ಉಚ್ಚಿಲ – ಪಣಿಯೂರು – ಮುದರಂಗಡಿ ರಸ್ತೆ: ಪೊದೆ ತೆರವು
Team Udayavani, Aug 3, 2018, 6:50 AM IST
ಕಾಪು: ಉಚ್ಚಿಲ ಪಣಿಯೂರು ಮುದರಂಗಡಿ ರಸ್ತೆಯ ಇಕ್ಕೆಲಗಳಲ್ಲಿ ರಸ್ತೆಯತ್ತ ಚಾಚಿರುವ ಗಿಡ ಮರಗಳ ಪೊದೆ, ಇಕ್ಕೆಲಗಳ ಚರಂಡಿಯನ್ನು ಶುಚಿಗೊಳಿಸುವತ್ತ ಲೋಕೋಪಯೋಗಿ ಇಲಾಖೆ ಕೊನೆಗೂ ಗಮನಹರಿಸಿದೆ.
ಉಚ್ಚಿಲದಿಂದ ಮುದರಂಗಡಿ ವರೆಗಿನ ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ಜೆಸಿಬಿ ಮೂಲಕ ಶುಚಿತ್ವ ಕಾಮಗಾರಿ ಭರದಿಂದ ಸಾಗುತ್ತಿದೆ. ಮಳೆ ಪ್ರಮಾಣವೂ ಕಡಿಮೆಯಾಗಿರುವುದ ರಿಂದ ಕಾಮಗಾರಿಯನ್ನು ವೇಗವಾಗಿ ನಡೆಸಲು ಸಾಧ್ಯವಾಗಿದೆ.
ಆದರೆ ಕೆಲವು ಕಡೆಗಳಲ್ಲಿ ಮಾತ್ರ ಈ ಇಕ್ಕೆಲಗಳ ಚರಂಡಿ ಬಿಡಿಸುವ ಮತ್ತು ಪೊದೆ ಕಡಿಯುವ ಕೆಲಸಗಳು ಕಾಟಾಚಾರಕ್ಕೆ ಮಾತ್ರ ಎಂಬಂತೆ ನಡೆಯುತ್ತಿದ್ದು, ಇದರಿಂದ ಜನರಿಗೆ ಉಪಯೋಗವಾಗುವ ಬದಲು ತೊಂದರೆಯೇ ಹೆಚ್ಚು ಎಂಬ ಆರೋಪಗಳೂ ಕೇಳಿ ಬರುತ್ತಿವೆ.
ಇಲ್ಲಿನ ರಸ್ತೆ ಪಕ್ಕದ ತ್ಯಾಜ್ಯದಿಂದಾಗಿ ಎದುರಾಗುತ್ತಿರುವ ಅಸಹನೀಯ ಪರಿಸ್ಥಿತಿ ಮತ್ತು ಪೊದೆ-ಗಿಡಗಳು ಬೆಳೆದು ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಉದಯವಾಣಿಯಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು.
ಉಚ್ಚಿಲ – ಪಣಿಯೂರು ರಸ್ತೆಯ ಕೆಲವೆಡೆ ಮತ್ತೆ ಮನೆ ತ್ಯಾಜ್ಯಗಳು, ಪ್ಲಾಸ್ಟಿಕ್ -ಕೊಳಚೆ ಮುಂತಾದ ಅಸಹ್ಯ ಸೊತ್ತುಗಳು ಚರಂಡಿಯಲ್ಲಿ ಶೇಖರಣೆಯಾಗುತ್ತಿದ್ದು, ಇದನ್ನು ತಂದು ಎಸೆಯುವ ಇಂತಹ ಅನಾಗರಿಕ ಪ್ರವೃತ್ತಿಯ ಜನರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಇಲಾಖೆಗಳನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್