ಬೀದಿ ದೀಪವಿಲ್ಲದೆ ತೊಂದರೆ; ರಾತ್ರಿ ವೇಳೆ ಪಾದಚಾರಿಗಳ ಪರದಾಟ
ಶಿರ್ವ: ಪೊಲೀಸ್ ಸ್ಟೇಷನ್-ಸೊರ್ಕಳ ರಸ್ತೆ
Team Udayavani, Nov 12, 2019, 5:28 AM IST
ಶಿರ್ವ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿರ್ವ ಪೊಲೀಸ್ ಸ್ಟೇಷನ್-ಸೊರ್ಕಳ ರಸ್ತೆ ಕಾಂಕ್ರಿಟೀಕರಣಗೊಂಡು ವರುಷ ಕಳೆದರೂ ಬೀದಿ ದೀಪಗಳಿಲ್ಲದೆ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ.
ಸೊರ್ಕಳ ಪ್ರದೇಶದಲ್ಲಿ ಈ ರಸ್ತೆಯಲ್ಲಿ ಹಾದುಹೋಗುವ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳಿವೆ. ರಾತ್ರಿ ವೇಳೆ ಕತ್ತಲು ಇರುವುದರಿಂದ ಪಾದಾಚಾರಿಗಳು ನಡೆದುಕೊಂಡು ಹೋಗಲು ಪರದಾಡುತ್ತಿದ್ದು,ಸಂಕಷ್ಟ ಎದುರಿಸುವಂತಾಗಿದೆ.
ಶಿರ್ವ-ಬೆಳ್ಮಣ್ ಮುಖ್ಯ ರಸ್ತೆಯಿಂದ ಸುಮಾರು 300 ಮೀ. ದೂರದಲ್ಲಿ ಶಿರ್ವ ಪೊಲೀಸ್ ಠಾಣೆ ಈ ರಸ್ತೆಯ ಬದಿಯಲ್ಲಿದೆ. ಠಾಣೆಯ ಮುಂಭಾಗದಲ್ಲಿ ಠಾಣೆಯಿಂದಲೇ ಒಂದು ಬೀದಿ ದೀಪ ಅಳವಡಿಸಲಾಗಿದೆ.
ಆದರೆ ರಸ್ತೆಯಲ್ಲಿ ವಿದ್ಯುತ್ ಕಂಬಗಳಿದ್ದರೂ ಬೀದಿ ದೀಪಗಳಿಲ್ಲದೆ ರಾತ್ರಿ ವೇಳೆ ಪೊಲೀಸ್ ಠಾಣೆಗೆ ಬರುವ ನಾಗರಿಕರು,ವಾಹನ ಸವಾರರು ವಾಹನಗಳ ಬೆಳಕನ್ನೇ ಅಶ್ರಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ವ್ಯವಸ್ಥೆ ಕಲ್ಪಿಸಲಾಗುವುದು
ಗ್ರಾ.ಪಂ.ನ 14ನೇ ಹಣಕಾಸು ನಿಧಿಯಿಂದ ಅನುದಾನ ಮೀಸಲಿರಿಸಿದ್ದು, ಕೂಡಲೇ ಬೀದಿ ದೀಪ ಅಳವಡಿಸಲು ವ್ಯವಸ್ಥೆ ಕಲ್ಪಿಸಲಾಗುವುದು.
-ಅನಂತಪದ್ಮನಾಭ ನಾಯಕ್,
ಪಂ. ಅಭಿವೃದ್ಧಿ ಅಧಿಕಾರಿ,ಶಿರ್ವ
ಸ್ಪಂದನೆ ಇಲ್ಲ
ಸಾರ್ವಜನಿಕರ ಹಿತದೃಷ್ಟಿಯಿಂದ ಬೀದಿ ದೀಪದ ಬಗ್ಗೆ ಹಲವಾರು ಲಿಖೀತ ಮನವಿ ಸಲ್ಲಿಸಲಾಗಿದೆ.ಗ್ರಾಮ ಸಭೆಯಲ್ಲೂ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲಾಗಿದ್ದರೂ ಈವರೆಗೆ ಗ್ರಾ.ಪಂ.ಆಡಳಿತದಿಂದ ಯಾವುದೇ ಸ್ಪಂದನೆ ಇಲ್ಲ.
– ಅಬ್ದುಲ್ ಖಾದರ್,ಶಿರ್ವ ಪೊಲೀಸ್ ಠಾಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?