ಹೆಬ್ರಿ: ಕಾಲು ಜಾರಿ ಬಾವಿಗೆ ಬಿದ್ದ ಪ್ರಕರಣ; ಅಣ್ಣನೇ ತಮ್ಮನ ಕೊಲೆಗೈದಿರುವ ಶಂಕೆ
Team Udayavani, Jan 15, 2022, 3:51 PM IST
ಹೆಬ್ರಿ : ಶಿವಪುರ ಗ್ರಾಮದ ಕಾಳಾಯಿ ಮುಳ್ಳುಗುಡ್ಡೆ ನಿವಾಸಿ ರವಿರಾಜ್ ಶೆಟ್ಟಿಗಾರ(43) ಎಂಬವರು ಜ.13ರಂದು ಕಾಲು ಜಾರಿ ಬಾವಿ ಬಿದ್ದು ಮೃತ ಪಟ್ಟ ಪ್ರಕರಣ ತನಿಖೆ ವೇಳೆ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ವ್ಯಕ್ತಿಯ ಅಣ್ಣ ಜಯರಾಮ ಸೆಟ್ಟಿಗಾರ ಎಂಬವರು ಠಾಣೆಗೆ ಬಂದು ನನ್ನ ತಮ್ಮ ರವಿರಾಜ ಶೆಟ್ಟಿಗಾರ ಅವರ ಮನೆಯ ಹತ್ತಿರದ ಆವರಣವಿಲ್ಲದ ಬಾವಿಯಲ್ಲಿ ನೀರನ್ನು ತೆಗೆಯಲು ಬಕೇಟಿಗೆ ಹಗ್ಗ ಕಟ್ಟಿ ಬಾವಿಯಿಂದ ನೀರನ್ನು ಎಳೆಯುವಾಗ ಅವರ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿದೆ. ಆದರೆ ಮೃತರ ದೇಹದಲ್ಲಿ ಗಾಯ ಇದ್ದು ಇನ್ನೊಬ್ಬ ತಮ್ಮ ಶಂಕರನಾರಾಯಣ ಎಂಬವ ಮನೆಯ ಬಳಿಯ ಕೋಣೆಯ ಮಾಡನ್ನು ಮೃತ ರವಿರಾಜ ಶೆಟ್ಟಿಗಾರ ರವರಿಗೆ ಹೇಳದೇ ಕಿತ್ತು ಹಾಕಿದ್ದು ಈ ಬಗ್ಗೆ ವಾದವಿವಾದ ನಡೆದಿದೆ. ಮೃತ ದೇಹದಲಿ ಗಾಯ ಇರುವುದರಿಂದ ಕೊಲೆಯಾಗಿರಬಹುದು ಎಂಬ ಸಂಶಯ ಇದ್ದು ಸೂಕ್ತ ತನಿಖೆ ನಡೆಸುವಂತೆ ಹೆಬ್ರಿ ಠಾಣೆಗೆ ದೂರು ನೀಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿಸಿದ್ದು ಮೃತ ದೇಹದ ಶವ ತನಿಖಾ ವೇಳೆಯಲ್ಲಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯ ಬಳಿ ಇರುವ ಕೋಣೆಯ ಮಾಡನ್ನು ಕಿತ್ತು ಹಾಕಿರುವ ವಿಚಾರದಲ್ಲಿ ವೈಮನಸ್ಸು ಇದ್ದು ಮೃತನ ಅಣ್ಣ ಶಂಕರನಾರಾಯಣ ಸೆಟ್ಟಿಗಾರ ಮೃತ ರವಿರಾಜ ಸೆಟ್ಟಿಗಾರ ಅವರನ್ನು ಹರಿತವಾದ ಆಯಧದಿಂದ ಬಲವಾಗಿ ಕಡಿದು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ