ಕೋಟಿತೀರ್ಥ ಪುಷ್ಕರಿಣಿಯಲ್ಲಿ  ಮುಳುಗಿ ಇಬ್ಬರ ಸಾವು


Team Udayavani, Apr 24, 2018, 12:59 PM IST

kotiteerta.jpg

ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೋಟಿತೀರ್ಥ ಪುಷ್ಕರಿಣಿಯಲ್ಲಿ ಎ. 23ರಂದು ಪೂರ್ವಾಹ್ನ ಇಬ್ಬರು  ಕಾಲೇಜು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ.

ಕೋಟೇಶ್ವರದ ಎಸ್‌.ಕೆ.ವಿ.ಎಂ.ಎಸ್‌. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ, ಕೋಟೇಶ್ವರದ ಕಾಳಾವರ ನಿವಾಸಿ ಸಚಿನ್‌ (21)  ಹಾಗೂ ಬಿ.ಕಾಂ. ದ್ವಿತೀಯ ವರ್ಷದ ವಿದ್ಯಾರ್ಥಿ ಸೇನಾಪುರದ ಭಟ್ರಹಿತ್ಲು ನಿವಾಸಿ ಕೀರ್ತನ್‌ (20) ಅವರು ಇನ್ನೋರ್ವ ಸಹಪಾಠಿ ಜತೆ  ಪುಷ್ಕರಿಣಿಯಲ್ಲಿ ಈಜಲು ತೆರಳಿದ್ದರು.

ಸಚಿನ್‌ ಕೆರೆಯ ನಡುವಿನ ನಂದಿ ಮಂಟಪದವರೆಗೆ ಈಜಿ ಅಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಅರ್ಧ ದೂರದವರೆಗೆ ಈಜಿ ಬಂದಿದ್ದ ಕೀರ್ತನ್‌ ಗುರಿ ಮುಟ್ಟಲಾಗದೆ ಸಹಾಯಕ್ಕಾಗಿ  ಕೂಗಿದರು. ಕೂಡಲೇ ಸಚಿನ್‌ ಹಾಗೂ ದಡದಲ್ಲಿದ್ದ ಇನ್ನೋರ್ವ  ಈಜುತ್ತಾ ಆತನ ಸಮೀಪಕ್ಕೆ ತೆರಳಲು ಮುಂದಾದರು. ಆದರೆ ಓರ್ವ ಅರ್ಧದಿಂದಲೇ ವಾಪಸ್‌ ಹೋಗಿ ಸ್ಥಳೀಯರ ನೆರವು ಯಾಚಿಸಿದ. ಸಚಿನ್‌ ಈಜುತ್ತಾ ಕೀರ್ತನ್‌ನನ್ನು ರಕ್ಷಿಸಲು ಮುಂದಾಗುತ್ತಿದ್ದಂತೆ ಇಬ್ಬರೂ ಮುಳುಗಿ ಸಾವನ್ನಪ್ಪಿದರು ಎಂದು ಪ್ರತ್ಯಕ್ಷದರ್ಶಿಗಳು  ತಿಳಿಸಿದ್ದಾರೆ. ಇವರು ಕಾಲೇಜಿನಿಂದ ಪರೀಕ್ಷೆಯ ಹಾಲ್‌ ಟಿಕೆಟ್‌ ಪಡೆದು ಬಂದು ಕೆರೆಯಲ್ಲಿ ಈಜಲು ಆರಂಭಿಸಿದ್ದರು.

ಶೋಧ ಕಾರ್ಯ ಆರಂಭಿಸಿದ ಘಟನೆಯ ಒಂದು ತಾಸಿನ ಅನಂತರ ಕೀರ್ತನ್‌ ಮೃತದೇಹವನ್ನು ಪತ್ತೆಹಚ್ಚಿದರು. ಸಚಿನ್‌ ಅವರ ಮೃತದೇಹ ಸುಮಾರು 3 ಗಂಟೆ ಹೊತ್ತಿಗೆ ಕೆರೆಯ ಒಂದು ಪಾರ್ಶ್ವದಲ್ಲಿ ಲಭಿಸಿದೆ.

ಕುಂದಾಪುರ ಡಿವೈಎಸ್‌ಪಿ ದಿನೇಶ್‌ ಕುಮಾರ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಪ್ಪ, ಎಸ್‌.ಐ. ಹರೀಶ್‌ ಸಹಿತ  ಪೊಲೀಸ್‌ ಸಿಬಂದಿ ಸ್ಥಳಕ್ಕೆ ಆಗಮಿಸಿ ಸಹಕರಿಸಿದರು. ಸ್ಥಳಕ್ಕಾಗಮಿಸಿದ ಕಾಲೇಜಿನ ವಿದ್ಯಾರ್ಥಿಗಳು  ಅಳುತ್ತಿದ್ದುದು ಕಂಡುಬಂತು.

ಕೆರೆಗೆ ತಡೆ ಬೇಲಿ ಅಗತ್ಯ 
ನಾಲ್ಕೂವರೆ ಎಕರೆ ವಿಸ್ತೀರ್ಣದ  ಬೃಹತ್‌ ಕೆರೆಗೆ ತಡೆಬೇಲಿ ಇಲ್ಲದಿರುವುದು ಇಂತಹ ದುರಂತಗಳಿಗೆ ಕಾರಣವಾಗಿದ್ದು, ಅಲ್ಲಿ ತಡೆಬೇಲಿ ನಿರ್ಮಿಸಿ ಕಾವಲುಗಾರನನ್ನು ನೇಮಿಸುವ ಅಗತ್ಯ ಇದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಈ ಕೆರೆಯಲ್ಲಿ ಅಮಾಯಕರು ಸಾವನ್ನಪ್ಪುತ್ತಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ.

ಬಡ ಕುಟುಂಬದ ಮಕ್ಕಳು
ಕಾಳಾವರದ ಬಡ ಕುಟುಂಬದವರಾದ ಲಾರಿ ಚಾಲಕ ಸುಬ್ಬ ಪೂಜಾರಿ ಅವರ ಏಕೈಕ ಪುತ್ರನಾಗಿದ್ದ ಸಚಿನ್‌ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕೀರ್ತನ್‌ ಅವರು ಸೇನಾಪುರದ ಭಟ್ರಹಿತ್ಲು ನಿವಾಸಿ ರಾಜು ಮರಕಾಲ ಅವರ ಪುತ್ರ. ರಾಜು ಅವರು ಬಾಗಲಕೋಟೆಯಲ್ಲಿ ಹೊಟೇಲ್‌ ಕಾರ್ಮಿಕರಾಗಿದ್ದಾರೆ. ಇನ್ನೋರ್ವ ಪುತ್ರ ಕಿರಣ ಮಂಗಳೂರಿನಲ್ಲಿ ಉದ್ಯೋಗ ದಲ್ಲಿದ್ದಾರೆ. ತಾಯಿಯ ಆರೋಗ್ಯ ಉತ್ತಮವಾಗಿಲ್ಲ.

ಸಚಿನ್‌ ವಾಲಿಬಾಲ್‌ ಪಟು
ಸಚಿನ್‌ ಉತ್ತಮ ಕ್ರೀಡಾಪಟುವಾಗಿದ್ದು, ಕಾಲೇಜಿನ ವಾಲಿಬಾಲ್‌ ತಂಡದ ಆಟಗಾರ ರಾಗಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.