ಉಚ್ಚಿಲ : ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರು ವಶ, ಓರ್ವ ಪರಾರಿ
Team Udayavani, Jun 2, 2022, 8:21 PM IST
ಪಡುಬಿದ್ರಿ : ಉಚ್ಚಿಲ ಭಾಸ್ಕರ ನಗರ ಜುಮ್ಮಾ ಮಸೀದಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಆರೋಪಿಗಳು, ಒಂದು ಜೀವಂತ ಹಸು, ಮಾಂಸಕ್ಕೆ ಕಡಿಯಲಾದ ಹಸು ಹಾಗೂ ಮಾರಾಟಕ್ಕೆ ತಯಾರಾಗಿ ಇರಿಸಲಾಗಿದ್ದ ಮಾಂಸವನ್ನು ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಚ್ಚಿಲ ಭಾಸ್ಕರ ನಗರದಲ್ಲಿ ಸಬಾನ್ ಎಂಬವರ ಮನೆಯಲ್ಲಿ ಈ ಕಸಾಯಿಖಾನೆ ಇತ್ತು. ಖಚಿತ ಮಾಹಿತಿ ಪಡೆದ ಪೊಲೀಸರು ಈ ಅಕ್ರಮ ಅಡ್ಡೆಗೆ ದಾಳಿ ನಡೆಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಗಳಾದ ಮಹಮ್ಮದ್ ರಫೀಕ್, ಇಲಿಯಾಸ್, ಮಹಮ್ಮದ್ ಮೊಹಿಯುದ್ದೀನ್, ಮೊಯ್ದಿನಬ್ಬ ಎಂಬ ನಾಲ್ವರನ್ನು ಪೊಲೀಸರು ಬಂಽಸಿದ್ದಾರೆ, ಪ್ರಮುಖ ಆರೋಪಿ ದಿಯು ರಫೀಕ್ ಎಂಬಾತ ಪರಾರಿಯಾಗಿದ್ದಾನೆ. ಈ ಕಾರ್ಯಾಚರಣೆಯಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಪಿಎಸ್ಐ ಪುರುಷೋತ್ತಮ ಹಾಗೂ ಪಡುಬಿದ್ರಿ ಮತ್ತು ಕಾಪು ವೃತ್ತ ನಿರೀಕ್ಷಕರ ಕಚೇರಿ ಸಿಬಂದಿ ಭಾಗವಹಿಸಿದ್ದರು.
ಇದನ್ನೂ ಓದಿ : ಅಫ್ಘಾನಿಸ್ತಾನಕ್ಕೆ ಭಾರತದ ನಿಯೋಗ ಭೇಟಿ : ಹಿರಿಯ ತಾಲಿಬಾನ್ ನಾಯಕರ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ