ನಗರಸಭೆ ಹಿಂಭಾಗದ ತೋಡಿಗೆ ಹರಿದ ಕಚೇರಿ ಶೌಚ ತ್ಯಾಜ್ಯ
Team Udayavani, Nov 8, 2019, 5:11 AM IST
ಉಡುಪಿ: ನಗರಸಭೆ ಕಚೇರಿ ಸಿಬಂದಿ ಹಾಗೂ ಸಾರ್ವಜನಿಕರು ಉಪಯೋಗಿಸುವ ಶೌಚಾಲಯದಿಂದ ಶೌಚ ತ್ಯಾಜ್ಯವು ನಗರಸಭೆ ಹಿಂಭಾಗದಲ್ಲಿರುವ ತೆರೆದ ತೋಡಿನಲ್ಲಿ ಹರಿಯುತ್ತಿದೆ. ಇದರಿಂದ ಈ ಪರಿಸರದಲ್ಲಿ ಹಲವಾರು ದಿನಗಳಿಂದ ಗಬ್ಬುವಾಸನೆ ಕಂಡುಬರುವುದಲ್ಲದೇ ಈ ಸ್ಥಳ ಸೊಳ್ಳೆಗಳ ಆಶ್ರಯ ತಾಣವಾಗಿದೆ.
ನಗರ ಕೇಂದ್ರ ವಾಚನಾ ಲಯದ ಪಕ್ಕದಿಂದ ನಿತ್ಯಾನಂದ ಮಂದಿರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿ ಸುತ್ತಿದ್ದು, ಮೂಗು ಮುಚ್ಚಿಕೊಂಡು ತಿರುಗಾಡ ಬೇಕಾದ ಪರಿಸ್ಥಿತಿ ಹಾಗೂ ಪರಿಸರದಲ್ಲಿ ಡೆಂಗ್ಯೂ, ಮಲೇರಿಯಾ ಮಾರಕ ಸಾಂಕ್ರಮಿಕ ರೋಗಗಳು ಹರಡುವ ಭೀತಿಯು ಎದುರಾಗಿದೆ.
ಈ ಬಗ್ಗೆ ಸಾರ್ವಜನಿಕರು ಸಂಬಂಧಪಟ್ಟವರಿಗೆ ಮೌಖೀಕವಾಗಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಾರ್ವಜನಿಕರ ತೊಂದರೆಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪದಾಧಿಕಾರಿಗಳಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ