ಟ್ರಾಫಿಕ್ ನಿಯಮಾವಳಿ ಉಲ್ಲಂಘನೆ: ನಗರದಲ್ಲಿ 63 ಲ.ರೂ. ದಂಡ ಸಂಗ್ರಹ!
Team Udayavani, Dec 8, 2022, 11:28 AM IST
ಉಡುಪಿ : ನಗರದಲ್ಲಿ ಟ್ರಾಫಿಕ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ 2022ರ ಜನವರಿಯಿಂದ ನವೆಂಬರ್ ಅಂತ್ಯದವರೆಗೆ 63,85,100 ರೂ. ದಂಡ ಸಂಗ್ರಹ ಮಾಡಲಾಗಿದೆ.
ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ಸಂಚಾರ ಸಹಿತ ವಿವಿಧ ರೀತಿಯಲ್ಲಿ ನಿಯ ಮಾವಳಿ ಉಲ್ಲಂ ಸುತ್ತಿದ್ದವರಿಂದ ದಂಡ ಸಂಗ್ರಹ ಮಾಡಲಾಗಿದೆ.
ಟ್ರಾಫಿಕ್ ದಟ್ಟಣೆ ಪ್ರದೇಶಗಳು
ನಗರದ ಸಿಟಿ ಬಸ್ ನಿಲ್ದಾಣ, ಕೆಎಂ ಮಾರ್ಗ, ತ್ರಿವೇಣಿ ಸರ್ಕಲ್, ನಗರಸಭೆಯ ಎದುರುಗಡೆ, ಶಿರಿಬೀಡು ಪ್ರದೇಶಗಳಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ಕಂಡುಬರುತ್ತಿದೆ. ಕೆಲವೆಡೆ ಈಗಾಗಲೇ ಮಾರ್ಕಿಂಗ್ ಇದೆ. ಮಾರ್ಕಿಂಗ್ ಇಲ್ಲದ ಕಡೆಗಳಲ್ಲಿ ಮಾರ್ಕಿಂಗ್ ಮಾಡಿ ಅನಂತರ ವಾಹನ ಸವಾರರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಲಿದ್ದಾರೆ.
ವಾಹನ ಆಲೆóàಷನ್ ಮಾಡಿದರೂ ದಂಡ!
ವಾಹನಗಳಲ್ಲಿ ಹೆಚ್ಚುವರಿ ಹಾರ್ನ್ಗಳ ಅಳವಡಿಕೆ, ಟಿಂಟ್ ಗ್ಲಾಸ್ಗಳ ಅಳವಡಿಕೆ, ಹೆಲೋಜಿನ್ ಲೈಟ್ಗಳನ್ನು ಅಳವಡಿಸುವುದು, ಚೀನ ಲೈಟ್ಗಳನ್ನು ಅಳವಡಿಸುವುದು, ಸ್ಟಿಕ್ಕರ್ಗಳ ಅಳವಡಿಕೆ ಕಂಡು ಬಂದರೆ ಅಂತಹ ವಾಹನಗಳಿಗೂ 500 ರೂ.ಗಳ ದಂಡ ವಿಧಿಸಲಾಗುತ್ತದೆ.
ವಾಹನ ಸವಾರರು ಎಲ್ಲ ರೀತಿಯ ಮೂಲ ದಾಖಲೆಗಳನ್ನು ವಾಹನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ದಂಡ ಪಾವತಿಸಬೇಕಾದುದು ಖಚಿತವಾಗಲಿದೆ.
ವಿವಿಧೆಡೆ ತಪಾಸಣೆ
ನಗರದ ಕಲ್ಸಂಕ ವೃತ್ತ, ಎಂಜಿಎಂ ಕಾಲೇಜು, ಇಂದ್ರಾಳಿ ಬಳಿ, ಕರಾವಳಿ ಬೈಪಾಸ್, ಶಿರಿಬೀಡು ಜಂಕ್ಷನ್, ಸಂತೆಕಟ್ಟೆ, ಡಯನಾ ಸರ್ಕಲ್, ಅಂಬಲಪಾಡಿ ಜಂಕ್ಷನ್ಗಳಲ್ಲಿ 2ರಿಂದ 3 ಮಂದಿ ಪೊಲೀಸ್ ಸಿಬಂದಿ ತಪಾಸಣೆ ನಡೆಸುತ್ತಿದ್ದಾರೆ. ಸೀಟ್ಬೆಲ್ಟ್ ಹಾಕದಿರುವುದು ಹಾಗೂ ಹೆಲ್ಮೆಟ್ ಧರಿಸದಿರುವ ಬಗ್ಗೆ ಹೆಚ್ಚಿನವರು ದಂಡ ಪಾವತಿಸುತ್ತಿರುವ ಘಟನೆ ನಡೆಯುತ್ತಿದೆ.
ಸ್ವಯಂ ಜಾಗೃತಿ ಅಗತ್ಯ
ನಗರದ ಆಯಾಕಟ್ಟಿನ ಪ್ರದೇಶಗಳಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿದೆ. ಈ ವರ್ಷ ಈಗಾಗಲೇ 63 ಲ.ರೂ.ಗಳಷ್ಟು ದಂಡ ಸಂಗ್ರಹ ಮಾಡಲಾಗಿದೆ. ಸಂಚಾರ ನಿಯಮಾವಳಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಸವಾರರು ಸ್ವಯಂ ಜಾಗೃತರಾಗುವ ಅಗತ್ಯವಿದೆ. ಸಂಚಾರದ ಸಂದರ್ಭದಲ್ಲಿ ಎಲ್ಲ ರೀತಿಯ ದಾಖಲೆಗಳನ್ನು ಕಡ್ಡಾಯವಾಗಿ ಇರಿಸಿ ಕೊಳ್ಳಬೇಕಿದೆ.
-ಸಕ್ತಿವೇಲು, ಎಎಸ್ಐ, ಸಂಚಾರ ಪೊಲೀಸ್ ಠಾಣೆ ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು