ಉಡುಪಿ: ಪಡಿತರಕ್ಕೆ ಇನ್ನು ಮುಂದೆ ಎರಡೆರಡು ಒಟಿಪಿ


Team Udayavani, Sep 9, 2022, 7:20 AM IST

TDY-38

ಉಡುಪಿ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಸೆಪ್ಟಂಬರ್‌ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು.

ಸಾರ್ವಕಜನಿಕ ಪಡಿತ ವ್ಯವಸ್ಥೆಯಲ್ಲಿ ನೀಡುತ್ತಿರುವ ಅಕ್ಕಿ ಸಹಿತ ವಿವಿಧ ಆಹಾರ ಧಾನ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಪಾಲು ಎಷ್ಟಿದೆ ಮತ್ತು ಎಷ್ಟೆಷ್ಟು ಹಂಚಿಕೆ ಮಾಡಲಾಗುತ್ತಿದೆ ಎಂಬುದನ್ನು ಜನ ಸಾಮಾನ್ಯರಿಗೆ ಸ್ಪಷ್ಟವಾಗಿ ತಿಳಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸೆಪ್ಟಂಬರ್‌ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎರೆಡೆರೆಡು ಬಾರಿ ಬೆರಳಚ್ಚು, ಒಟಿಪಿ ನೀಡಬೇಕಿರುವುದರಿಂದ ಸ್ವಲ್ಪ ಕಿರಿಕಿರಿಯೂ ಆಗಬಹುದು. ಸರ್ವರ್‌ ಸಮಸ್ಯೆ ಎದುರಾದರೆ ವಿಳಂಬವೂ ಆಗಬಹುದು. ಆದರೆ, ಎರಡು ಬಾರಿ ಒಟಿಪಿ, ಬೆರಳಚ್ಚು ಮಾತ್ರ ನೀಡಲೇಬೇಕು.

ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಹಾಗೂ ರಾಜ್ಯ ಸರಕಾರ ರಾಷ್ಟ್ರೀಯ ಆಹಾರ ಭದ್ರತೆ ಅಡಿಯಲ್ಲಿ ಪಡಿತರ ವಿತರಣೆ ಮಾಡುತ್ತಿದೆ. ಅಂತ್ಯೋದಯ ಕಾರ್ಡ್‌ದಾರರಿಗೆ ಮತ್ತು ಆದ್ಯತ ಕಾರ್ಡ್‌(ಬಿಪಿಎಲ್‌)ದಾರರಿಗೆ ಪಡಿತರ ನೀಡಲಾಗುತ್ತದೆ. ಆಹಾರ ಭದ್ರತ ಕಾಯ್ದೆಯಡಿ ಅಂತ್ಯೋದಯ ಕಾರ್ಡ್‌ಗೆ ಪ್ರತಿ ಕಾರ್ಡ್‌ಗೆ 35 ಕೆ.ಜಿ., ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿ ಸದಸ್ಯರಿಗೆ 5 ಕೆ.ಜಿ. ನೀಡಲಾಗುತ್ತದೆ.

ಅಂತ್ಯೋದಯ ಕಾರ್ಡ್‌ದಾರರಿಗೆ 35 ಕೆ.ಜಿ. ಅಕ್ಕಿಯ ಜತೆಗೆ ಸದಸ್ಯರ ಸಂಖ್ಯೆ ಎಷ್ಟಿದೆ ಎನ್ನುವುದರ ಆಧಾರದಲ್ಲಿ ಹೆಚ್ಚುವರಿ ಅಕ್ಕಿ ಸಿಗುತ್ತದೆ. ಅದರಂತೆ 35ಕೆ.ಜಿ. ಅಕ್ಕಿಯ ಜತೆ 5 ಸದಸ್ಯರಿದ್ದರೆ 30 ಕೆ.ಜಿ. ಹೆಚ್ಚುವರಿಯಾಗಿ ಸಿಗುತ್ತದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಸದಸ್ಯರ ಸಂಖ್ಯೆಯ ಆಧಾರದಲ್ಲಿ ಪ್ರತಿ ಸದಸ್ಯರಿಗೆ 10 ಕೆ.ಜಿ. ಸಿಗುತ್ತದೆ. ಆದರೆ, ಈ ಹಿಂದೆ ಇದೆರಡಕ್ಕೂ ಪ್ರತ್ಯೇಕ ಬೆರಳಚ್ಚು, ಒಟಿಪಿ ನೀಡಬೇಕಾಗಿರಲಿಲ್ಲ. ಇನ್ನು ಮುಂದೆ ಎರಡಕ್ಕೂ ಪ್ರತ್ಯೇಕ ಒಟಿಪಿ ಹಾಗೂ ಬೆರಳಚ್ಚು ನೀಡಬೇಕು. ಆದರೆ ಹಿಂದೆ ಎಷ್ಟು ಅಕ್ಕಿ ಸಿಗುತಿತ್ತೋ ಅಷ್ಟೇ ಅಕ್ಕಿ ಸಿಗಲಿದೆ. ಅಕ್ಕಿ ಅಥವಾ ಆಹಾರ ಧಾನ್ಯದ ಹಂಚಿಕೆಯ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಈ ಸಂಬಧ ಮಾಹಿತಿಗೆ ಸಾರ್ವಜನಿಕರು 1967 ಅಥವಾ 14445ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.