ರಾಜ್ಯ ಕಾಂಗ್ರೆಸ್ ಮೀನುಗಾರಿಕಾ ವಿಭಾಗದ ಅಧ್ಯಕ್ಷ ಯು.ಆರ್. ಸಭಾಪತಿ
Team Udayavani, Aug 23, 2017, 10:10 AM IST
ಉಡುಪಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಅನುಮೋದನೆ ಮೇರೆಗೆ ಕಾಂಗ್ರೆಸ್ ಪಕ್ಷದ ರಾಜ್ಯ ಮೀನುಗಾರಿಕಾ ವಿಭಾಗದ ಅಧ್ಯಕ್ಷರಾಗಿ ಮಾಜಿ ಶಾಸಕ ಯು.ಆರ್.ಸಭಾಪತಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗೆ ನಿಯುಕ್ತಿಗೊಂಡ ಸಭಾಪತಿಯವರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ. ಮಾಜಿ ಶಾಸಕ ಗೋಪಾಲ ಭಂಡಾರಿ ಮತ್ತು ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್ ಅವರು ಮತ್ತಿಬ್ಬರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು. ಗೋಪಾಲ ಭಂಡಾರಿಯವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವೆರೋನಿಕಾ ಕರ್ನೇಲಿಯೋ ಅವರಿಗೆ ಕಾರವಾರ, ಹಲಿಯಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ.