ಕೋಟ-ಪಡುಕರೆ ಬೀಚ್‌: ಪ್ರವಾಸಿ ತಾಣವಾಗಲು ವಿಪುಲ ಅವಕಾಶ 


Team Udayavani, Jan 17, 2019, 1:30 AM IST

kota-padukere.png

ಕೋಟ: ಉಡುಪಿ ಜಿಲ್ಲೆಯಲ್ಲಿ ಕೆಲವೇ ಕೆಲವು ಸಮುದ್ರ ಕಿನಾರೆಗಳು ಹೊರತುಪಡಿಸಿದರೆ ಬೇರೆ ಸ್ಥಳಗಳು ಪ್ರವಾಸಿ ತಾಣವಾಗಿ ಅಷ್ಟೊಂದು ಅಭಿವೃದ್ಧಿ ಹೊಂದಿಲ್ಲ. ಆದರೆ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರೆ ಕೆಲವು  ಬೀಚ್‌ಗಳು ಉತ್ತಮ ಪ್ರವಾಸಿ ತಾಣವಾಗಿ ಬೆಳೆಯುವುದರಲ್ಲಿ ಅನುಮಾನವಿಲ್ಲ. ಅಂತಹ ಕಡಲ ತೀರಗಳಲ್ಲಿ  ಕೋಟ ಹಾಗೂ ಕೋಟತಟ್ಟು  ಎರಡು ಗ್ರಾ.ಪಂ.ಗೆ ಹೊಂದಿಕೊಂಡಿರುವ  ಮಣೂರು-ಪಡುಕರೆ ಸಮುದ್ರ ತೀರ ಕೂಡ ಒಂದು.

ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 2 ಕಿ.ಮೀ.
ಮಣೂರು-ಪಡುಕರೆಯ ಕಡಲ ತೀರ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 2 ಕಿ.ಮೀ. ದೂರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿಗೆ ಅತೀ ಹತ್ತಿರದಲ್ಲಿರುವ ಬೀಚ್‌ಗಳಲ್ಲಿ ಇದೂ  ಒಂದು. ಉತ್ತಮ ನೈಸರ್ಗಿಕ ಪ್ರವಾಸಿ ತಾಣವಾಗಿದ್ದು, ಬೀಚ್‌ ತನಕ  ರಸ್ತೆ ವ್ಯವಸ್ಥೆ ಇದೆ. ಇಲ್ಲಿನ ಕರಾವಳಿ ಸಂಪರ್ಕ ರಸ್ತೆ ಉತ್ತರಾಭಿಮುಖವಾಗಿ ಕೊರವಾಡಿ, ಬೀಜಾಡಿ, ಕೋಟೇಶ್ವರ ಕಿನಾರ ಹಾಗೂ ಕೋಡಿಯ ವರೆಗೆ ಸಮುದ್ರ ತೀರವಾಗಿ ಸಂಪರ್ಕವನ್ನು ಬೆಸೆದರೆ, ದಕ್ಷಿಣಾಭಿಮುಖವಾಗಿ ಪಾರಂಪಪಳ್ಳಿ, ಕೋಡಿ, ಸಾಸ್ತಾನವನ್ನು ಸಂಪರ್ಕಿಸುತ್ತದೆ.

ಕೊಂಡಿಯಂತಿರುವ ಧಾರ್ಮಿಕ- ಸಾಹಿತ್ಯಿಕ ತಾಣಗಳು
ಕೋಟ ಅಮೃತೇಶ್ವರೀ ದೇವಸ್ಥಾನ ಹಾಗೂ ಕೋಟ ಕಾರಂತ ಕಲಾಭವನ ಮತ್ತು ಈ ಕಡಲ ಕಿನಾರೆ ಮೂರು ಕೂಡ  ಅತೀ ಹತ್ತಿರದಲ್ಲಿ ಒದಕ್ಕೊಂದು ಕೂಡಿಯಂತಿದೆ.  ಹೀಗಾಗಿ ಈ ಮೂರು ಸ್ಥಳಗಳನ್ನು ಒಟ್ಟಾಗಿ ನೋಡಬಹುದು.

ಈಗಾಗಲೇ ಪ್ರವಾಸಿಗರ ಆಕರ್ಷಣೆಯ ತಾಣ
ಇಲ್ಲಿನ ಕಡಲ ಕಿನಾರೆ ತುಂಬಾ ವಿಸ್ತಾರವಾಗಿದ್ದು, ಹೆಚ್ಚು ಆಳವಿಲ್ಲದ ಕಾರಣ ಪ್ರವಾಸಿಗರಿಗೆ ಕಡಲಿಗಿಳಿಯಲು ಸಾಕಷ್ಟು  ಅನುಕೂಲವಿದೆ. ಹೀಗಾಗಿ ಈಗಾಗಲೇ ಹೆಚ್ಚು-ಹೆಚ್ಚು ಪ್ರವಾಸಿಗರನ್ನು ಈ ಪ್ರದೇಶ ಆಕರ್ಷಿಸುತ್ತಿದೆ. ರವಿವಾರ ಹಾಗೂ ಇತರ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು  ತಮ್ಮ ಕುಟುಂಬ ಸದಸ್ಯರೊಂದಿಗೆ  ಇಲ್ಲಿಗೆ ಭೇಟಿ ನೀಡಿ ಖುಷಿ ಅನುಭವಿಸುತ್ತಿದ್ದಾರೆ.

ಅಭಿವೃದ್ಧಿಗೆ ಅಗತ್ಯವಿರುವ ಸೌಕರ್ಯಗಳು
ರಸ್ತೆ ಅಭಿವೃದ್ಧಿ, ವಿದ್ಯುತ್‌ ದೀಪದ ವ್ಯವಸ್ಥೆ, ಪ್ರವಾಸಿಗರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಪುಟ್ಟ ಮಕ್ಕಳಿಗೆ ಆಟವಾಡಲು ಪಾರ್ಕ್‌,  ಪಾರ್ಕಿಂಗ್‌ ವ್ಯವಸ್ಥೆ, ತಿಂಡಿ-ತಿನಿಸುಗಳ ಸ್ಟಾಲ್‌ ಇದೇ ರೀತಿ  ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗುವಂತೆ ಮೂಲ ಸೌಕರ್ಯವನ್ನು ವ್ಯವಸ್ಥೆಗೊಳಿಸಿದಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ. 

ಪ್ರಸ್ತಾವನೆ ಸಲ್ಲಿಸಲಾಗಿದೆ
ಮಣೂರು-ಪಡುಕರೆಯ ಕಡಲ ತೀರವನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಬೇಕು ಎಂದು ಮೂರ್‍ನಾಲ್ಕು ವರ್ಷಗಳ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆಗ ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಆದರೆ ಅನಂತರ ಯಾವುದೇ ಕೆಲಸಗಳಾಗಲಿಲ್ಲ. ಇದೀಗ ಸ್ಥಳೀಯ ಗೀತಾನಂದ ಫೌಂಡೇಶನ್‌ವರು ಇಲ್ಲಿಗೆ ಕಲ್ಲು ಬೆಂಚ್‌ ಅಳವಡಿಸುವುದಾಗಿ ತಿಳಿಸಿದ್ದಾರೆ. ಜಿ.ಪಂ. ಅನುದಾನದಲ್ಲಿ ಸ್ವಲ್ಪ ದೂರ ರಸ್ತೆ ಆಗಿದೆ. ಈ ಕುರಿತು ಸರಕಾರಕ್ಕೆ ಮತ್ತೂಮ್ಮೆ ಮನವಿ ಸಲ್ಲಿಸಲಿದ್ದೇವೆ.
-ಭುಜಂಗ ಗುರಿಕಾರ, ಸ್ಥಳೀಯ ವಾರ್ಡ್‌ ಸದಸ್ಯರು, ಗ್ರಾ.ಪಂ. ಕೋಟ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.