ಟೋಲ್ ಸಭೆ ಸಚಿವೆ ಜಯಮಾಲಾ ಬೇಜವಾಬ್ದಾರಿ ಹೇಳಿಕೆ: ಭಟ್
Team Udayavani, Dec 1, 2018, 10:02 AM IST
ಉಡುಪಿ: ಸ್ಥಳೀಯರಿಗೆ ಟೋಲ್ ವಿನಾಯಿತಿ ವಿಚಾರ ಕೇಂದ್ರ ಸರಕಾರದ ಕೈಯಲ್ಲಿದೆ ಎಂದು ಸಚಿವೆ ಜಯಮಾಲಾ ಅವರು ನೀಡಿರುವ ಪ್ರತಿಕ್ರಿಯೆ ಬೇಜವಾಬ್ದಾರಿತನದ್ದು ಎಂದು ಉಡುಪಿ ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ.
ಜಯಮಾಲಾ ಅವರು ಲೋಕೋಪಯೋಗಿ ಸಚಿವ ರೇವಣ್ಣ ಸಮಕ್ಷಮದಲ್ಲಿ ಕರೆದ ಟೋಲ್ಗೇಟ್ ಸಭೆ ವಿಫಲವಾಗಿದೆ. ರೇವಣ್ಣ ಅವರು ಕನಿಷ್ಠ 10 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ವಿನಾಯಿತಿ ಕೊಡಿ ಎಂಬ ಬೇಡಿಕೆ ಸಲ್ಲಿಸುವ ಬದಲು ಕೇಂದ್ರ ಸರಕಾರವನ್ನು ದೂರಿದ್ದಾರೆ. ಗುತ್ತಿಗೆದಾರರ ಪರ ವಕಾಲತ್ತು ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಿರುವುದನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಲ್ಲೇಖೀಸಿದಾಗ ಸಚಿವ ರೇವಣ್ಣ ಅಧಿಕಾರಿಯ ಮಾತನ್ನು ತಡೆದು “ನಿಮಗೆ ಅಧಿಕಾರ ಕೊಟ್ಟವರಾರು?’ ಎಂದು ಬೆದರಿಸಿದ್ದಾರೆ. ಟೋಲ್ ಸ್ಥಳೀಯ ಸಮಸ್ಯೆಯಾಗಿದೆ. ಉಡುಪಿ ಜಿಲ್ಲಾಡಳಿತ ನೂರಾರು ಪೊಲೀಸರನ್ನು ನಿಯೋಜಿಸಿ ಜನರ ಮೇಲೆ ದಬ್ಟಾಳಿಕೆ ಮಾಡುವುದನ್ನು ಸಹಿಸಲಾಗದು. ಜಿಲ್ಲಾಡಳಿತವೇ ಎದುರು ನಿಂತು ಸ್ಥಳೀಯರಿಂದ ಟೋಲ್ ಸಂಗ್ರಹ ಮುಂದುವರಿಸಿದರೆ ಸಂಸದರ ಜತೆಗೆ ಜಿಲ್ಲೆಯ ಎಲ್ಲ 5 ಶಾಸಕರು ಸೇರಿ ಹೋರಾಟ ನಡೆಸಲಿದ್ದೇವೆ ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ