ಬೀದಿಗೆ ಬಂದ ಬದುಕು, ಪರ್ಯಾಯ ವ್ಯವಸ್ಥೆ ಕಲ್ಪಿಸದಕ್ಕೆ ಆಕ್ರೋಶ​​​​​​​


Team Udayavani, May 8, 2018, 6:20 AM IST

0705uppe1-2.jpg

ಮರವಂತೆ: ತ್ರಾಸಿ-ಮರವಂತೆ ಕಡಲ ತೀರದಲ್ಲಿ ನೆಲೆಸಿರುವ 40 ಗೂಡಂಗಡಿಗಳ ತೆರವು ಕಾರ್ಯಾಚರಣೆ ಸೋಮವಾರ ಬೆಳಗ್ಗೆ ನಡೆದಿದೆ.

ಕುಂದಾಪುರ ಸಹಾಯಕ ಕಮೀಷನರ್‌ ಭೂಬಾಲನ್‌ ಹಾಗೂ ಬೈಂದೂರು ತಹಶೀಲ್ದಾರ ಪುರಂದರ ಹೆಗಡೆ ಪೊಲೀಸ್‌ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಜೆಸಿಬಿ ಯಂತ್ರದ ಮೂಲಕ ಗೂಡಂಗಡಿಗಳನ್ನು ನೆಲಸಮಗೊಳಿಸಲು ಮುಂದಾದಾಗ ವ್ಯಾಪಾರಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು. 

ಆತ್ಮಹತ್ಯೆಗೆ ಯತ್ನ
ಪೊಲೀಸ್‌ ಸರ್ಪಗಾವಲಿನ ನಡುವೆ ಅಧಿಕಾರಿಗಳು ತೆರವುಗೊಳಿಸಲು ಮುಂದಾದಾಗ ವ್ಯಾಪಾರಸ್ಥರು ಕಕ್ಕಾಬಿಕ್ಕಿಯಾಗಿದ್ದರು. ಈಗ ಬಂದು ಹೋಗಿ ಎಂದರೆ ಎಲ್ಲಿ ಹೋಗುವುದು ಆದರಿಂದ 15ದಿನಗಳ ಕಾಲಾವಕಾಶ ನೀಡಬೇಕು ಎಂದು ವಿನಂತಿಸಿದರು ಕೇಳಲಿಲ್ಲ, ಈ ನಡುವೆ ಕಾರ್ಯಾಚರಣೆಗೆ ಮುಂದಾದಾಗ ಕೆಲ ವ್ಯಾಪಾರಸ್ಥರು ಸಮುದ್ರಕ್ಕೆ ಹಾರಿ ಜೀವ ಕಳೆದುಕೊಳ್ಳಲು ಯತ್ನಿಸಿದರು. ಬಳಿಕ ಅಧಿಕಾರಿಗಳು ಸಂಜೆಯ ವರೆಗೆ ತೆರವುಗೊಳಿಸಲು ಸಮಯ ನೀಡಿದರು. ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.

ಹಿಂದಿನ ಭರವಸೆ ಠುಸ್‌
ಈ ಹಿಂದೆ ಅಧಿಕಾರಿಗಳು ತ್ರಾಸಿ ಪ್ರವಾಸಿ ಮಂದಿರದಲ್ಲಿ ವ್ಯಾಪಾರಸ್ಥರೊಂದಿಗೆ ಮಾತುಕತೆ ನೆಡೆಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಭರವಸೆ ನೀಡಿದರು. ಪರ್ಯಾಯ ಜಾಗವನ್ನು ನೀಡದೆ ನಿಮ್ಮನ್ನು ತೆರವುಗೊಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಅದರೆ ಈಗ ಏಕಾಏಕಿ ಬಂದು ನಮ್ಮ ಹೊಟ್ಟೆ ಮೇಲೆ ಹೊಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಾರೆ ವ್ಯಾಪಾರಸ್ಥರು.

ಪರ್ಯಾಯ ಸ್ಥಳವಕಾಶವನ್ನೇ ಮಾಡದೇ, ಜಾಗವನ್ನು ತೆರವುಗೊಳಿಸುವಂತೆ ಅಧಿಕಾರಿಗಳು ಮುಂದಾಗಿರುವ ಪರಿಣಾಮ ವ್ಯಾಪಾರಸ್ಥರ ಬದುಕಿನಲ್ಲಿ ಸುನಾಮೀಯೇ ಅಪ್ಪಳಿಸಿದ ಅನುಭವವಾಗಿದೆ. ಇವರ ಆದಾಯವನ್ನೇ ನಂಬಿಕೊಂಡಿರುವ ಇವರ ಕುಟುಂಬದವರನ್ನು ಚಿಂತೆಗೀಡು ಮಾಡಿದೆ. ಅಧಿಕಾರಿಗಳು ಸೂಕ್ತ ಸ್ಥಳವನ್ನು ಮೊದಲೆ ನೀಡಿವ ಮೂಲಕ ಮಾನವೀಯತೆಯ ಔದಾರ್ಯವನ್ನು ತೋರಬಹುದಿತ್ತು. ಸಾಧ್ಯವಾದಷ್ಟು ಬೇಗ ಪರ್ಯಾಯ ವ್ಯವಸ್ಥೆ ಮಾಡಲಿ ಎನ್ನುವ ಆಶಯ ಸಾರ್ವಜನಿಕರದಾಗಿದೆ. 

ಊಟ ಕಸಿದುಕೊಂಡರು
13ವರ್ಷಗಳಿಂದ ಇಲ್ಲಿನ ದಿನಿತ್ಯದ ವ್ಯಾಪಾರ ನಂಬಿಕೊಂಡು ನನ್ನ ಹಾಗೂ ಕುಟುಂಬದವರ ಜೀವನ ನಡೆಯುತಿತ್ತು. ಇದೇ ಬದುಕಿನ ಆಧಾರ ಸ್ತಂಭವಾಗಿತು. ಬೇರೆ ವ್ಯವಸ್ಥೆ ಮಾಡದೇ ಜಾಗ ಬಿಡಲು ಹೇಳಿದಾಗ ಕೈಕಾಲುಗಳು ನಡುಗಲು ಶುರುವಾಗಿದೆ. ಒಂದು ತಿಂಗಳ ಬಳಿಕ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಹೇಳುತ್ತಾರೆ. ಅಲ್ಲಿಯ ವರೆಗೇ ದಿನ ದೂಡುವುದಾದರು ಹೇಗೆ ಬದುಕೇ ದುಸ್ಥರವಾಗಿ ಪರಿಣಮಿಸಿದೆ ಎಂದು ಕಣ್ಣೀರಿಡುತ್ತಾರೆ ರಾಜಶೇಖರ್‌ ಕುಂದರ್‌.

ಜೀವಗಳನ್ನು ಉಳಿಸಿದ್ದೇನೆ..!
ಪ್ಯಾಪಾರದಲ್ಲಿ ಸಿಗುವ ಒಂದಿಷ್ಟು ಲಾಭಾಂಶದಿಂದಲ್ಲೇ ಜೀವನ ಸಾಗುತಿತ್ತು. ನಮಗೆ ಪರ್ಯಾಯ ವ್ಯವಸ್ಥೆ ಮಾಡಿದರೆ ಸಾಕಿತ್ತು. ಅಲ್ಲಿಗೆ ಹೋಗಬಹುದಿತ್ತು. ಇಷ್ಟೊಂದು ಪೊಲೀಸ್‌ ಬಂದೋಬಸ್ತ್ ಮಾಡುವುದು ಬೇಕಿರಲಿಲ್ಲ, ನಾವು ಹೊಟ್ಟೆಪಾಡಿಗಾಗಿ ಇಲ್ಲಿರೋದೋ, 20ವರ್ಷಗಳಿಂದ ಇಲ್ಲಿದ್ದು, ನಾಲ್ಕು ಜೀವಗಳನ್ನು ಉಳಿಸಿದ್ದೇನೆ. ಸ್ವಲ್ಪ ದಿನಗಳ ಸಮಯವನ್ನು ನೀಡುವ ಮಾನವೀಯತೆಯು ತೋರಲಿಲ್ಲ.
– ನಿತ್ಯಾನಂದ ವ್ಯಾಪಾರಿ,

ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು 
ಕೆಲವು ಸಮಯದಿಂದ ತೆರವು ಮಾಡುವಂತೆ ತಿಳಿಸುತ್ತಿದ್ದು ಇದುವರೆಗೂ ತೆರವುಗೊಳಿಸದೇ ಇರುವುದರಿಂದ ಈಗ ಕಾರ್ಯಾಚರಣೆ ಮೂಲಕ ತೆರವುಗೊಳಿಸುವುದು ಅನಿವಾರ್ಯವಾಗಿದೆ. ವ್ಯಾಪಾರಿಗಳಿಗೆ ಒಂದು ತಿಂಗಳ ಬಳಿಕ ಪರ್ಯಾಯ ವ್ಯವಸ್ಥೆ ಮಾಡಲಾಗುವುದು.   
– ಭೂಬಾಲನ್‌,  ಕುಂದಾಪುರ ಸಹಾಯಕ ಕಮೀಷನರ್‌ 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.