ಉಚ್ಚಿಲ : ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಲಕ್ಷಾಂತರ ರೂಪಾಯಿ ನಷ್ಟ
Team Udayavani, Dec 12, 2022, 5:32 PM IST
ಕಾಪು: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಘಟಿಸಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಕ್ಷುದ್ರಗೊಂಡು ದೋಣಿ ಮುಳುಗಿದೆ, ಬೇರೆ ದೋಣಿಗಳಲ್ಲಿ ಮೀನುಗಾರಿಕೆ ಮಾಡುತ್ತಿದ್ದ ದೋಣಿಯವರು ೭ ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ದೋಣಿಯಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು, ದೋಣಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲೀಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ .
ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ರವರು ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಸುಳ್ಯ: ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಕಾರು ಪಲ್ಟಿ: ತಾಯಿ ಮಗು ಮೃತ್ಯು, ನಾಲ್ವರು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ