ರೈಲು ಢಿಕ್ಕಿ: 60 ಅಡಿ ಆಳಕ್ಕೆ ಬಿದ್ದ ಗೂಳಿ ರಕ್ಷಣೆ


Team Udayavani, Mar 9, 2017, 3:35 PM IST

09-UDUPI-6.jpg

ಉಡುಪಿ: ಉಡುಪಿ ನಗರದ ಹೊರವಲಯದಲ್ಲಿರುವ ಕುಕ್ಕಿಕಟ್ಟೆ ರೈಲ್ವೇ ಮೇಲ್ಸೇತುವೆಯ ಸಮೀಪದಲ್ಲಿ ರೈಲು ಢಿಕ್ಕಿ ಹೊಡೆದ ಪರಿಣಾಮ ಸರಿಸುಮಾರು 60 ಅಡಿ ಕಂದಕಕ್ಕೆ ಬಿದ್ದು ಅಪಾಯದಲ್ಲಿ ಸಿಲುಕಿಕೊಂಡಿದ್ದ ಗೂಳಿಯನ್ನು ಬುಧವಾರ ಬೆಳಗ್ಗೆ ಸಮಾಜ ಸೇವಕರ ತಂಡವು ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಅಲೆವೂರು ಯುವಕ ಸಂಘದ ಸದಸ್ಯರು ಮಂಗಳವಾರ ಸಮಾಜ ಸೇವಕ ವಿಶು ಶೆಟ್ಟಿ ಅವರಿಗೆ ವಿಷಯ ಮುಟ್ಟಿಸಿದ್ದರು. ಅದೇ ದಿನ ಘಟನಾ ಸ್ಥಳಕ್ಕೆ ತೆರಳಿ ನೋಡಿದಾಗ ಗೂಳಿಯ ಕಾಲಿಗೆ ಪೆಟ್ಟಾಗಿ ನಡೆದಾಡಲಾಗದ ಪರಿಸ್ಥಿತಿಯಲ್ಲಿ ಇತ್ತು. ಅಲ್ಲಿಯೇ ಉಪಚಾರಗಳನ್ನು ಮಾಡಿ ಮೇವು- ನೀರಿನ ವ್ಯವಸ್ಥೆಗೊಳಿಸಿದರು. ಕತ್ತಲಾಗಿದ್ದರಿಂದ ಗೂಳಿ ರಕ್ಷಣಾ ಕಾರ್ಯಾಚರಣೆಯನ್ನು ಮರುದಿನ ಅಂದರೆ ಬುಧವಾರ ನಸುಕಿನ ಸಮಯಕ್ಕೆ ನಡೆಸಲು ನಿರ್ಧರಿಸಲಾಯಿತು.

ಸಮಾಜಸೇವಕ ವಿಶು ಶೆಟ್ಟಿ ಅವರ ಮುಂದಾಳತ್ವದಲ್ಲಿ ಬೆಳಗ್ಗೆ 6.30ಕ್ಕೆ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಯಿತು. ಕ್ರೇನ್‌, ಜೇಸಿಬಿ ಯಂತ್ರದ ಸಹಾಯ, ಸಾಮಾಜಿಕ ಕಾರ್ಯಕರ್ತ ಕೃಷ್ಣ ಅಂಬಲಪಾಡಿ, ಪಶು ವೈದ್ಯ ಡಾ| ಸಂದೀಪ್‌ ಶೆಟ್ಟಿ ಮತ್ತು ಅಲೆವೂರು ಯುವಕ ಸಂಘದ ಸದಸ್ಯರ ಸಹಕಾರದೊಂದಿಗೆ ಗೂಳಿಗೆ ವೈದ್ಯರಿಂದ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು.

“3 ಗಂಟೆಯ ಕಾರ್ಯಾಚರಣೆ’
ನೆಲಮಟ್ಟದಿಂದ ಸುಮಾರು 60 ಅಡಿ ಆಳದಲ್ಲಿ ಗೂಳಿ ಇದ್ದ ಕಾರಣ, ಸ್ಥಳಕ್ಕೆ ಹೋಗಲು ಕ್ರೇನ್‌ಗೆ ರಸ್ತೆಯ ಸಮಸ್ಯೆ ಎದುರಾಯಿತು. ಜೆಸಿಬಿ ಯಂತ್ರದ ಮುಖಾಂತರ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿ ಕ್ರೇನ್‌ಗೆ ದಾರಿ ಮಾಡಿಕೊಡಲಾಯಿತು. ಗೂಳಿಯ ಸೊಂಟದ ಭಾಗಕ್ಕೆ ಬೆಲ್ಟ್ ಅಳವಡಿಸಿ ಕ್ರೇನ್‌ ಮುಖಾಂತರ ಮೇಲಕ್ಕೆತ್ತುವ ಪ್ರಯತ್ನ ನಡೆಯುತ್ತಿದ್ದಂತೆಯೇ ನೋವಿನ ಕಾರಣದಿಂದ ಗೂಳಿ ಒದ್ದಾಟ ಮಾಡಲಾರಂಭಿಸಿತು. ಕೆಳಗೆ ಬೀಳುವ ಅಪಾಯವಿದ್ದ ಕಾರಣ ಗೂಳಿಯನ್ನು ನಿಧಾನವಾಗಿ ಕೆಳಗಿಳಿಸಲಾಯಿತು. ಆನಂತರದಲ್ಲಿ ವೈದ್ಯರ ಸಹಾಯದಿಂದ ಅರವಳಿಕೆ ಚುಚ್ಚು ಮದ್ದು ನೀಡಿ ಗೂಳಿಯನ್ನು ಯಶಸ್ವಿಯಾಗಿ ಮೇಲಕ್ಕೆ ಎತ್ತಲಾಯಿತು. ಸುಮಾರು ಮೂರು ಗಂಟೆಗಳ ಕಾಲ ಗೂಳಿ ರಕ್ಷಣಾ ಕಾರ್ಯಾಚರಣೆ ನಡೆಯಿತು.

“ಪಾಲನೆಯ ಹೊಣೆ, ಉಚಿತ ಸೇವೆ’
ಮುಂದಿನ ದಿನಗಳಲ್ಲಿ ವಾರಸುದಾರರು ಇಲ್ಲದ ಗೂಳಿ ಪಾಲನೆಯ ಹೊಣೆಯನ್ನು ಅಲೆವೂರು ಯುವಕ ಸಂಘ ವಹಿಸಿಕೊಂಡಿದೆ. ಪಶು ವೈದ್ಯ ಡಾ| ಸಂದೀಪ್‌ ಶೆಟ್ಟಿ ಅವರು ಗೂಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ. ಗೂಳಿ ರಕ್ಷಣಾ ಕಾರ್ಯಾಚರಣೆಗೆ ಜೇಸಿಬಿ ಯಂತ್ರವನ್ನು ಅಭಿನಂದನ್‌ ಶ್ರೀಧರ್‌ ಶೆಟ್ಟಿ ಅವರು ಉಚಿತವಾಗಿ ಒದಗಿಸಿದರು. ಕ್ರೇನ್‌ ಅನ್ನು ಶ್ರೀದೇವಿ ಕ್ರೇನ್‌ನ ಮಾಲಕ ಸುಧೀರ್‌ ಶೆಟ್ಟಿ ಉಚಿತವಾಗಿ ನೀಡಿದರು. ಡಾ|ಸಂದೀಪ್‌ ಶೆಟ್ಟಿ ಉಚಿತ ವೈದ್ಯಕೀಯ ಸೇವೆ ನೀಡಿದರು.

“ಗೂಳಿಗಳಿಗೆ ಸೂಕ್ತ ವ್ಯವಸ್ಥೆ-ಆಗ್ರಹ’
ವಾರಸುದಾರರಿಲ್ಲದ ಅಲೆಮಾರಿ ಗೋವುಗಳಿಗೆ ಆಶ್ರಯ ನೀಡುವ ಸೂಕ್ತವಾದ ವ್ಯವಸ್ಥೆಯನ್ನು ಸರಕಾರ ಮಾಡಬೇಕಿದೆ. ಬೀದಿಯಲ್ಲಿದ್ದರೆ ರಸ್ತೆ ಅಪಘಾತಗಳಿಂದ ಸಾವು- ನೋವುಗಳಿಗೆ ಕಾರಣವಾಗುತ್ತವೆ. ಗೋವು ಕಳ್ಳರಿಂದಾಗಿ ಸಮಾಜದ ಆರೋಗ್ಯವು ಕೆಡುತ್ತದೆ. ಹಾಗಾಗಿ ಸರಕಾರ, ಧಾರ್ಮಿಕ ಮುಖಂಡರು, ಜನನಾಯಕರು, ಅಧಿಕಾರಿ ವರ್ಗದವರು, ಸಾರ್ವಜನಿಕರು ಈ ವಿಚಾರದಲ್ಲಿ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ವಿಶು ಶೆಟ್ಟಿ ಹೇಳಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.