ಸಕಾಲ, ಭೂಮಿ ಅರ್ಜಿ ವಿಲೇವಾರಿ: ರಾಜ್ಯದಲ್ಲಿ ಉಡುಪಿಗೆ ದ್ವಿತೀಯ ಸ್ಥಾನ
Team Udayavani, Sep 15, 2019, 5:00 AM IST
ಉಡುಪಿ: ಸಕಾಲ ಮತ್ತು ಭೂಮಿ ವಿಭಾಗದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಭೂಮಿ ಸೇವೆ
ಉಡುಪಿಯಲ್ಲಿ ಆಗಸ್ಟ್ನಲ್ಲಿ ಭೂಮಿ ವಿಭಾಗದಡಿ 4,672 ಅರ್ಜಿಗಳು ಸಲ್ಲಿಕೆಯಾಗಿದ್ದು, ಶೀಘ್ರವಾಗಿ ವಿಲೇವಾರಿ ಮಾಡಿ, ಸಿಗ್ಮಾ ರ್ಯಾಂಕಿಂಗ್ನಲ್ಲಿ 2.62 ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನಿಯಾಗಿದೆ.
ನೋಟಿಸ್ ಜಾರಿ
ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ನಲ್ಲಿ ಕೆಲವು ಗ್ರಾ.ಪಂ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದು ಅರ್ಜಿಯೂ ಸಕಾಲದಡಿ ಸ್ವೀಕೃತಿಯಾಗಿಲ್ಲ. ಇದಕ್ಕಾಗಿ ಜಿಲ್ಲಾಡಳಿತ 98 ಗ್ರಾ.ಪಂ.ಗಳು ಮತ್ತು 9 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ.
ಸಕಾಲಕ್ಕೆ ವಾಟ್ಸ್ಆ್ಯಪ್ ಗ್ರೂಪ್ ಮೊರೆ!
ಸಕಾಲದಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ತುರ್ತು ವಿಲೇವಾರಿಗೆ ವಾಟ್ಸ್ಆ್ಯಪ್ ಗ್ರೂಪ್ ರಚಿಸಿದ್ದು, ಅಪರ ಜಿಲ್ಲಾಧಿಕಾರಿಯವರು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳಿಂದ ನಿತ್ಯ ಬಾಕಿಯಿರುವ ಅರ್ಜಿಗಳ ಮಾಹಿತಿ ಪಡೆಯುತ್ತಿದ್ದಾರೆ.
ರಾಜ್ಯ ಸರಕಾರ ಬಿಡುಗಡೆ ಮಾಡಿದ ಆಗಸ್ಟ್ ತಿಂಗಳ ಜಿಲ್ಲಾವಾರು ರ್ಯಾಂಕಿಂಗ್ ಪಟ್ಟಿಯಲ್ಲಿ ಉತ್ತರ ಕನ್ನಡ, ಉಡುಪಿ, ದಾವಣಗೆರೆ, ತುಮಕೂರು, ಬಳ್ಳಾರಿ, ಹಾಸನ, ಚಿತ್ರದುರ್ಗ, ಧಾರವಾಡ, ಬಾಗಲಕೋಟೆ 10ರ ಒಳಗಿನ ಸ್ಥಾನವನ್ನು ಪಡೆದುಕೊಂಡರೆ ದ.ಕ. ಜಿಲ್ಲೆ 17ನೇ ಸ್ಥಾನವನ್ನು ಪಡೆದುಕೊಂಡಿದೆ.
ಸಕಾಲದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದೆ ಮತ್ತು ವಿಲೇವಾರಿಯಾಗದ ಅರ್ಜಿಗಳ ಮಾಹಿತಿ ಪಡೆದು ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಎಲ್ಲ ಅರ್ಜಿಗಳು ಸಕಾಲದ ಮೂಲಕ ಸಲ್ಲಿಕೆಯಾಗುವಂತೆ ಎಚ್ಚರ ವಹಿಸಲಾಗುತ್ತಿದೆ.
-ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ, ಉಡುಪಿ
ವೇಗ ಪಡೆದ ಕಡತ ವಿಲೇವಾರಿ
“ಸಕಾಲ’ದಲ್ಲಿ ಸಮಯಕ್ಕೆ ಸರಿಯಾಗಿ ಅರ್ಜಿ ವಿಲೇವಾರಿ ಮಾಡದ ಅಧಿಕಾರಿಯ ವೇತನವನ್ನು ದಿನಕ್ಕೆ 20 ರೂ.ಗಳಂತೆ ಕಡಿತಗೊಳಿಸುವ ಮತ್ತು ನೋಟಿಸ್ ನೀಡುವ ಪ್ರಕ್ರಿಯೆ ಜಿಲ್ಲಾಡಳಿತದ ವತಿಯಿಂದ ವೇಗ ಪಡೆದುಕೊಂಡಿದೆ. ನಿಗದಿತ ಸಮಯದೊಳಗೆ ಅರ್ಜಿ ವಿಲೇವಾರಿ ಮಾಡುವ ಸಿಬಂದಿಗೆ ಪ್ರಶಂಸಾ ಪತ್ರ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ