“ಉದಯವಾಣಿ’ಯಿಂದ ಇಂದು ಮಹಿಳಾ ದಿನಾಚರಣೆ
Team Udayavani, Mar 8, 2019, 1:00 AM IST
ಉಡುಪಿ: ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಕರಾವಳಿಯ ಜನಮನದ ಜೀವನಾಡಿ “ಉದಯವಾಣಿ’ ದಿನಪತ್ರಿಕೆಯು ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಜಿಲ್ಲೆಯ ಹಿರಿಯ ನಾಲ್ವರು ಮಹಿಳಾ ಅಧಿಕಾರಿಗಳೊಂದಿಗೆ ಆಚರಿಸುತ್ತಿದೆ.
ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಸಿಇಒ ಸಿಂಧೂ ಬಿ. ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಮಾ. 8ರಂದು ಮಣಿಪಾಲದ “ಉದಯವಾಣಿ’ ಪ್ರಧಾನ ಕಚೇರಿಗೆ ಆಗಮಿಸಿ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.
ಸಂಪಾದಕೀಯ ಬಳಗದೊಂದಿಗೆ ಸಂವಾದ ನಡೆಸುವ ಈ ಹಿರಿಯ ಅಧಿಕಾರಿಗಳು ಮಹಿಳಾ ಸಶಕ್ತೀಕರಣ, ಮಹಿಳಾಭಿವೃದ್ಧಿ ಉತ್ತೇಜನ, ಮಹಿಳೆಯರು ಎದುರಿಸುತ್ತಿರುವ ಸಮಸ್ಯೆ- ಸವಾಲುಗಳು, ಆರ್ಥಿಕ- ಸಾಮಾಜಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಇತ್ಯಾದಿ ಸಂಗತಿಗಳ ಕುರಿತು ಬೆಳಕು ಚೆಲ್ಲುವರು. ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್ ಕುಮಾರ್ ಅವರು ಭಾಗವಹಿಸುವರು.
ಮಹಿಳಾ ಸಶಕ್ತೀಕರಣಕ್ಕೆ ಉಡುಪಿಯೇ ಸಾಕ್ಷಿ
ಈ ಬಾರಿಯ ಮಹಿಳಾ ದಿನಾಚರಣೆ ವಿಶೇಷವೆಂದರೆ ಜಿಲ್ಲೆಯ ನಾಲ್ಕು ಪ್ರಮುಖ ಹುದ್ದೆಗಳ ಸಾರಥ್ಯವನ್ನು ವಹಿಸಿ ಜಿಲ್ಲೆಯನ್ನು ಮುನ್ನಡೆಸುತ್ತಿರುವವರು ಮಹಿಳೆಯರೇ. ಇವರೆಲ್ಲರಿಗೂ ಕಟ್ಟುನಿಟ್ಟಿನ ಅಧಿಕಾರಿಗಳೆಂಬ ಹೆಗ್ಗಳಿಕೆಯೂ ಇದೆ. ಇದಕ್ಕೆ ಪೂರಕವಾಗಿ ಉಸ್ತುವಾರಿ ಸಚಿವೆ ಜಯಮಾಲಾ ಹಾಗೂ ಸಂಸದೆ ಶೋಭಾ ಕರಂದ್ಲಾಜೆಯವರೂ ಇದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಮುನ್ನೋಟ ಹೊಂದಿರುವ ಈ ಅಧಿಕಾರಿಗಳಿಂದ ಸಾರ್ವಜನಿಕರೂ ಬಹಳ ನಿರೀಕ್ಷೆಯಲ್ಲಿದ್ದಾರೆ.
ಈ ದಿಸೆಯಲ್ಲೇ ಮಹಿಳಾ ದಿನಾಚರಣೆಯ ಸಂವಾದ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ