ಒಂದೇ ಶ್ವಾನಕ್ಕೆ ಎರಡೆರಡು ಶಸ್ತ್ರಚಿಕಿತ್ಸೆ!
Team Udayavani, May 7, 2018, 7:10 AM IST
ಉಡುಪಿ: ಇಲ್ಲಿನ ಮಾರುತಿ ವೀಥಿಕಾದಲ್ಲಿ ಹಲವು ಸಮಯ ದಿಂದ ಹೊಟ್ಟೆಯಡಿ ಗಡ್ಡೆ ಬೆಳೆದು ನರಳಾಡುತ್ತಿದ್ದ ಶ್ವಾನ ಕೊನೆಗೂ ಈಗ ನಿರಾಳವಾಗಿದೆ.
ನಗರಾಡಳಿತ ಮಾಡಿಸಿದ್ದ ಸಂತಾನ ಹರಣ ಶಸ್ತ್ರಚಿಕಿತ್ಸೆ ಬಳಿಕ ನಾಯಿಗೆ ಗಡ್ಡೆ ಬೆಳೆದಿದ್ದು, ಶಸ್ತ್ರಚಿಕಿತ್ಸೆ ವಿಫಲವಾಗಿ ಹೀಗಾಗಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು. ಶ್ವಾನಕ್ಕೆ ಪೇಟೆ ಸುತ್ತಮುತ್ತ ಜನ ಆಹಾರ ಹಾಕುತ್ತಿದ್ದು, ಅದರ ಕಷ್ಟ ನೋಡಿ, ಗಡ್ಡೆ ತೆಗೆಯುವ ಶಸ್ತ್ರ ಚಿಕಿತ್ಸೆಗೆ ಪ್ರಯತ್ನಿಸಿದ್ದರು. ಶ್ವಾನವನ್ನು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ವಿನಯಚಂದ್ರ ಸಾಸ್ತಾನ ಅವರೊಂದಿಗೆ ಶ್ರೀನಿಧಿ ಮೆಡಿಕಲ್ನ ಪ್ರಸಾದ್ ಭಟ್ ಕೆಮ್ಮಣ್ಣು ಅವರು ಶ್ವಾನವನ್ನು ಪಶು ವೈದ್ಯರಲ್ಲಿಗೆ ಕರೆದೊಯ್ದರು. ಪಶುಚಿಕಿತ್ಸಕ ಡಾ| ಸಂದೀಪ್ ಕುಮಾರ್ ಅವರು ಶ್ವಾನದ ಉದರ ಶಸ್ತ್ರಚಿಕಿತ್ಸೆ ನಡೆಸಿ 1.50 ಕೆ.ಜಿ. ಗೆಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈಗ ಶ್ವಾನ ಆರೋಗ್ಯವಾಗಿದ್ದು, ಎಂದಿನಂತೆ ಓಡಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!