ಸಾಂಪ್ರದಾಯಿಕ ಮೀನುಗಾರಿಕೆ ಚುರುಕು


Team Udayavani, Jun 11, 2018, 6:20 AM IST

0906mle1e.jpg

ಮಲ್ಪೆ: ಮುಂಗಾರು ಆರಂಭಗೊಂಡಿದೆ. ಭಾರೀ ಮಳೆಗಾಳಿ ಬೀಸು ತ್ತಿದ್ದು, ಮಳೆಗಾಲದ ಪ್ರಭಾವ ತೋರಿ ಸುತ್ತಿದೆ. ಒಂದೊಮ್ಮೆ ಗಾಳಿ ಪ್ರಭಾವ ಕಡಿಮೆಯಾಗುತ್ತಿದ್ದಂತೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಕಡಲಿ ಗಿಳಿಯಲು ನಿರ್ಧರಿಸುತ್ತಾರೆ. ಶುಕ್ರವಾರ ಬೆಣ್ಣೆಕುದ್ರು ಕುಲಮಹಾಸ್ತ್ರಿ ಮತ್ತು ವಡಭಾಂಡ ಬಲರಾಮ ದೇವರಿಗೆ ಪೂಜೆ ಸಲ್ಲಿಸಿ ಗಂಗಾಮಾತೆ ಪ್ರಸಾದವನ್ನು ಅರ್ಪಿಸಿ ಸಮುದ್ರ ಪೂಜೆ ನಡೆಸಿದ್ದಾರೆ.

ಮೀನುಗಾರಿಕೆಗೆ ರೆಡಿ
ಯಾಂತ್ರೀಕೃತ ಮೀನುಗಾರಿಕೆ ಅವಧಿ ಮುಗಿಯುತ್ತಿದ್ದಂತೆ  ಕರಾವಳಿ ಭಾಗದಲ್ಲಿ ಸಾಂಪ್ರ ದಾಯಿಕ ನಾಡದೋಣಿ ಮೀನು ಗಾರಿಕೆ ಪದ್ಧತಿ ಆರಂಭಗೊಳ್ಳು ತ್ತದೆ. ಈಗಾಗಲೇ ಮೀನು ಗಾರಿಕೆಗೆ ಬಳಸುವ ಬಲೆಗಳನ್ನು ಜೋಡಿಸುವ ಕಾಯಕ ಧಾರವನ್ನು ಮುಗಿಸಿ ಬಲೆಗಳನ್ನು ದೋಣಿಗೆ ತುಂಬಿಸಿ ಕಡಲಿಗಿಳಿಯಲು ಸಜ್ಜಾಗಿ ನಿಂತಿದ್ದಾರೆ.

ಸಹಕಾರಿ ತತ್ತ Ì
ಉಡುಪಿಯ ಮಲ್ಪೆ, ಕಾಪು, ಉಚ್ಚಿಲ, ಮಟ್ಟು, ಪಡುಕರೆ, ತೊಟ್ಟಂ, ಹೂಡೆ ಬೆಂಗ್ರೆ ಮುಂತಾದೆಡೆಗಳಲ್ಲಿ ನಾಡದೋಣಿ ಮೀನುಗಾರಿಕೆ ಹರಡಿಕೊಂಡಿದೆ. ಪ್ರತಿನಿತ್ಯ ಬೆಳಗ್ಗೆ ಮೀನುಗಾರಿಕೆಗೆ ತೆರಳುವ ಅವರು ಅದೇ ದಿನ ಸಂಜೆ ವಾಪಸಾಗುತ್ತಾರೆ.  ವರ್ಷದ 10 ತಿಂಗಳು ಯಾಂತ್ರೀಕೃತ ಬೋಟ್‌ಗಳಲ್ಲಿ ಕಾರ್ಮಿಕರಾಗಿ ದುಡಿ ಯುವ ಇವರು ಮಳೆಗಾಲದ ಎರಡು ತಿಂಗಳು ನಾಡದೋಣಿಯಲ್ಲಿ ಮಾಲಕ ರಾಗಿ ಮೀನುಗಾರಿಕೆ ನಡೆಸುತ್ತಾರೆ.  ಈ ಮೀನುಗಾರಿಕೆಯಿಂದ ಬಂದ ಲಾಭವನ್ನು ಎಲ್ಲರೂ ಸಮಾನವಾಗಿ ಹಂಚಿಕೊಳ್ಳುತ್ತಾರೆ. ಸಹಕಾರಿ ತತ್ವದಡಿಯಲ್ಲಿ ಮೀನುಗಾರಿಕೆ ಮಂಗಳೂರಿನಿಂದ ಗಂಗೊಳ್ಳಿಯ ವರೆಗೆ‌ ನಡೆಯುತ್ತಿದೆ. 

40 ಗುಂಪುಗಳ ಮೀನುಗಾರಿಕೆ
ಕಾಪುವಿನಿಂದ ಕೋಡಿಬೆಂಗ್ರೆಯ ವರೆಗೆ ಒಟ್ಟು  40 ಡಿಸ್ಕೋ ಫಂಡ್‌ಗಳಿವೆ. ಅಂದರೆ 40 ಗುಂಪುಗಳು ಮೀನುಗಾರಿಕೆ ನಡೆಸುತ್ತವೆ. ಒಂದು ಗುಂಪಿನಲ್ಲಿ ಕನಿಷ್ಠ  35 ಗರಿಷ್ಠ 60 ಮಂದಿ ಇರುತ್ತಾರೆ. 800ಕ್ಕೂ ಅಧಿಕ ಟ್ರಾಲ್‌ದೋಣಿಗಳು, 30 ಕೈರಂಪಣಿ ದೋಣಿಗಳು ಮಳೆಗಾಲದಲ್ಲಿ ಮೀನುಗಾರಿಕೆ ನಡೆಸುತ್ತವೆ.  ಸುಮಾರು 30 ಸಾವಿರ ಮಂದಿ ಮೀನುಗಾರರು ನೇರವಾಗಿ ನಾಡದೋಣಿ ಮೀನುಗಾರಿಕೆಯಲ್ಲಿ  ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕರ ರಹಿತ ಸೀಮೆಎಣ್ಣೆ  ಪ್ರಮಾಣ ಹೆಚ್ಚಳಕ್ಕೆ ಆಗ್ರಹ
ನಾಡದೋಣಿ ಮೀನುಗಾರಿಕೆಗೆ ಸರಕಾರ ನೀಡುತ್ತಿರುವ ಕರರಹಿತ ಸೀಮೆಎಣ್ಣೆಯ ಪ್ರಮಾಣವನ್ನು ತಿಂಗಳಿಗೆ 400 ಲೀ.ಗೆ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದುವರೆಗೂ ಈಡೇರಲಿಲ್ಲ.  ಪ್ರಸ್ತುತ ತಿಂಗಳಿಗೆ 185 ಲೀ. ಮಾತ್ರ ನೀಡಲಾಗುತ್ತಿದ್ದು ನಾಡದೋಣಿ ಒಂದು ಟ್ರಿಪ್‌ ಮೀನುಗಾರಿಕೆ ನಡೆಸಬೇಕಿದ್ದರೂ ಕನಿಷ್ಠ  100ರಿಂದ 150 ಲೀ. ಅಗತ್ಯವಿದೆ. ಹೊಸ ಸರಕಾರ ಮೀನುಗಾರರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕರರಹಿತ ಸೀಮೆ ಎಣ್ಣೆಯ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿದ್ದಾರೆ. 

ಸಿಗಡಿ ಮೀನು ದೊರೆತರೆ ಲಾಭ
ಕಳೆದ ವರ್ಷ ನಾಡದೋಣಿ ಮೀನುಗಾರಿಕೆ ಹೆಚ್ಚು ಆಶಾದಾಯಕವಾಗಿರಲಿಲ್ಲ.  ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆ ನಡೆಸಲು ಸಿಗುವ ದಿನ ಬಹಳ ಕಡಿಮೆ. ಬೆಲೆಬಾಳುವ ಸಿಗಡಿ ಮೀನು ದೊರೆತರೆ ಲಾಭದಾಯಕ ಮೀನುಗಾರಿಕೆ. ಉಳಿದಂತೆ ಬಂಗುಡೆ, ಬೂತಾಯಿ ಇನ್ನಿತರ ಸಣ್ಣಪುಟ್ಟ ಮೀನುಗಳು ದೊರೆತರೆ ಪ್ರಯೋಜನವಿಲ್ಲ. ಈ ಸಲದ ವಾತಾವರಣವನ್ನು ನೋಡುವಾಗ ಸಿಗಡಿ ಮೀನು ಸಿಗುವ ನಿರೀಕ್ಷೆ ಇದೆ. 
– ಕೃಷ್ಣ ಸುವರ್ಣ, ಪಡುತೋನ್ಸೆ ಬೆಂಗ್ರೆ

ಸಮುದ್ರಪೂಜೆ ಆದ ಮೇಲೆ ಮೀನುಗಾರಿಕೆ
ಮಲ್ಪೆಯ ನಾಡದೋಣಿ ಮೀನುಗಾರ ಸಂಘದ ವತಿಯಿಂದ ಶುಕ್ರವಾರ ಸಮುದ್ರಪೂಜೆ ನಡೆಸಲಾಗಿದೆ. ಆ ದಿನದಿಂದ ಯಾವತ್ತು ಬೇಕಾದರೂ ಮೀನುಗಾರಿಕೆಗೆ ತೆರಳಬಹುದಾಗಿದೆ.  
– ಜನಾರ್ದನ ತಿಂಗಳಾಯ, ಅಧ್ಯಕ್ಷರು, ಮಲ್ಪೆ ನಾಡದೋಣಿ ಮೀನುಗಾರರ ಸಂಘ

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.