ್ ಡೌನ್ ಕಾರಣದಿಂದ ಸರಕು ಸಾಗಟದ ವಾಹನದಲ್ಲಿ ನೇರವಾಗಿ ಮನೆಗೆ ಬಂದಿದ್ದರು.
ಆದರೆ ಇದರಿಂದ ನೆರೆಮನೆಯವರು ಭಯಭೀತರಾಗಿ ಸ್ಥಳೀಯರಿಗೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು, ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಗ್ರಾಮಕರಣಿಕರು ಸ್ಥಳಕ್ಕಾಗಮಿಸಿ ಆತನನ್ನು ಆಂಬ್ಯುಲೆನ್ಸ್ ವಾಹನದಲ್ಲಿ ಕಾರ್ಕಳ ಕ್ವಾರಂಟೈನ್ ಕೇಂದ್ರಕ್ಕೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ