ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಟ್ರಿಪಲ್‌ ತಲಾಖ್‌


Team Udayavani, Feb 29, 2020, 12:33 AM IST

Film-Festival-min

ಕುಂದಾಪುರ: ಕನ್ನಡಕ್ಕೆ ರಿಸರ್ವೇಶನ್‌ ಚಿತ್ರದ ಮೂಲಕ 2017ರಲ್ಲಿ ರಾಷ್ಟ್ರ ಪ್ರಶಸ್ತಿ (ರಜತ ಕಮಲ) ಮತ್ತು 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ (ಬಿಫ್ಸ್) ತಂದುಕೊಟ್ಟ ಕುಂದಾಪುರದ ಕಲಾವಿದ ಯಾಕುಬ್‌ ಖಾದರ್‌ ಗುಲ್ವಾಡಿ ಅವರ ಪ್ರಥಮ ನಿರ್ದೇಶನದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲಾಖ್‌ ವಿಚಾರದಲ್ಲಿ ಸೂಕ್ಷ್ಮವಾಗಿ ಚರ್ಚೆಗೊಳಗಾದ ಕಥೆಯನ್ನಿಟ್ಟುಕೊಂಡು ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ತಯಾರಾದ ಟ್ರಿಪಲ್‌ ತಲಾಖ್‌ ಸಿನಿಮಾ ಫೆ. 26ರಿಂದ ಮಾ. 4ರ ತನಕ ನಡೆಯುವ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಅನ್ಸಂಗ್‌ ಇನ್‌ಕ್ರೆಡಿಬಲ್‌ ಇಂಡಿಯಾ ಭಾರತದಲ್ಲಿ ಸ್ವಲ್ಪ ತಿಳಿದಿರುವ ಭಾಷೆಗಳು (ಬ್ಯಾರಿ ಭಾಷೆ) ವಿಭಾಗದಲ್ಲಿ ವಿಶೇಷ ಪ್ರದರ್ಶನ ಕಾಣಲಿದೆ.

ಗುಲ್ವಾಡಿ ಟಾಕೀಸ್‌ ಸಂಸ್ಥೆಯ ಈ ಸಿನೆಮಾವನ್ನು ಮುಂಬಯಿಯ ನಾರಾಯಣ ಪ್ರಭಾ ಸುವರ್ಣ ಮತ್ತು ಯಾಕುಬ್‌ ಖಾದರ್‌ ನಿರ್ಮಿಸಿದ್ದಾರೆ. ಬ್ಯಾರಿ ಭಾಷೆಯ ಇತಿಹಾಸದಲ್ಲೇ ದೂರದ ಲಂಡನ್ನಿನ ಬ್ರಿಷ್ಟಲ್‌ನಲ್ಲಿ ಮೊದಲ ಪ್ರದರ್ಶನ ಕಂಡ ಈ ಸಿನೆಮಾ ಜ. 25ರಂದು ಕುಂದಾಪುರದ ಯುವ ಮೆರೀಡಿಯನ್‌ನಲ್ಲಿ ತನ್ನ 2ನೇ ಪ್ರದರ್ಶನ ನಡೆಯಿತು.
ಮುಸ್ಲಿಂ ಸಮುದಾಯದಲ್ಲಿ ಭಾರಿ ಪ್ರಚಾರ ಗಿಟ್ಟಿಸಿಕೊಂಡ ಈ ಸಿನೆಮಾ ರಾಷ್ಟ್ರಾದ್ಯಂತ ತನ್ನ ಸಬೆಕ್ಟ್ ನಿಂದ ಗಮನ ಸೆಳೆದಿದ್ದು ಮುಸ್ಲಿಂ ಮಹಿಳೆಯರ ಬದುಕಿನ ಪ್ರಶ್ನೆಯಾಗಿ ಕೂಡ ಕಾಡಿತ್ತು. ಒಂದೇ ಉಸಿರಿನಲ್ಲಿ ಹೇಳುವ ಮೂರು ತಲಾಖ್‌ ಇತ್ತೀಚೆಗೆ ಸುಪ್ರಿಂ ಕೋರ್ಟ್‌ ನೀಡಿದ ತೀರ್ಪು ಮತ್ತು ಪವಿತ್ರ ಕುರಾನ್‌ಲ್ಲಿ ಇರುವ ವಿಚಾರವನ್ನು ಇಟ್ಟುಕೊಂಡು ಮಾಡಿದ ಈ ಸಿನೆಮಾ ಮುಸ್ಲಿಂ ಮಹಿಳೆಯರ ಬದುಕಿಗೆ ಒಂದು ತಿರುವು ನೀಡಿದೆ. ಯಾಕುಬ್‌ ಖಾದರ್‌ ಗುಲ್ವಾಡಿ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

ಛಾಯಾಚಿತ್ರಗ್ರಹಣ ಪಿ.ವಿ.ಆರ್‌. ಸ್ವಾಮಿ ಮತ್ತು ಸತೀಶ್‌ ಕುಮಾರ್‌, ಎಡಿಟರ್‌ ಮತ್ತು ಕಲರಿಸ್ಟ್‌ ಮೋಹನ್‌ ಎಲ್‌. ರಂಗಕಹಳೆ, ಸೌಂಡ್‌ ಮಿಕ್ಸಿಂಗ್‌ ಮುನೀಬ್‌ ಅಹ್ಮದ್‌, ಹಿನ್ನೆಲೆ ಸಂಗೀತ ಗಿರೀಶ್‌ ಬಿ.ಎಂ., ವಸ್ತ್ರ ವಿನ್ಯಾಸ ಇಸ್ಮಾಯಿಲ್‌ ಸಫುìದ್ದೀನ್‌, ಕಲೆ ಎ.ಕೆ. ಗುಲ್ವಾಡಿ, ಸಹ ನಿರ್ದೇಶನ ಪನಕನಹಳ್ಳಿ ಪ್ರಸನ್ನ ಮತ್ತು ರಿಜ್ವಾನ್‌ ಗುಲ್ವಾಡಿ, ತಾರಾಗಣದಲ್ಲಿ ರೂಪಾ ವರ್ಕಾಡಿ, ನ್ಯಾಯವಾದಿಗಳಾದ ರವಿಕಿರಣ ಮುರುಡೇಶ್ವರ, ಎ.ಎಸ್‌.ಎನ್‌ ಹೆಬ್ಟಾರ್‌, ನವ್ಯಾ ಪೂಜಾರಿ, ಉಮರ್‌ ಯು.ಎಚ್‌., ಎಂ.ಕೆ. ಮಠ, ಬೇಬಿ ಫಹಿಮತುಲ್‌ ಯುಶ್ರ, ಅಝರ್‌ ಷಾ, ಮಹ್ಮದ್‌ ಬಡೂxರ್‌, ಅಮೀರ್‌ ಹಮ್ಜಾ, ನಾರಾಯಣ ಸುವರ್ಣ, ಪ್ರಭಾ ಸುವರ್ಣ, ಸುಬ್ರಹ್ಮಣ್ಯ ಶೆಟ್ಟಿ, ಮಾ| ಫಹಾದ್‌ ಮುಂತಾದವರು ನಟಿಸಿದ್ದಾರೆ.

ನನ್ನ ಮೊದಲ ನಿರ್ಮಾಣದ
ಸಿನೆಮಾ ರಿರ್ಸವೇಶನ್‌ಗೆ
2018ರಲ್ಲಿ 10ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಬಂದಿತ್ತು. ಈಗ ನನ್ನ ಮೊದಲ ನಿರ್ದೇಶನದ ಸಿನೆಮಾ ಟ್ರಿಪಲ್‌ ತಲಾಖ್‌ ಅನ್ಸಂಗ್‌ ಇನ್‌ಕ್ರೆಡಿಬಲ್‌ ಇಂಡಿಯಾ ವಿಭಾಗದಲ್ಲಿ ಪ್ರದರ್ಶನ ಕಾಣುತ್ತಿರುವುದು ಅತ್ಯಂತ ಖುಷಿ ಕೊಟ್ಟಿದೆ.
-ಯಾಕುಬ್‌ ಖಾದರ್‌ ಗುಲ್ವಾಡಿ,ನಿರ್ದೇಶಕರು

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.