ಉಚ್ಚಿಲ ಶ್ರೀ ಮಹಾಲಕ್ಷ್ಮೀ ಮಹಾರಥೋತ್ಸವ
Team Udayavani, Apr 13, 2017, 12:30 PM IST
ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಮೊಗವೀರರ ಕುಲಮಾತೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವರ ವರ್ಷಾವಧಿ ಶ್ರೀಮನ್ಮಹಾರಥೋತ್ಸವ ಬುಧವಾರ ನಡೆಯಿತು.
ದೇವಸ್ಥಾನದ ಪ್ರಧಾನ ತಂತ್ರಿಗಳಾದ ವೇ| ಮೂ| ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇ| ಮೂ| ವೆಂಕಟ ನರಸಿಂಹ ಉಪಾಧ್ಯಾಯ ಮತ್ತು ರಾಘವೇಂದ್ರ ಉಪಾಧ್ಯಾಯ ಅವರ ಹಿರಿಯನದಲ್ಲಿ ಧಾರ್ಮಿಕ ವಿಧಿಗಳು ನೆರವೇರಿದವು. ಮಧ್ಯಾಹ್ನ ಸಾಮೂಹಿಕ ಭೂರಿಭೋಜನ ನಡೆಯಿತು.
ಕಾಸರಗೋಡಿನ ಉಪ್ಪಳದಿಂದ ಉಡುಪಿ ಜಿಲ್ಲೆಯ ಮಣೂರು ವರೆಗಿನ ವಿವಿಧ ಗ್ರಾಮಗಳ ಕೂಡುಕಟ್ಟುಗಳ ಮೊಗವೀರ ಜನಾಂಗದವರು ತಮ್ಮ ಕುಲ ಕಸುಬಿಗೆ ರಜೆ ಸಾರಿ ಇಂದಿನ ಈ ರಥೋತ್ಸವಕ್ಕೆ ಆಗಮಿಸಿದ್ದರು.
ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗಂಗಾಧರ ಕರ್ಕೇರ, ಉಪಾಧ್ಯಕ್ಷ ಕೇಶವ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಕೂರಾಡಿ, ನಾಡೋಜ ಡಾ| ಜಿ. ಶಂಕರ್, ಎನ್.ಡಿ. ಬಂಗೇರ, ಶ್ರೀ ಮಹಾಲಕ್ಷಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ತಿಮ್ಮ ಮರಕಾಲ, ದ.ಕ. ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸರಳಾ ಕಾಂಚನ್, ಕಾರ್ಯದರ್ಶಿ ಸೇವಂತಿ ಸದಾಶಿವ, ಮಾಜಿ ಅಧ್ಯಕ್ಷ ಕೇಶವ ಕುಂದರ್, ವಾಸುದೇವ ಸಾಲ್ಯಾನ್, ಗಂಗಾಧರ ಸುವರ್ಣ, ಶರತ್ ಗುಡ್ಡೆಕೊಪ್ಲ, ಮಾಜಿ ಶಾಸಕ ಲಾಲಾಜಿ ಮೆಂಡನ್, ವಾಸುದೇವ ಸಾಲ್ಯಾನ್, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ಬಂಗೇರ, ವೇದವ್ಯಾಸ ಬಂಗೇರ, ದ.ಕ. ಮೊಗವೀರ ಸಂಘದ ಮುಂಬಯಿ ಘಟಕದ ಬಿ.ಜೆ. ಶ್ರೀಯಾನ್, ಮತ್ತಿತರ ವಿವಿಧ ಕೂಡುವಳಿಯ ಪ್ರಧಾನರು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿಯಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’