ಆಗುಂಬೆ ಘಾಟಿಯಲ್ಲಿ 20ಕ್ಕೂ ಅಧಿಕ ಮಂಗಗಳಿಗೆ ವಿಷಪ್ರಾಶನ
Team Udayavani, Oct 28, 2017, 11:40 AM IST
ಹೆಬ್ರಿ: ನಾಡಾ³ಲು ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿ ಎರಡನೇ ಹೇರ್ಪಿನ್ ತಿರುವಿನ ರಸ್ತೆ ಬದಿಯಲ್ಲಿ ಇಪ್ಪತ್ತಕ್ಕೂ ಅಧಿಕ ಕಾಡು ಮಂಗಗಳು ವಿಷ ಪದಾರ್ಥ ತಿಂದು ಸಾವನ್ನಪ್ಪಿದ ಘಟನೆ ಅ.26ರಂದು ರಾತ್ರಿ ನಡೆದಿದೆ.
ಕಾಡು ಪ್ರಾಣಿಗಳಿಗಿಂತ ಕಡೆಯಾದ ಕಟುಕ ಹೃದಯಿಗಳು ಆಹಾರವನ್ನು ಹುಡುಕಿಕೊಂಡು ನಾಡಿಗೆ ಬಂದ ಮಂಗಗಳಿಗೆ ಯಾರೋ ಕಿಡಿಗೇಡಿಗಳು ಅವುಗಳಿಗೆ ಆಹಾರದಲ್ಲಿ ವಿಷ ಉಣಿಸಿ ಚೀಲದಲ್ಲಿ ಕಟ್ಟಿ ರಾತ್ರೋ ರಾತ್ರಿ ಘಾಟಿಯ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಜೀವನ್ಮರಣ ಸ್ಥಿತಿಯಲ್ಲಿ ಹೊರಳಾಡುತ್ತಿದ್ದ ಮಂಗಗಳ ರಾಶಿಯನ್ನು ಗಮನಿಸಿದ ಸ್ಥಳೀಯರು ಹಾಗೂ ಕೆಲವು ಪ್ರಯಾಣಿಕರು ಮಂಗಗಳಿಗೆ ನೀರು ಕುಡಿಸಿ ಬದುಕಿಸಲು ಬಹಳ ಪ್ರಯತ್ನಪಟ್ಟರೂ ವಿಫಲವಾಗಿವೆ.
ಇತ್ತೀಚೆಗೆ ಇಂತಹ ಮೂಕ ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಸಾಯಿಸುತ್ತಿರುವುದು ಹೆಚ್ಚಾಗುತ್ತಿದ್ದು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಬೇಕು ಹಾಗೂ ಅರಣ್ಯ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳೀಯರೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ವಲಯ ವನ್ಯಜೀವಿ ಇಲಾಖೆಯವರು ಆಗಮಿಸಿ ಮೃತ ಮಂಗಗಳ ದಫನದ ವಿಲೇವಾರಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ