ಇಂದು ರಕ್ಷಾ ಬಂಧನ


Team Udayavani, Aug 15, 2019, 5:20 AM IST

e-5

ಸಮಯ ಮತ್ತು ಹಣವು ಅನೇಕ ವಿಷಯಗಳನ್ನು ಬದಲಾಯಿಸುತ್ತದೆ. ಆದರೆ ನಾವು ಹಂಚಿಕೊಳ್ಳುವ ಪ್ರೀತಿ ಮತ್ತು ಬಾಂಧವ್ಯ ಎಂದಿಗೂ ಬದಲಾಗುವುದಿಲ್ಲ. ಈ ರಾಖೀ ನಿಮಗೆ ಪ್ರೀತಿ ಮತ್ತು ಕಾಳಜಿಯನ್ನು ತರುತ್ತದೆ. ನೆನಪುಗಳು ಸಮಯದೊಂದಿಗೆ ಮಸುಕಾಗ ಬಹುದು. ಆದರೆ ನಾವು ಹಂಚಿಕೊಳ್ಳುವ ಪ್ರೀತಿ ಮತ್ತು ವಿಶೇಷ ಬಂಧವು ಪ್ರತಿದಿನವೂ ಸಮೃದ್ಧವಾಗಿ ಬೆಳೆಯುತ್ತದೆ. ರಕ್ಷಾ ಬಂಧನ ಹಬ್ಬದ ಶುಭಾಶಯಗಳು ಅಣ್ಣಾ…

ಮಣಿಪಾಲ: ರಕ್ಷಾ ಬಂಧನ ವಿಶ್ವದಲ್ಲಿ ಭ್ರಾತೃತ್ವದ ಸಂಕೇತವಾಗಿ ಆಚರಿಸಲ್ಪಡುವ ಏಕೈಕ ಹಬ್ಬ. ಭಾರತೀಯ ಆಚರಣೆಗಳಲ್ಲಿ ಬಾಂಧವ್ಯವನ್ನು ಗಟ್ಟಿಗೊಳಿಸುವಂತಹ ವಿಶೇಷ ಆಚರಣೆ. ಶ್ರಾವಣ ಮಾಸದಲ್ಲಿ ಬರುವ ಈ ಹಬ್ಬವನ್ನು ಮೊದಲು ಉತ್ತರ ಭಾರತದಲ್ಲಿ ಮಾತ್ರ ಆಚರಿಸುತ್ತಿದ್ದು, ಕಾಲ ಕ್ರಮೇಣ ಭಾರತಾದ್ಯಂತ ವ್ಯಾಪಿಸಿತು. ವಿಶೇಷವೆಂದರೆ ಹಿಂದೂ ಧರ್ಮದಲ್ಲಿ ಆಚರಣೆಯಲ್ಲಿದ್ದ ಈ ರಕ್ಷಾಬಂಧನ ಈಗ ಜಾತಿ, ಧರ್ಮಗಳನ್ನು ಮೀರಿ ಆಚರಣೆಯಲ್ಲಿದೆ.

ಸಹೋದರ ಅಥವಾ ಸಹೋದರಿ ಇಲ್ಲವೆಂದು ಕೊರಗುವವರಿಗೆ ಈ ರಕ್ಷಾ ಬಂಧನದ ಆಚರಣೆ ಆ ಕೊರಗು ಇನ್ನಿಲ್ಲದಂತೆ ಮಾಡುತ್ತದೆ. ಈ ಮೂಲಕ ಅಮೂಲ್ಯ ಬೆಸುಗೆಗೆ ರಕ್ಷಾಬಂಧನ ಸಾಕ್ಷಿಯಾಗುತ್ತಿದೆೆ. ರಕ್ಷಾಬಂಧನವು ತನ್ನ ಆಚರಣೆಯ ಜೀವಂತಿಕೆ ಯನ್ನು ಇಂದಿಗೂ ಕಳೆದುಕೊಳ್ಳದೆ ಅರ್ಥಪೂರ್ಣ ವಾಗಿ ಆಚರಿಸಲ್ಪಡುತ್ತಿದೆ.

ದೇಶಾದ್ಯಂತ ಈ ಆಚರಣೆಯಿದ್ದರೂ ಒಂದೊಂದು ಕಡೆಗಳಲ್ಲಿ ಇದರ ಪೌರಾಣಿಕ ಹಿನ್ನೆಲೆ ಬೇರೆ ಬೇರೆ ಇದೆ. ಸಲೂನೊ, ಸಿಲೋನೊ, ರಾಕ್ರಿ ಮೊದಲಾದ ಹೆಸರುಗಳಲ್ಲಿ ಇರುವ ರಾಖೀ ಕಟ್ಟುವ ಸಂಪ್ರದಾಯವು ಅರ್ಥಪೂರ್ಣ ಆಚರಣೆಯಾಗಿದೆ. ಕೆಲವು ಕಡೆ ಅಣ್ಣನಿಗೆ ರಾಖೀ ಕಟ್ಟ ಬಯಸುವ ತಂಗಿಯು ಹಿಂದಿನ ದಿನ ಉಪವಾಸವಿದ್ದು ಮರುದಿನ ಬೆಳಗ್ಗೆ ಸ್ನಾನ ಮಾಡಿ ರಾಖೀ ಕಟ್ಟುವವರೆಗೂ ಅನ್ನ ಸೇವಿಸುವಂತಿಲ್ಲ.

ರಾಖಿ ಕಟ್ಟಿಸಿಕೊಂಡ ಅಣ್ಣ ಎಲ್ಲ ಸಂದರ್ಭದಲ್ಲೂ ನಿನ್ನ ರಕ್ಷಣೆಯ ಜವಾಬ್ದಾರಿ ತನ್ನದು ಎಂದು ಶಪಥ ಮಾಡುತ್ತಾನೆ. ಇನ್ನೂ ಕೆಲವು ಕಡೆಗಳಲ್ಲಿ ತಂಗಿಯಾದವಳು ಉಪವಾಸ ವಿದ್ದು ಮುಂಜಾನೆ ರಾಖೀಯನ್ನು ದೀಪ, ತಿಲಕ, ಅಕ್ಷತೆಯ ಜತೆಗೆ ಅಣ್ಣನಿಗೆ ತಿಲಕವನ್ನಿಟ್ಟು ನೆತ್ತಿಯ ಮೇಲೆ ಅಕ್ಷತೆ ಹಾಕಿ ರಕ್ಷೆಯನ್ನು ಕಟ್ಟಿದ ಅನಂತರ ಆರತಿ ಬೆಳಗುತ್ತಾ ಅವನಿಂದ ಆಶೀರ್ವಾದ ಪಡೆಯುತ್ತಾಳೆ. ಅಣ್ಣನಾದವನು ತಂಗಿಗೆ ಸಿಹಿ ತಿನಿಸು ಕೊಟ್ಟು ಹಬ್ಬವನ್ನು ಆಚರಿಸುತ್ತಾರೆ.

•ಮಾಹಿತಿ: ಉಡುಪಿ/ಕುಂದಾಪುರ/ಕಾರ್ಕಳ ಡೆಸ್ಕ್

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.