ಕಣ್ಮನ ಸೆಳೆದ ಸಾಂಪ್ರದಾಯಿಕ ರಂಗೋಲಿ ಸೊಬಗು


Team Udayavani, Jan 18, 2019, 12:50 AM IST

rangoli.jpg

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಹಿಳಾ ಸಂಸ್ಕೃತಿ ಉತ್ಸವದ ಅಂಗವಾಗಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇಗುಲದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ಚಿತ್ರಕಲಾ ಶಿಬಿರ ಮತ್ತು ರಂಗೋಲಿ ಸ್ಪರ್ಧೆ 2019’ರಲ್ಲಿ  ಚುಕ್ಕೆ ಮತ್ತು ಫ್ರೀ ಹ್ಯಾಂಡ್‌ ಎರಡೂ ವಿಧದ ರಂಗೋಲಿಗಳು ಗಮನ ಸೆಳೆದವು. 

ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಒಟ್ಟು 31 ಮಂದಿ, ಚಿತ್ರಕಲಾ ಸ್ಪರ್ಧೆಯಲ್ಲಿ 13 ಮಂದಿ ಪಾಲ್ಗೊಂಡರು. ಚಿತ್ರಕಲಾ ಸ್ಪರ್ಧೆ “ಮಹಿಳೆ ಮತ್ತು ಸಂಸ್ಕೃತಿ’ ವಿಷಯವನ್ನಾಧರಿಸಿ ನಡೆಯಿತು. ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಪಿಪಿಸಿ ಕಾಲೇಜಿನ ವಿದ್ಯಾರ್ಥಿ ಪ್ರಸನ್ನ ಎಚ್‌.ಚಿಟಾ³ಡಿ ಮಾತನಾಡಿ “ತಾಯಿಯಿಂದ ರಂಗೋಲಿ ಕಲೆಯ ಪ್ರಾಥಮಿಕ ಹಂತ ಕಲಿತೆ. ಅನಂತರ ಉಡುಪಿ ಗೀತಾ ಮಂದಿರದಲ್ಲಿ ಗುರುಗಳಾದ ಮಹೇಶ್‌ ಅವರಿಂದ ತರಬೇತಿ ಪಡೆದುಕೊಂಡಿ ದ್ದೇನೆ. ಮನೆಯಲ್ಲಿ ಪ್ರತಿದಿನ ರಂಗೋಲಿ ಬಿಡಿಸುತ್ತೇನೆ. ಅನೇಕ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಬಹುಮಾನ ಪಡೆದುಕೊಂಡಿ ದ್ದೇನೆ. ಉಳಿದವರಿಗೂ ಬಹುಮಾನ ಸಿಗಲಿ ಎಂಬ ಕಾರಣಕ್ಕೆ ಕೆಲವು ಸ್ಪರ್ಧೆಗಳಿಂದ ದೂರವುಳಿಯುತ್ತೇನೆ’ ಎಂದರು. 

ಅಪರೂಪ
“ರಂಗೋಲಿ ಸ್ಪರ್ಧೆಗಳು ಅಪರೂಪ. ಮನೆಯಂಗಳದಲ್ಲಿ ರಂಗೋಲಿ ಬಿಡಿಸುವ ಸಂಪ್ರದಾಯ ಹಲವೆಡೆ ಇದೆ. ಇದರಿಂದ  ಅವರ ಪ್ರತಿಭೆ ಹೊರ ಜಗತ್ತಿಗೂ ತಿಳಿಯಲು, ನಮ್ಮ ಉತ್ಕೃಷ್ಟ ಕಲಾಪ್ರಕಾರ ಉಳಿಯಲು ಇಂತಹ ಸ್ಪರ್ಧೆ ಪೂರಕ ವಾಗಿವೆ ಎಂದು ಉಡುಪಿ ಜಂಗಮಮಠ ಕಲಾ ವಿದ್ಯಾಲಯ ಚಿತ್ರಕಲಾ ಮಂದಿರದ ಪ್ರಾಂಶುಪಾಲ ರಾಜೇಂದ್ರ ತ್ರಾಸಿ ಹೇಳಿದರು.

“ನಾನು ಮನೆಯಲ್ಲಿ ಪ್ರತಿದಿನ ರಂಗೋಲಿ ಹಾಕುತ್ತೇನೆ. ಆದರೆ ಸ್ಪರ್ಧೆ ಯಲ್ಲಿ ಪಾಲ್ಗೊಳ್ಳಲು ಹಿಂಜರಿಯುತ್ತಿದ್ದೆ. ಇಲ್ಲಿ ಬಂದು ಹೊಸ ಹೊಸ ಮಾದರಿ, ವಿನ್ಯಾಸದ ರಂಗೋಲಿ ನೋಡಿ ಮತ್ತಷ್ಟು ತಿಳಿದುಕೊಳ್ಳುವಂತಾಯಿತು’  ಎಂದು ಮತ್ತೋರ್ವ ಸ್ಪರ್ಧಾಳು ಗಾಯತ್ರಿ ಬನ್ನಂಜೆ  ತಿಳಿಸಿದರು. 

ಅಂಬಲಪಾಡಿ ದೇಗುಲದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌ ಕಾರ್ಯಕ್ರಮ ಉದ್ಘಾಟಿಸಿದರು.  ಜಂಗಮಮಠ ಕಲಾ ವಿದ್ಯಾಲಯ ಚಿತ್ರಕಲಾ ಮಂದಿರದ ಯು.ಸಿ.ನಿರಂಜನ್‌, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ರಾಘವೇಂದ್ರ ಅಮೀನ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ಚಂದ್ರಶೇಖರ್‌ ಸ್ವಾಗತಿಸಿ ದರು. ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ನಿರ್ವಹಿಸಿದರು. ತ್ರಿವರ್ಣ ವಂದಿಸಿದರು.

ಮಹಿಳೆಯಿಂದ ಸಂಸ್ಕೃತಿ ಉಳಿವು
ನಮ್ಮ ಉನ್ನತ‌ ಸಂಸ್ಕೃತಿ ಉಳಿಯಲು ಇಂತಹ ಸ್ಪರ್ಧೆ  ಅಗತ್ಯ. ಮಹಿಳೆ ಯರು ತಾವು ಸಂಸ್ಕೃತಿ ಪಾಲಿಸುವ ಜತೆಗೆ ತಮ್ಮ ಮಕ್ಕಳಿಗೂ ಹೇಳಿಕೊಟ್ಟಾಗ ಮಾತ್ರ ಅದು ಉಳಿಯು ತ್ತದೆ. ರಂಗೋಲಿ ಬಿಡಿಸುವುದು, ದೀಪದ ಬತ್ತಿ ಸಿದ್ಧಪಡಿಸುವುದು ಮೊದಲಾದ ಚಟುವಟಿಕೆಗಳಿಂದ ಕೈಗಳಿಗೆ ಉತ್ತಮ ವ್ಯಾಯಾಮವೂ ದೊರೆಯುತ್ತದೆ.

-ಡಾ| ನಿ.ಬೀ. ವಿಜಯ ಬಲ್ಲಾಳ್‌, ಅಂಬಲಪಾಡಿ ದೇಗುಲದ ಧರ್ಮದರ್ಶಿ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.