ಬಾರಕೂರು ಪೇಟೆಯಲ್ಲಿ ಪ್ರತಿನಿತ್ಯ ಟ್ರಾಫಿಕ್‌ ಸಮಸ್ಯೆ


Team Udayavani, Apr 30, 2019, 6:30 AM IST

barkur

ಬ್ರಹ್ಮಾವರ: ತುಳುನಾಡ ರಾಜಧಾನಿ ಖ್ಯಾತಿಯ ಬಾರಕೂರಿನಲ್ಲಿ ಪ್ರತಿನಿತ್ಯ ಟ್ರಾಫಿಕ್‌ ಜಾಮ್‌ ಸಮಸ್ಯೆ ತಲೆದೋರುತ್ತಿದೆ. ಪೇಟೆ ವಿಸ್ತರಣೆ ಆಗದಿರುವುದು ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.

ಮುಖ್ಯವಾಗಿ ಕಲ್ಚಪ್ರ ಬಳಿ ವಾಹನ ದಟ್ಟಣೆಯಿಂದ ಸವಾರರು ಪರದಾಡುತ್ತಿದ್ದಾರೆ. ಹೊಸ್ಕೆರೆಯಿಂದ ಕತ್ತಲೆಬಸದಿ ತನಕವೂ ಸಮಸ್ಯೆ ಗಂಭೀರವಾಗಿದೆ.

ರಾಜ ವೈಭವ
ರಾಜ ಆಳ್ವಿಕೆ ಅವಧಿಯಲ್ಲಿ ವೈಭವದ ದಿನಗಳನ್ನು ಕಂಡ ನಗರಿ ಬಾರಕೂರು. ಪ್ರತಿನಿತ್ಯ ಉತ್ಸವ ನಡೆಯಲೆಂದು 365 ದೇವಸ್ಥಾನಗಳನ್ನು ಸ್ಥಾಪಿಸಲಾಗಿತ್ತು ಎನ್ನುವುದು ಇತಿಹಾಸ. ಹಲವು ವೈಶಿಷ್ಟÂಗಳಿಂದ ಪಾರಂಪರಿಕ ನಗರಿಯಾಗಿ ಗುರುತಿಸಿ ಕೊಳ್ಳುವ ಹಂತದಲ್ಲಿದೆ. ಆದರೆ ಬಾರಕೂರಿನಲ್ಲಿ ಅತೀ ಅವಶ್ಯವೆನಿಸಿದ ಸಂಚಾರೀ ವ್ಯವಸ್ಥೆ ಮಾತ್ರ ಹದಗೆಟ್ಟಿದೆ.

ಅಭಿವೃದ್ದಿಯತ್ತ..
ಬಾರಕೂರಿನಲ್ಲಿ ಜೀರ್ಣಾವಸ್ಥೆ ತಲುಪಿದ ಹಲವು ದೇವಸ್ಥಾನಗಳು ಜೀರ್ಣೋದ್ಧಾರಗೊಳ್ಳುತ್ತಿವೆ. ಅನೇಕ ಸಮುದಾಯದವರು ಕುಲದೇವರಾಗಿ ಆರಾಧಿಸುತ್ತಿದ್ದಾರೆ. ಪರವೂರಿನಿಂದ ಬಾರಕೂರಿಗೆ ಆಗಮಿಸುವವರ ಸಂಖ್ಯೆ ಹೆಚ್ಚುತ್ತಿದೆ. ಈ ಹಂತದಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವುದು ಆವಶ್ಯಕ.

ಮದುವೆ ಸೀಸನ್‌
ಬಾರಕೂರಿನ ಹಲವು ದೇವಸ್ಥಾನಗಳಲ್ಲಿ ಸುಸಜ್ಜಿತ ಸಭಾಭವನಗಳಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಮದುವೆ, ಉಪನಯನ ಇನ್ನಿತರ ಕಾರ್ಯಕ್ರಮಗಳು ಜರಗುತ್ತವೆ. ಬೇಸಗೆ ಅವಧಿಯಲ್ಲಿ ಸಾವಿರಾರು ವಾಹನಗಳು ಹೆಚ್ಚುವರಿಯಾಗಿ ಸಂಚರಿಸುವುದರಿಂದ ಸಂಚಾರೀ ಸಮಸ್ಯೆ ತೀವ್ರಗೊಂಡಿದೆ.

ಕೊರತೆಗಳ ಸಾಲು
ಬಾರಕೂರಿನಲ್ಲಿ ಸುಸಜ್ಜಿತ ಬಸ್‌ ತಂಗುದಾಣವಿಲ್ಲ, ವ್ಯವಸ್ಥಿತ ರಿಕ್ಷಾ ನಿಲ್ದಾಣವಿಲ್ಲ, ಶೌಚಾಲಯ ಉಪಯೋಗಿಸುವ ಸ್ಥಿತಿಯಲ್ಲಿಲ್ಲ. ಹೀಗೆ ಬಾರಕೂರಿನಲ್ಲಿ ಸಮಸ್ಯೆಗಳೇ ಕಣ್ಣಿಗೆ ರಾಚುತ್ತಿದೆ.

ಸಾವಿರಾರು ವಿದ್ಯಾರ್ಥಿಗಳು
ಬಾರಕೂರಿನಲ್ಲಿ ಪ್ರಾಥಮಿಕ ಶಾಲೆಯಿಂದ ಸ್ನಾತಕೋತ್ತರ ಪದವಿ ತನಕ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಾರಕೂರು ಪೇಟೆಯಿಂದ ಕಾಲೇಜು ತನಕ ಇಕ್ಕಟ್ಟಾದ ರಸ್ತೆಯಲ್ಲಿ ಪ್ರಾಣಭಯದಿಂದಲೇ ಸಂಚರಿಸುವಂತಾಗಿದೆ. ಅಲ್ಲದೆ ನೂರಾರು ವಿದ್ಯಾರ್ಥಿಗಳು ರಸ್ತೆಯಲ್ಲೇ ನಿಂತು ಬಸ್‌ಗಾಗಿ ಕಾಯುವ ಪರಿಸ್ಥಿತಿ ಇದೆ.

ಮತ್ತಷ್ಟು ಉಲ್ಬಣ
ಪ್ರಸ್ತುತ ಆಗುಂಬೆ ಘಾಟಿ ರಸ್ತೆ ದುರಸ್ತಿಯಲ್ಲಿರುವುದರಿಂದ ಹೆಚ್ಚಿನ ವಾಹನಗಳು ಬ್ರಹ್ಮಾವರ ಬಾರಕೂರು ಸಿದ್ಧಾಪುರ ಮೂಲಕ ಸಂಚರಿಸುತ್ತಿವೆ. ಇದರಿಂದ ಬ್ರಹ್ಮಾವರ ಆಕಾಶವಾಣಿ, ಬಾರಕೂರು ಪೇಟೆ ಸೇರಿದಂತೆ ಹಲವು ಕಡೆ ಸಂಚಾರಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ.

ಉತ್ಸವ ಸಾಲದು
ಬಾರಕೂರಿನಲ್ಲಿ ಕಳೆದ ಜನವರಿಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಆಳುಪೋತ್ಸವ ವಿಜೃಂಭಣೆಯಿಂದ ಜರಗಿತ್ತು. ಆದರೆ ಉತ್ಸವಗಳ ಜತೆಗೆ ಬಾರಕೂರಿನ ಸಮಗ್ರ ಅಭಿವೃದ್ಧಿ ಕಡೆಗೂ ಗಮನ ಹರಿಸಬೇಕೆಂದು ಜನತೆ ಆಶಿಸಿದ್ದಾರೆ.

ಮೇಲ್ದರ್ಜೆಗೇರಿಸಿ
ಬ್ರಹ್ಮಾವರ ಜನ್ನಾಡಿ ಜಿಲ್ಲಾ ಮುಖ್ಯರಸ್ತೆಯನ್ನು ರಾಜ್ಯಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕೆನ್ನುವ ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಈ ರಸ್ತೆಯನ್ನು ರಾಜ್ಯಹೆದ್ದಾರಿಯಾಗಿ ಪರಿವರ್ತಿಸುವುದರಿಂದ ಸುಗಮ ಸಂಚಾರ ಸಾಧ್ಯವಿದೆ.

ತುರ್ತು ಗಮನ ಹರಿಸಿ
ಬಾರಕೂರು ಪೇಟೆಯಲ್ಲಿ ತೀವ್ರ ಟ್ರಾಫಿಕ್‌ ಜಾಮ್‌ ಸಮಸ್ಯೆ ಇದೆ. ಜನ ಸಂಚಾರ, ವಾಹನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ಪೇಟೆ ವಿಸ್ತರಣೆಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವತ್ತ ತುರ್ತು ಗಮನ ಹರಿಸಿ.
-ಸತೀಶ್‌ ಎಸ್‌. ಅಮೀನ್‌ ಬಾರಕೂರು

  • ಪ್ರವೀಣ್ ಮದ್ದೂರ್

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.