![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಆಹ್ವಾನ
Team Udayavani, Aug 23, 2018, 2:55 AM IST
![udayavani-logo-600.jpg](https://www.udayavani.com/wp-content/uploads/2018/08/22/udayavani-logo-600.jpg)
ಮಣಿಪಾಲ: ಈ ವರ್ಷದಿಂದ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುತ್ತಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ವಿಶೇಷವಾಗಿದ್ದು, ಓದಿನ ಜತೆಗೇ ಕೆಲವು ಸಮಯವನ್ನು ವಿನಿಯೋಗಿಸುವ ಮೂಲಕ ಉಚಿತವಾಗಿ ಉದಯವಾಣಿಯೊಂದಿಗೆ ಪತ್ರಿಕೋದ್ಯಮದ ಪ್ರಾಯೋಗಿಕ ಅನುಭವವನ್ನು ಪಡೆಯಬಹುದಾಗಿದೆ. ಬಿಎ ಹಾಗೂ ಎಂಎ ಓದುತ್ತಿರುವವರು ಈ ಯೋಜನೆಗೆ ಅರ್ಹರು. ಪ್ರಸ್ತುತ ಯಾವುದಾದರೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಯೋಜನೆಯಡಿ ವಿವಿಧ ಭಾಗಗಳಿಂದ ನಿಗದಿತ ಸಂಖ್ಯೆಯ ಆಸಕ್ತರನ್ನು ಆಯ್ದುಕೊಳ್ಳಲಾಗುವುದು.
ತರಬೇತಿ ವಿವರ
ಆಯ್ದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ನೀಡುವುದಲ್ಲದೆ, ನಾಲ್ಕು ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಲಾಗುವುದು. ವಾರದಲ್ಲಿ ಅವರು ಇರುವ ಸುತ್ತಲಿನ ಪ್ರದೇಶದಲ್ಲೇ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಮಾಡಲು ಅವಕಾಶ ನೀಡಲಾಗುವುದು. ಆ ಮೂಲಕ ಅವರಿಗೆ ವರದಿಗಾರಿಕೆಯಲ್ಲದೆ, ವರ್ಷದಲ್ಲಿ ಒಂದು-ಎರಡು ಬಾರಿ ಸುದ್ದಿಮನೆಯಲ್ಲೂ (ಡೆಸ್ಕ್) ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಮುಗಿದ ಮೇಲೆ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಯ ಪ್ರಮಾಣಪತ್ರ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದವರಿಗೆ ಅವಕಾಶವಿದ್ದಲ್ಲಿ ‘ಉದಯವಾಣಿ’ಯಲ್ಲೇ ಪರಿಗಣಿಸಲಾಗುವುದು.
ಆಯ್ಕೆ ಹೇಗೆ?
ಈ ಸಂಬಂಧ ಸೆಪ್ಟಂಬರ್ 19ರಂದು ಕಿರು ಪರೀಕ್ಷೆ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ಭಾಗದವರಿಗೆ ಪುತ್ತೂರಿನಲ್ಲಿ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರಿನವರಿಗೆ ಮಂಗಳೂರಿನಲ್ಲಿ; ಉಡುಪಿ, ಕಾರ್ಕಳದವರಿಗೆ ಉಡುಪಿಯಲ್ಲಿ ಹಾಗೂ ಕುಂದಾಪುರದವರಿಗೆ ಕುಂದಾಪುರದಲ್ಲಿ ಪರೀಕ್ಷೆ ನಡೆಯಲಿದೆ. ಬೆಳ್ತಂಗಡಿ ಮತ್ತು ಬಂಟ್ವಾಳದವರು ಪುತ್ತೂರಿನಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ.
ಆಸಕ್ತರು ತಮ್ಮ ಹೆಸರು, ಊರು, ಓದುತ್ತಿರುವ ಕೋರ್ಸ್-ವರ್ಷ, ಕಾಲೇಜಿನ ಹೆಸರು, ಸಂಪರ್ಕ ಸಂಖ್ಯೆ ಹಾಗೂ ಇ-ಮೇಲ್ ಐಡಿ ಈ ವಾಟ್ಸ್ಆಪ್ ನಂಬರ್ಗೆ 99641 69554ಗೆ ಅಥವಾ ಇಮೇಲ್ [email protected] ಗೆ ಸೆ. 5ರೊಳಗೆ ಕಳುಹಿಸಬೇಕು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.