ಪ್ರಾಥಮಿಕ ಹಂತದಲ್ಲೇ ತರಬೇತಿಯಿಂದ ಸಾಧನೆ: ಡಾ| ಬಲ್ಲಾಳ್‌


Team Udayavani, Jun 5, 2019, 6:11 AM IST

ballal

ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಪ್ರಾಥಮಿಕ ಹಂತದಲ್ಲಿಯೇ ಯೋಜಿತ ತರಬೇತಿ ದೊರೆಯುವುದು ಅವಶ್ಯ ಎಂದು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಅಭಿಪ್ರಾಯಪಟ್ಟರು.

ಸೋಮವಾರ ಮಣಿಪಾಲದ ಮರೇನಾ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಬ್ರಿಡ್ಜ್ ಆಫ್ ನ್ಪೋರ್ಟ್ಸ್ ಸರಕಾರೇತರ ಸಂಸ್ಥೆಯ ಸಹಯೋಗದಲ್ಲಿ ಮಾಹೆಯ ಸೆಂಟರ್‌ ಫಾರ್‌ ನ್ಪೋರ್ಟ್ಸ್ ಸಾಯನ್ಸ್‌, ಮೆಡಿಸಿನ್‌ ಆ್ಯಂಡ್‌ ರಿಸರ್ಚ್‌ ವತಿಯಿಂದ ಉ.ಕ ಜಿಲ್ಲೆಯ ಸಿದ್ಧಿ ಜನಾಂಗದವರೂ ಸೇರಿದಂತೆ 18 ಮಂದಿ ಬುಡಕಟ್ಟು ಜನಾಂಗದ ಕ್ರೀಡಾಪ್ರತಿಭೆಗಳಿಗೆ ಜರಗಿದ 15 ದಿನಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬುಡಕಟ್ಟು ಮಕ್ಕಳಲ್ಲಿಯೂ ಪ್ರತಿಭೆಗೆ ಕೊರತೆ ಇಲ್ಲ. ಆದರೆ ಆ ಪ್ರತಿಭೆಗೆ ಪೂರಕವಾಗಿ ವೈಜ್ಞಾನಿಕ, ವ್ಯವಸ್ಥಿತ ಮತ್ತು ಅತ್ಯಾಧುನಿಕ ರೀತಿಯ ತರಬೇತಿ ದೊರೆತರೆ ಆ ಪ್ರತಿಭೆಯಿಂದ ಸಾಧನೆ ಮಾಡಲು ಸಾಧ್ಯ. ಮಾಹೆ ಕೇವಲ ಶಿಕ್ಷಣಕ್ಕೆ ಮಾತ್ರವಲ್ಲದೆ ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ಒಂದು ಭಾಗವಾಗಿ ಬುಡಕಟ್ಟು ಮಕ್ಕಳಿಗೂ ಇಲ್ಲಿನ ಕ್ರೀಡಾ ಸೌಲಭ್ಯಗಳ ಮೂಲಕ ಉನ್ನತ ಮಟ್ಟದ ಕ್ರೀಡಾ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂಥ ಸೌಲಭ್ಯಗಳು ಸಾಮಾನ್ಯ ಮಕ್ಕಳಿಗೂ ದೊರೆಯುವಂತಾಗಬೇಕು ಎಂಬ ಸಾಮಾಜಿಕ ಕಾಳಜಿಯಿಂದ ಮಾಹೆ ಈ ತರಬೇತಿ ಆಯೋಜಿಸಿದೆ. ಇಲ್ಲಿ ತರಬೇತಿ ಪಡೆದ ಮಕ್ಕಳು ಮುಂದಿನ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಂತಾಗಲಿ ಎಂದು ಡಾ| ಬಲ್ಲಾಳ್‌ ಹೇಳಿದರು.

ತರಬೇತುದಾರ ರಿಜ್ವಾನ್‌ ಅವರು ಮಾತನಾಡಿ, ತರಬೇತಿ ಪಡೆದ ಮಕ್ಕಳ ಪೈಕಿ ರವಿಕಿರಣ್‌ ಸಿದ್ದಿ 400 ಮೀಟರ್‌ ಓಟವನ್ನು 54 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದ್ದಾರೆ. ಶಾಲಿನಿ ಸಿದ್ದಿ 100 ಮೀಟರ್‌ ಓಟವನ್ನು 11 ಸೆಕುಂಡುಗಳಲ್ಲಿ ಹಾಗೂ ಶಿಜು 5,000 ಮೀಟರನ್ನು 17 ನಿಮಿಷದಲ್ಲಿ ಪೂರ್ಣಗೊಳಿಸಿದ್ದಾರೆ. ಇವರ ಗುರಿ ಮುಂದಿನ ಒಲಿಂಪಿಕ್ಸ್‌ ಆಗಿದೆ. ಇಲ್ಲಿ ನಾವು ನಿರೀಕ್ಷೆ ಮಾಡಿರುವುದಕ್ಕಿಂತ ಹೆಚ್ಚಿನ ಸೌಲಭ್ಯ, ಪ್ರೋತ್ಸಾಹ ದೊರೆತಿದೆ ಎಂದು ಹೇಳಿದರು.

ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗ, ಮಾಹೆ ಕ್ರೀಡಾ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌, ಸಹ ಕಾರ್ಯದರ್ಶಿ ಡಾ| ಶೋಭಾ, ಸಂಯೋಜಕ ಪಿಡ್ಡಿ ಡೇವಿಸ್‌ ಉಪಸ್ಥಿತರಿದ್ದರು. ನವನೀತ್‌ ಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.