ತುಳುನಾಡಿನ ವರ್ಷಾರಂಭವೇ “ಯುಗಾದಿ’: ಶೀರೂರು ಶ್ರೀ


Team Udayavani, Apr 17, 2017, 4:20 PM IST

17-UDUPI-2.jpg

ಉಡುಪಿ: ಪ್ರಸ್ತುತ ಹೊಸ ವರ್ಷಾಚರಣೆ ಎಂದರೆ ಕುಡಿತ, ಮೋಜು, ಮಸ್ತಿ ಎನ್ನುವಂತಾಗಿ ಹೋಗಿದೆ. ಆದರೆ ತುಳುನಾಡಿನ ಹೊಸ ವರ್ಷಾರಂಭವೆಂದರೆ “ಯುಗಾದಿ’ ಆಚರಣೆ. ಈ ವಿಶಿಷ್ಟವಾದ ಹಬ್ಬವನ್ನು ತುಳುನಾಡಿನಲ್ಲಿರುವ ಎಲ್ಲ ಸಂಘ – ಸಂಸ್ಥೆಗಳು ಒಂದಾಗಿ ಸೇರಿಕೊಂಡು ಗ್ರಾಮ ಮಟ್ಟದಲ್ಲಿ ಆಚರಿಸುವಂತಾಗಬೇಕು ಎಂದು  ಶೀರೂರು ಮಠದ ಶ್ರೀ ಲಕ್ಷ್ಮೀ ವರತೀರ್ಥ ಶ್ರೀಪಾದರು ನುಡಿದರು.

ಯುಗಾದಿಯಂದೇ ಹೊಸ ಸಂವತ್ಸರವನ್ನು ಸಂಭ್ರಮದಿಂದ ಸ್ವಾಗತಿಸುವಂತಾಗಬೇಕು, ಯುವಜನತೆಗೆ ನಮ್ಮ  ಸಂಸ್ಕೃತಿ, ಆಚಾರ – ವಿಚಾರಗಳ ಬಗ್ಗೆ ಅರಿವು ಮೂಡಿಸಬೇಕೆನ್ನುವ ಬಹು ದೊಡ್ಡ ಕಲ್ಪನೆಯೊಂದಿಗೆ ಉಡುಪಿಯ ಶೀರೂರುಶ್ರೀಯವರ ಸ್ವತಃ ಮುತುವರ್ಜಿಯಲ್ಲಿ ಗುರುವಾರ ಉಡುಪಿ ಕೃಷ್ಣಮಠದ ವಾಹನ ಪಾರ್ಕಿಂಗ್‌ ಸ್ಥಳದಲ್ಲಿ ನಡೆದ ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವ ಎರಡು ವಿಶಿಷ್ಟ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಆತ್ಮಶಕ್ತಿ ಕೊರತೆ – ಆತ್ಮಹತ್ಯೆಗೆ ಪ್ರಚೋದನೆ  
ಕೇಮಾರು ಶ್ರೀ ಈಶವಿಟಲದಾಸ ಸ್ವಾಮೀಜಿ ಅವರು ಮಾತನಾಡಿ, ಮಕ್ಕಳಿಗೆ ಸಂಸ್ಕೃತಿ, ಧಾರ್ಮಿಕ ಗ್ರಂಥಗಳ ಬಗ್ಗೆ ತಿಳಿ ಹೇಳುವ ಕಾರ್ಯ ನಮ್ಮಿಂದಲೇ ನಡೆಯಬೇಕು. ತುಳುನಾಡಿದ ಭವ್ಯ ಸಂಸ್ಕೃತಿ ಉಳಿಸಿ ಬೆಳೆಸಲು ಗ್ರಾಮೀಣ ಭಾಗದ ತಾಯಂದಿರು ಕಾರಣರಾಗಿದ್ದಾರೆ. ಮದ್ಯಪಾನ ಮತ್ತು ದುಶ್ಚಟಗಳ ಮುಕ್ತ ಸಮಾಜ ನಿರ್ಮಾಣವಾಗಬೇಕಾಗಿದೆ. ಪ್ರಸ್ತುತ ಆತ್ಮಶಕ್ತಿಯ ಕೊರತೆಯಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳು, ಐಎಎಸ್‌ ಅಧಿಕಾರಿಗಳು ಆತ್ಮಹತ್ಯೆಯಂತಹ ಹೇಯಕೃತ್ಯಕ್ಕೆ ಮುಂದಾಗುತ್ತಿದ್ದಾರೆ. ಈ ದೆಸೆಯಲ್ಲಿ ನಮ್ಮ ಹಬ್ಬಗಳ ಆಚರಣೆ, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿದ ಶೀರೂರುಶ್ರೀ ಅವರ ಕಾರ್ಯ ಪ್ರಶಂಸನೀಯ ಎಂದರು.

ಸತ್‌ಸಂಪ್ರದಾಯದ ಸನಾತನ ಹಿಂದೂ ಧರ್ಮ
ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ, ಬ್ರಿಟಿಷರು ನಮ್ಮನ್ನು ಬಿಟ್ಟು ತೆರಳಿದರೂ ಅವರ ಸಂಪ್ರದಾಯ, ಆಚರಣೆಗಳು ಇಂದಿಗೂ ಮುಂದುವರಿಯುತ್ತಿವೆ. ಆದರೆ ನಾವು ನಮ್ಮದೇ ಆದ ಸನಾತನ ಹಿಂದೂ ಧರ್ಮದ ಸತ್‌ಸಂಪ್ರದಾಯವನ್ನು ಮರೆಯಬಾರದು. ಜ. 1 ಕ್ಯಾಲೆಂಡರ್‌ ವರ್ಷಾರಂಭವೇ ಹೊರತೂ ನಮ್ಮ ಹೊಸ ವರ್ಷಾರಂಭವಲ್ಲ, ನಮಗೆ ಯುಗಾದಿಯೇ ವರ್ಷಾರಂಭ ಎನ್ನುವುದನ್ನು ಗಟ್ಟಿಗೊಳಿಸಬೇಕು ಎಂದರು.

ಸಂಸ್ಕೃತಿ, ಆಚರಣೆಗಳ ಅರಿವು 
ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌ ಅವರು ಮಾತನಾಡಿ, ತುಳುನಾಡು ಕೃಷಿ ಸಂಸ್ಕೃತಿ ಮೇಲೆ ಅವಲಂಬಿತವಾಗಿದೆ. ಆದರೆ ಇಂದು ಕೃಷಿ ಅಳಿದು, ದೈವಾರಾಧನೆ ವ್ಯಾಪಾರೀಕರಣವಾಗಿದೆ. ಮುಂದಿನ ಪೀಳಿಗೆ, ಯುವಶಕ್ತಿಗೆ ನಮ್ಮ ಸಂಸ್ಕೃತಿ, ಆಚರಣೆಗಳ ಕುರಿತು ಅರಿವು ಮೂಡಿಸುವುದು ಅನಿವಾರ್ಯ ಎಂದರು. ಸಾಯಿರಾಧಾ ಗ್ರೂಪ್‌ನ ಎಂಡಿ ಮನೋಹರ ಶೆಟ್ಟಿ, ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ವಿ. ಮೋಹನ್‌ ಮುಂಬಯಿ, ಗಣೇಶ್‌ ಉಪಸ್ಥಿತರಿದ್ದರು. ಶೀರೂರು ಮಠದ ದಿವಾನ ಲಾತವ್ಯ ಆಚಾರ್ಯ ಸ್ವಾಗತಿಸಿದರು. ನವೀನ್‌ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಅನಂತರ ಮಾರ್ಪಳ್ಳಿ ಚಂಡೆ ಬಳಗದ ಸದಸ್ಯರು ಹಾಗೂ ಕುಳಾಯಿ ಕಲಾ ಕುಂಭ ಸಾಂಸ್ಕೃತಿಕ ವೇದಿಕೆ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಗೊಂಡಿತು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.