ಉದ್ಯಾವರ: ಗುಂಡಿಗೆ ಕಲ್ಲು, ವಾಹನ ಸವಾರರಿಗೆ ಸಂಕಟ

ರಸ್ತೆಯ ಅವ್ಯವಸ್ಥೆಗೆ ಜನಾಕ್ರೋಶ

Team Udayavani, Nov 9, 2021, 5:16 AM IST

ಉದ್ಯಾವರ: ಗುಂಡಿಗೆ ಕಲ್ಲು, ವಾಹನ ಸವಾರರಿಗೆ ಸಂಕಟ

ಕಟಪಾಡಿ: ಉದ್ಯಾವರ ಪೇಟೆಯಿಂದ ಪಿತ್ರೋಡಿ ಸಂಪರ್ಕದ ಮುಖ್ಯ ರಸ್ತೆಯಲ್ಲಿನ ಹೊಂಡ ಗುಂಡಿಗಳ ಪೈಕಿ ಶಾಂತಿ ನಗರದ ಬಳಿಯಲ್ಲಿ ಬೃಹತ್‌ ಗಾತ್ರದ ಹೊಂಡವನ್ನು ಮುಚ್ಚುವ ಉದ್ದೇಶದಿಂದ ಕಳೆದ ಕೆಲವು ದಿನಗಳ ಹಿಂದೆ ಕಲ್ಲುಗಳನ್ನು ತಂದು ಸುರಿಯಲಾಗಿದೆ. ಆದರೆ ಇದೀಗ ಆ ಕಲ್ಲುಗಳ ರಾಶಿಯಿಂದಾಗಿ ವಾಹನ ಸವಾರರು ಸಂಕಟ ಪಡುವಂತಾಗಿದೆ.

ಗುಂಡಿಗೆ ತಂದು ಸುರಿಯಲಾಗಿರುವ ಕಲ್ಲುಗಳನ್ನು ಮಣ್ಣು ಹಾಕಿ ಸಮತಟ್ಟು ಮಾಡದೇ ಇದ್ದು, ಮಳೆಯ ಸಂದರ್ಭ ನೀರು ತುಂಬಿ ಅಂದಾಜು ತಪ್ಪಿದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಅಂತೂ ದಿನವಹಿ ಅವಾಂತರ ಸೃಷ್ಟಿಸುತ್ತಿರುವ ಈ ಗುಂಡಿಗಳಿಗೆ ಮುಕ್ತಿಯನ್ನು ಯಾವಾಗ ಕಲ್ಪಿಸುತ್ತಾರೆ ಎಂಬುದು ಸಾರ್ವಜನಿಕರಿಗೆ ಯಕ್ಷ ಪ್ರಶ್ನೆಯಾಗಿಯೇ ಉಳಿದಿದ್ದು, ನಿತ್ಯ ಈ ಭಾಗದಲ್ಲಿ ಸಂಚರಿಸುವ ಜನಪ್ರತಿನಿಧಿಗಳು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಜನತೆ ಆಗ್ರಹಿಸುತ್ತಿದ್ದಾರೆ

ಜನಾಕ್ರೋಶ
ಪಂಚಾಯತ್‌ ಕಚೇರಿ, ಖಾಸಗಿ ಅನುದಾನಿತ ಶಾಲೆಗಳು, ಮೀನು ಮಾರುಕಟ್ಟೆಗಳು, ರಿಕ್ಷಾ ತಂಗುದಾಣ, ಜನವಸತಿ ಪ್ರದೇಶಗಳು, ಮೆಸ್ಕಾಂ ಸಬ್‌ಸ್ಟೇಶನ್‌, ಪಶು ಚಿಕಿತ್ಸಾಲಯಗಳ ನಿತ್ಯ ಸಂಪರ್ಕಕ್ಕೆ ಅಗತ್ಯ ರಸ್ತೆಯಾಗಿ ಬಳಕೆಯಾಗುತ್ತಿದ್ದು, ಸದಾ ವಾಹನ ದಟ್ಟಣೆ ಮತ್ತು ಜನ ನಿಬಿಡ ಸಂಚಾರವನ್ನು ಹೊಂದಿರುತ್ತದೆ. ಪ್ರಯಾಣಿಕರ ಬಸ್‌ ಕೂಡ ನಿಗದಿತ ವೇಳೆಯಂತೆ ಈ ರಸ್ತೆಯಲ್ಲಿ ಸಂಚಾರ ನಡೆಸುತ್ತಿದೆ. ಇಷ್ಟೊಂದು ಅತ್ಯಾವಶ್ಯಕ ಬಳಕೆಯುಳ್ಳ ರಸ್ತೆಯ ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಶಾಸಕರಾದಿ ಜನಪ್ರತಿನಿಧಿಗಳು ಎಚ್ಚೆತ್ತು ಕೂಡಲೇ ಸ್ಪಂದಿಸ ಬೇಕಾದ ಆವಶ್ಯಕತೆ ಇದೆ ಎಂದು ಜನಾಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಚನ ಬಿಡುಗಡೆ ಮಾಡಿದ ಸಿಎಂ

ನಿತ್ಯ ಸಂಕಷ್ಟ
ಈ ಅವ್ಯವಸ್ಥೆಯ ವಿರುದ್ಧ ಜನಾಕ್ರೋಶ ಇದೆ. ಕೂಡಲೇ ಕಾಮಗಾರಿಯನ್ನು ಪೂರೈಸಿ ಹಾಗೂ ಗುಂಡಿ ಬಿದ್ದಿರುವ ರಸ್ತೆಯ ಭಾಗಗಳನ್ನು ಕೂಡಲೇ ಇಲಾಖೆಯು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿ ಇಲಾಖೆಯ ಅಧಿಕಾರಿಗಳದ್ದು. 2019ರಲ್ಲಿ ಕಾಪು ಕ್ಷೇತ್ರದ ಶಾಸಕರು ಗುದ್ದಲಿ ಪೂಜೆಯನ್ನು ನಡೆಸಿ 7 ಲಕ್ಷ ರೂ. ಪ್ಯಾಚ್‌ವರ್ಕ್‌ ಕಾಮಗಾರಿ ನಡೆದಿದ್ದು, ಒಂದೆರೆಡು ಮಳೆಗೆ ಮತ್ತೆ ಹೊಂಡಗುಂಡಿ ಕಾಡುತ್ತಿತ್ತು. ಇದೀಗ 1.5 ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ಇದೇ ರಸ್ತೆಯ ಅಭಿವೃದ್ಧಿ ಕಾಮಗಾರಿಯು ಕೇವಲ ಸೇತುವೆ ನಿರ್ಮಾಣ ಹಂತಕ್ಕೆ ನಿಂತಿದ್ದು ಗ್ರಾಮಸ್ಥರ ನಿತ್ಯ ಸಂಕಷ್ಟ ಮುಕ್ತಿ ಕಾಣದಂತಾಗಿದೆ.
– ಲಾರೆನ್ಸ್‌ ಡೇಸಾ, ಉದ್ಯಾವರ ಗ್ರಾ.ಪಂ. ಸದಸ್ಯರು

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.