ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?
Team Udayavani, Sep 26, 2022, 7:55 AM IST
ಮಲ್ಪೆ: ಮಳೆ, ಗಾಳಿಯಿಂದಾಗಿ ಪ್ರಕ್ಷುಬ್ಧಗೊಂಡಿದ್ದ ಕಡಲು ನಿಧಾನವಾಗಿ ಶಾಂತವಾಗುತ್ತಾ ಬರುತ್ತಿದೆ. ಆದರೆ ನಿಷೇಧದ ಅವಧಿ ಮುಗಿದರೂ ಮಲ್ಪೆ ಬೀಚ್ ಇನ್ನೂ ಪ್ರವಾಸಿಗರಿಗೆ ತೆರೆದುಕೊಂಡಿಲ್ಲ.
ಮಲ್ಪೆ ಬೀಚ್ಗೆ ರಾಜ್ಯ, ಹೊರರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಿದ್ದು, ಬೀಚ್ ಪ್ರವಾಸಿಗರಿಗೆ ಮುದ ನೀಡದೆ ಐದು ತಿಂಗಳು ಕಳೆದಿದೆ. ಇದೀಗ ಮಳೆಯ ಅಬ್ಬರ ಕಡಿಮೆಯಾದರೂ ವಾಟರ್ ನ್ಪೋರ್ಟ್ಸ್ ಇನ್ನೂ ಆರಂಭವಾಗಿಲ್ಲ. ಬಹುತೇಕ ಜಲಸಾಹಸ ಕ್ರೀಡಾ ಸಂಸ್ಥೆಗಳು ಅವಕಾಶಕ್ಕಾಗಿ ಕಾದು ಕುಳಿತಿವೆ. ಅ. 2ರ ಬಳಿಕ ಎಲ್ಲ ಜಲಸಾಹಸ ಕ್ರೀಡೆಗಳು ನಡೆಯುವ ಸಾಧ್ಯತೆ ಇದೆ ಎಂದು ಪೌರಾಯುಕ್ತ ಡಾ| ಉದಯ ಶೆಟ್ಟಿ ಹೇಳಿದ್ದಾರೆ.
ಈ ಬಾರಿ ವಿಳಂಬ
ಈ ಬಾರಿ ಅವಧಿಗೂ ಮುನ್ನವೇ ಬೀಚ್ಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನೇಕ ಅವಘಡಗಳು ಸಂಭವಿಸಿದ ಕಾರಣ ಮಳೆ ಆರಂಭವಾಗುತ್ತಿದ್ದಂತೆ ಮೇ ಮೊದಲ ವಾರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಸೆ. 15ಕ್ಕೆ ನಿಷೇಧಿತ ಅವಧಿ ಮುಗಿದರೂ ಪ್ರವಾಸಿಗರಿಗೆ ಇದು ವರೆಗೂ ನೀರಿಗಿಳಿಯುವ ಅವಕಾಶ ಸಿಕ್ಕಿಲ್ಲ.
ಪ್ರಸ್ತುತ ಬೀಚ್ ಅಭಿವೃದ್ಧಿ ಸಮಿತಿಯಿಂದ ಸಿದ್ಧತೆ ನಡೆಯುತ್ತಿದೆ. ಪ್ರವಾಸಿಗರ ಸುರಕ್ಷೆಗೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದು. ಅಲ್ಲಲ್ಲಿ ವಾಚ್ ಟವರ್ ಅಳವಡಿಕೆ, ಮೈಕ್ಗಳ ದುರಸ್ತಿ, ಸ್ವಿಮ್ಮಿಂಗ್ ವಲಯಗಳನ್ನು ನಿರ್ಮಿಸಲಾಗುತ್ತಿದೆ. ಪ್ರವಾಸಿಗರು ನೀರಿಗೆ ಇಳಿಯದಂತೆ ಅಳಡಿಸಲಾದ ನೆಟ್ ಅನ್ನು ಮುರ್ನಾಲ್ಕು ದಿನಗಳಲ್ಲಿ ತೆಗೆಯಲಾಗುವುದು ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ