ತ್ರಾಸಿ: 94ಸಿ ಹಕ್ಕುಪತ್ರ ವಿತರಣೆ
Team Udayavani, Feb 5, 2019, 12:30 AM IST
ಕುಂದಾಪುರ: ಕಚೇರಿ ಕಚೇರಿಗಳಿಗೆ ಜನಸಾಮಾನ್ಯರು ಅಲೆದಾಟ ಮಾಡದಂತೆ ಪಾರದರ್ಶಕ ಆಡಳಿತ ನೀಡುತ್ತ ಜನರ ಬಳಿಗೇ ಧಾವಿಸುತ್ತಿರುವ ಸರಕಾರ ನಮ್ಮದು. ಜಾತಿ, ಪಕ್ಷ ಭೇದ ಮಾಡದೇ ಜನರಿಗೆ ಮೂಲ ಆದ್ಯತೆಯಾದ ವಾಸ್ತವ್ಯ ಜಾಗದ ಹಕ್ಕುಪತ್ರ ನೀಡಲಾಗುತ್ತಿದೆ. ಸರಕಾರದ ವಸತಿ ಯೋಜನೆಗಳನ್ನು ಬಳಸಿಕೊಂಡು ಮನೆ ಕಟ್ಟಿಕೊಳ್ಳಿ ಎಂದು ಉಸ್ತುವಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ| ಜಯಮಾಲಾ ಹೇಳಿದರು.
ಸೋಮವಾರ ತ್ರಾಸಿ ಅಣ್ಣಪ್ಪ ಸಭಾ ಭವನದಲ್ಲಿ ವಂಡ್ಸೆ ಹೋಬಳಿ ಹಾಗೂ ಬೈಂದೂರು ತಾಲೂಕಿನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿ ಅವರು ಮಾತ ನಾಡಿದರು.ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿ.ಪಂ. ಸದಸ್ಯರಾದ ಶೋಭಾ ಜಿ. ಪುತ್ರನ್, ರೋಹಿತ್ ಕುಮಾರ್ ಶೆಟ್ಟಿ, ಬಾಬು ಹೆಗ್ಡೆ, ಗೌರಿ ದೇವಾಡಿಗ, ಸುರೇಶ್ ಬಟ್ವಾಡಿ, ಜ್ಯೋತಿ ಎಂ., ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್, ಸ್ಥಾಯೀ ಸಮಿತಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಸದಸ್ಯರಾದ ಕರಣ್ ಪೂಜಾರಿ, ಪುಷ್ಪರಾಜ ಶೆಟ್ಟಿ, ಬಾಬು ದೇವಾಡಿಗ, ವಾಸುದೇವ ಪೈ, ರಾಜು ದೇವಾಡಿಗ, ಕಾರ್ಯನಿರ್ವಹಣಾಧಿಕಾರಿ ಕಿರಣ್ ಪೆಡೆ°àಕರ್ ಉಪಸ್ಥಿತರಿದ್ದರು.
ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ ಸ್ವಾಗತಿಸಿ, ಬೈಂದೂರು ಶಿಕ್ಷಣಾಧಿಕಾರಿ ಒ.ಆರ್. ಪ್ರಕಾಶ್ ಅವರು ಪ್ರಸ್ತಾವಿಸಿದರು. ಸದಾನಂದ ಬೈಂದೂರು ನಿರ್ವಹಿಸಿದರು.ವಂಡ್ಸೆ ಹೋಬಳಿಯ 208, ಬೈಂದೂರು ತಾಲೂಕಿನ 51 ಒಟ್ಟು 259 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. 29 ವಿಧವಾ ಮಾಸಾಶನ, 49 ಮಂದಿಗೆ ಸಂಧ್ಯಾ ಸುರಕ್ಷಾ ಮತ್ತು ಇಂದಿರಾಗಾಂಧಿ ವೃದ್ಧಾಪ್ಯ ವೇತನ ಮಾಸಾಶನ, ಒಟ್ಟು 80 ಮಂದಿಗೆ ಪಿಂಚಣಿ ಆದೇಶವನ್ನು ವಿತರಿಸಲಾಯಿತು.
ಅಧಿಕಾರಿಗಳಿಗೆ ಸೂಚನೆ
ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಾತ್ಯತೀತ, ಪಕ್ಷಾತೀತವಾಗಿ ಅರ್ಹರಿಗೆ ಪ್ರಾಮಾಣಿಕವಾಗಿ 94ಸಿ ಹಕ್ಕುಪತ್ರ ನೀಡಬೇಕೆಂದು ಅಧಿಕಾರಿ ಗಳಿಗೆ ಸೂಚಿಸಿದ್ದೇನೆ. ಸಮಾಜದ ಎಲ್ಲ ವರ್ಗ ದವರಿಗೆ ಶಾಸಕನಾಗಿ ಸ್ಪಂದಿಸುತ್ತಿದ್ದೇನೆ. ಅಧಿಕಾರಿಗಳು ಕೂಡ ಇದೇ ರೀತಿ ಸರಕಾರದ ಸವಲತ್ತು ಅರ್ಹರಿಗೆ ತಲುಪಿಸಬೇಕು ಎಂದರು.
ಸಚಿವೆ ಡಾ| ಜಯಮಾಲಾ ಸಮಾರಂಭ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು