ಅಪಾಯಕಾರಿ ಸ್ಥಿತಿಯಲ್ಲಿ ಮರಗಳು
Team Udayavani, Jul 14, 2019, 5:32 AM IST
ಕಾರ್ಕಳ: ಮುರತ್ತಂಗಡಿ – ಇರ್ವತ್ತೂರು ಸಂಪರ್ಕಿಸುವ ಕುಕ್ಕಟ್ಟೆ ಎಂಬಲ್ಲಿ ರಸ್ತೆ ಬದಿ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ.
ಜೋರು ಗಾಳಿ ಮಳೆ ಬಂದಲ್ಲಿ ಮರ ಉರುಳಿ ಬೀಳುವಂತಿದ್ದರೂ ಸಂಬಂಧ ಪಟ್ಟವರು ಕ್ಯಾರೇ ಅನ್ನುತ್ತಿಲ್ಲ. ಮರ ಬಿದ್ದಲ್ಲಿ ವಿದ್ಯುತ್ ತಂತಿ ಮೇಲೆಯೇ ಬೀಳುವ ಸಾಧ್ಯತೆ ಅಧಿಕವಾಗಿದ್ದು, ವಿದ್ಯುತ್ ಕಂಬ ಬಿದ್ದಲ್ಲಿ ಅಪಾರ ನಷ್ಟ ಸಂಭವಿಸಲಿದೆ ಎಂಬುದು ಸ್ಥಳೀಯರ ಆರೋಪ.
ಮುರತ್ತಂಗಡಿಯಿಂದ ಇರ್ವತ್ತೂರು ಜಂಕ್ಷನ್ ವರೆಗಿನ ಸುಮಾರು 3.5 ಕಿ.ಮೀ. ರಸ್ತೆಯನ್ನು ಸಿಆರ್ಎಫ್ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 5 ಕೋಟಿ ರೂ. ಅನುದಾನದಲ್ಲಿ ರಸ್ತೆ ವಿಸ್ತರಣೆಯೊಂದಿಗೆ ಕಾಂಕ್ರೀಟೀಕರಣಗೊಳ್ಳುತ್ತಿದೆ. ಹೀಗಾಗಿ ಕುಕ್ಕೆಟ್ಟೆ ಅರಣ್ಯ ಪ್ರದೇಶದಲ್ಲಿ ಏರುಗತಿಯ ರಸ್ತೆಯನ್ನು ತಗ್ಗಿಸಿ ಸಮತಟ್ಟು ಮಾಡ ಲಾಗಿದ್ದು, ಮರ ಧರೆ ಮೇಲೆಯೇ ಉಳಿದಿದೆ. ಗುತ್ತಿಗೆದಾರರು ಮರ ಕಡಿ ಯಲು ಮುಂದಾಗಿಲ್ಲ.
ಸಂಬಂಧಪಟ್ಟ ಅಧಿಕಾರಿಗಳು ಮರ ತೆರವುಗೊಳಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಪತ್ರಿಕೆಗಳು ಈ ಕುರಿತು ವರದಿ ಮಾಡಿ ಇಲಾಖೆಯನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದರೂ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ