“ತುಳು ಭಾಷೆ, ಸಂಸ್ಕೃತಿ ಉಳಿವಿಗೆ ನಾಟಕೋತ್ಸವ ಸಹಕಾರಿ’


Team Udayavani, Jan 20, 2019, 1:00 AM IST

tulu-bashe.jpg

ಕಟಪಾಡಿ: ತುಳು ಭಾಷೆ,  ಸಂಸ್ಕೃತಿಯ ಉಳಿವಿಗೆ ಈ ತುಳು ನಾಟಕೋತ್ಸವ ಸಹಕಾರಿ. ಉತ್ತಮ ನಾಟಕಗಳಿಗೆ ಪ್ರೇಕ್ಷಕ ವರ್ಗ ಹೆಚ್ಚು ಪ್ರೋತ್ಸಾಹ ನೀಡುತ್ತದೆ.  ಮೌಲ್ಯಯುತ ನಾಟಕಗಳು ಹೆಚ್ಚು ಪ್ರದರ್ಶನಗೊಳ್ಳಬೇಕಿದೆ ಎಂದು ಸಮಾಜ ಸೇವಕ ಯು. ವಿಶ್ವನಾಥ ಶೆಣೈ ಉಡುಪಿ ಹೇಳಿದರು.
ಶುಕ್ರವಾರ ಕಟಪಾಡಿಯ ಎಸ್‌.ವಿ.ಎಸ್‌.  ಪ್ರೌಢಶಾಲೆಯ  ಬಯಲು ರಂಗಮಂಟಪದಲ್ಲಿ  ಪ್ರೇರಣಾ ಟ್ರಸ್ಟ್‌ ಕಟಪಾಡಿ ಇದರ ನೇತೃತ್ವದಲ್ಲಿ ಜ.18ರಿಂದ ಜ.20ರ ಪರ್ಯಂತ ಮೂರು ದಿನಗಳ ಕಾಲ ಪ್ರದರ್ಶನಗೊಳ್ಳಲಿರುವ  ತುಳುನಾಟಕ ಪ್ರದರ್ಶನ, ರಂಜನೋತ್ಸವ-2019ಕ್ಕೆ ಚಾಲನೆ ನೀಡಿ  ಅವರು ಮಾತನಾಡಿದರು.

ಕಾಲಘಟ್ಟಕ್ಕನುಗುಣವಾಗಿ ಬದಲಾವಣೆ ಗಳು ಕಂಡು ಬಂದರೂ, ನಾಟಕ ಎಂಬುದು ಶೂನ್ಯ ಸೃಷ್ಟಿಯಲ್ಲ. ನಮ್ಮ ನಡುವೆ ನಡೆಯುವ ಘಟನೆಗಳನ್ನಾಧರಿಸಿ ಪ್ರಸ್ತುತಪಡಿಸುವ ನಾಟಕ ಮಾಧ್ಯಮದ ಮೂಲಕ  ಮನುಷ್ಯನ ಅಂತರಂಗ ವನ್ನು ಬೆಳಗುವ ಕಾರ್ಯ ರಂಗಭೂಮಿಯಿಂದಾಗುತ್ತದೆ ಎಂದರು.

ತುಳು ಉಳಿವಿಗೆ  ನಾಟಕ ಕಾರಣ
ಮುಖ್ಯ ಅತಿಥಿಯಾಗಿದ್ದ ಸುರೇಶ್‌ ಶೆಟ್ಟಿ ಗುರ್ಮೆ ಮಾತನಾಡಿ, ನಾಟಕ ಎಂಬುದು ಕಲಾವಿದರ ತಪಸ್ಸು. ನಿರಂತರ ಸಿದ್ಧಿ ಸಾಧನೆಯ ಮೂಲಕ ಲಕ್ಷಾಂತರ ಪ್ರೇಕ್ಷಕರಿಗೆ ಮುದ ನೀಡುವ ಮಾಧ್ಯಮ. ತುಳುವಿನ ಉಳಿವಿಗೂ ನಾಟಕ ಕಾರಣವಾಗಿದೆ. ಪರಿವರ್ತನೆಯ ಕಾಲ ಘಟ್ಟದಲ್ಲಿ ಮಾನಸಿಕ ಪರಿವರ್ತನೆಗಾಗಿ ಮಕ್ಕಳನ್ನು  ನಾವು ಮೌಲ್ಯಯುತ ನಾಟಕ ಪ್ರದರ್ಶನಗಳಿಗೆ ಕರೆ ತರಬೇಕಾದ ತೀರಾ ಅವಶ್ಯಕತೆ ಇದೆ. ನಮ್ಮ ಮಕ್ಕಳಿಗೆ ನಾವು ಸಂಸ್ಕಾರ, ಸಂಸ್ಕೃತಿ ಕಲಿಸಿ ಅದನ್ನು ಅಳವಡಿಸಿಕೊಂಡಲ್ಲಿ ಮಾತ್ರ ಅವರು ಶ್ರೇಷ್ಠ ವ್ಯಕ್ತಿಯಾಗಬಲ್ಲರು ಎಂದರು.

ಕಲಾತ್ಮಕ ನಾಟಕಕ್ಕೆ ಹೆಚ್ಚು  ಪ್ರೋತ್ಸಾಹ
ಅಧ್ಯಕ್ಷತೆ ವಹಿಸಿದ್ದ ಕಟಪಾಡಿ ರೋಟರಿ ಕ್ಲಬ್‌ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಮಾತನಾಡಿ, ಬದಲಾವಣೆ ಜಗದ ನಿಯಮ. ಅದಕ್ಕೆ ಹೊಂದಿಕೊಂಡು ಜನರ ಅಭಿಲಾಷೆ, ಅಭಿರುಚಿ ಸಹಜವಾಗಿ ಬದಲಾಗುತ್ತದೆ. ಆದರೂ ವಿವಿಧ ಆಯಾಮಗಳ ನಾಟಕಗಳು ಇದ್ದರೂ ಸದಭಿರುಚಿಯ ಕಲಾತ್ಮಕ ನಾಟಕ ವೀಕ್ಷಣೆಯ ಮೂಲಕ ಪ್ರೋತ್ಸಾಹ ನೀಡಬಲ್ಲರು ಎಂದರು.

ತುಳು ಕೂಟದ ಅಧ್ಯಕ್ಷ ವಿ.ಜಿ. ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ತಂತ್ರಿ ಶುಭ ಹಾರೈಸಿದರು. ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ನಿರ್ಗತಿಕ ವಯೋವೃದ್ಧರ ಆಶ್ರಯತಾಣವಾದ ಕಾರುಣ್ಯ ಆಶ್ರಯಧಾಮಕ್ಕೆ ಒಂದು ತಿಂಗಳಿಗೆ ಬೇಕಾಗುವ ದಿನಸಿ ಸಾಮಾನುಗಳನ್ನು ಕುಮಾರ್‌ ಅವರಿಗೆ ಹಸ್ತಾಂತರಿಸಲಾಯಿತು.ಪ್ರೇರಣಾ ಟ್ರಸ್ಟ್‌ ಕಟಪಾಡಿ ಇದರ ನಿರ್ದೇಶಕ ರಾಘವೇಂದ್ರ ರಾವ್‌ ಕಟಪಾಡಿ, ಕೃಷ್ಣ  ಕುಮಾರ್‌ ಮಟ್ಟು ಉಪಸ್ಥಿತರಿದ್ದರು. ಕಟಪಾಡಿ ಶಂಕರ ಪೂಜಾರಿ ಸ್ವಾಗತಿಸಿದರು. ಶ್ರೀಕರ ಅಂಚನ್‌ ವಂದಿಸಿದರು. ಅಪ್ಪು ಪೂಜಾರಿ  ನಿರೂಪಿಸಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.