ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಗೆ ಸಿದ್ಧರಾಗಿ
Team Udayavani, Oct 14, 2022, 6:14 AM IST
ಮಣಿಪಾಲ: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಈಗಾಗಲೇ ಎಲ್ಲೆಡೆ ತಯಾರಿಗಳು ಆರಂಭವಾಗಿವೆ. ದೀಪಾವಳಿ ಅಂದ ಕೂಡಲೇ ಹೊಸ ಬಟ್ಟೆಯ ಸಂಭ್ರಮ ಎಲ್ಲರ ಮನದಲ್ಲೂ ಮೂಡುತ್ತದೆ. ಈಗಾಗಲೇ ಹೊಸ ಬಟ್ಟೆ ಖರೀದಿ ಎಲ್ಲೆಡೆ ಭರದಿಂದ ಸಾಗುತ್ತಿದೆ.
ಪ್ರತೀ ವರ್ಷದಂತೆ ಈ ಬಾರಿ ಕೂಡ ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಯನ್ನು ಆಯೋಜಿಸಲಿದೆ. ರೇಷ್ಮೆ ಸೀರೆ-ಉಡುಗೆಗಳನ್ನು ದೀಪಾವಳಿ ಸಂದರ್ಭ ತೊಟ್ಟು ಸಂಭ್ರಮಿಸಿದ ಫೋಟೋಗಳನ್ನು ಕಳುಹಿಸಿ ಬಹುಮಾನ ಗೆಲ್ಲಲು ಅವಕಾಶವಿದೆ.
ರೇಷ್ಮೆಯ ಪ್ರತಿಷ್ಠಿತ ಸ್ಥಾನವನ್ನು ಮತ್ತಷ್ಟು ಉನ್ನತಿಗೇರಿಸುವುದು ಹಾಗೂ ಸಾಂಪ್ರದಾಯಿಕತೆಗೆ ಒತ್ತು ನೀಡುವುದು ಈ ಸ್ಪರ್ಧೆಯ ಉದ್ದೇಶ. ಮನೆ ಮಂದಿ, ಕುಟುಂಬ ಸದಸ್ಯೆಯರು, ಗೆಳತಿಯರು ಹೀಗೆ ಗುಂಪಾಗಿ ಎಲ್ಲರೂ ರೇಷ್ಮೆ ಸೀರೆ ಧರಿಸಿ ದೀಪಾವಳಿ ಆಚರಿಸುವ ಫೋಟೋ ತೆಗೆದು ಕಳುಹಿಸಬಹುದು.
ಕಳೆದ ವರ್ಷ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಯ ಸಾವಿರಾರು ಮಂದಿ ಇದರಲ್ಲಿ ಭಾಗವಹಿಸಿದ್ದರು. ಈ ಬಾರಿ ಮತ್ತೂಮ್ಮೆ ರೇಷ್ಮೆ ಸೀರೆ ಧರಿಸಿ ಹಬ್ಬವನ್ನು ಸಂಭ್ರಮಿಸಿ, ಅದನ್ನು ಚಿತ್ರದ ಮೂಲಕ ಕಟ್ಟಿಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಿ. ಸ್ಪರ್ಧೆಯ ನಿಯಮಾವಳಿಗಳನ್ನು ಶೀಘ್ರವೇ ಪ್ರಕಟಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ