ಹಿರಿಯಡಕದ ಪುತ್ತಿಗೆ ಬಳಿ ಸರಣಿ ಅಪಘಾತ:ಬೈಕ್ ಸವಾರರಿಬ್ಬರು ಬಲಿ
Team Udayavani, Mar 16, 2018, 3:34 PM IST
ಉಡುಪಿ: ಹಿರಿಯಡಕದ ಪುತ್ತಿಗೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದ್ದು ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ರಸ್ತೆಯಲ್ಲಿ ಮರದ ಗೆಲ್ಲೊಂದು ಬಿದ್ದಿದ್ದ ಕಾರಣ ಕಾರನ್ನು ನಿಲ್ಲಿಸಲಾಗಿತ್ತು, ಈ ವೇಳೆ ಕಾರನ್ನು ಓವರ್ಟೇಕ್ ಮಾಡಿ ಬೈಕ್ ಮುಂದಕ್ಕೆ ಬಂದಿದ್ದು ಎದುರಿನಿಂದ ಬರುತ್ತಿದ್ದ ಲಾರಿ ಢಿಕ್ಕಿಯಾಗಿ ಪರಾರಿಯಾಗಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ವೇಳೆ ಶಿಮೊಗ್ಗಕ್ಕೆ ವೇಗವಾಗಿ ತೆರಳುತ್ತಿದ್ದ ಬಸ್ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಹರಿಯುವುದನ್ನು ತಪ್ಪಿಸಲು ಹೋಗಿ ಗದ್ದೆಗೆ ಪಲ್ಟಿಯಾಗಿದೆ.
ಬಸ್ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಪರಾರಿಯಾದ ಲಾರಿಯನ್ನು ಪೆರ್ಡೂರಿನಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ಮೃತ ದುರ್ದೈವಿಗಳಿಬ್ಬರು ಪೆರ್ಡೂರಿನಲ್ಲಿ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಅಡುಗೆ ಬಡಿಸುವ ಕೆಲಸ ಮುಗಿಸಿ ವಾಪಾಸಾಗುತ್ತಿದ್ದರು ಎಂದು ತಿಳಿದು ಬಂದಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಹಿರಿಯಡಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ