ಉಡುಪಿ: 10 ಕಟ್ಟಡ, 20 ವಿದ್ಯುತ್ ಕಂಬಗಳಿಗೆ ಹಾನಿ
Team Udayavani, Jun 10, 2018, 6:00 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಭಾರೀ ಮಳೆಯಾಗಿದ್ದು ಒಟ್ಟು 10 ಕಟ್ಟಡಗಳಿಗೆ ಹಾನಿಯಾಗಿದೆ. ಕಾಪು ತಾಲೂಕಿನಲ್ಲಿ 8, ಉಡುಪಿ ತಾ. 1 ಪ್ರಕರಣ, ಕಾರ್ಕಳ ತಾ. ಹೆರ್ಮುಂಡೆ ದೇವಸ್ಥಾನದ ಆವರಣಗೋಡೆ ಕುಸಿತ ಸೇರಿ 10 ಪ್ರಕರಣಗಳು ದಾಖಲಾಗಿವೆ. ಉಡುಪಿ, ಕಾಪು, ಬ್ರಹ್ಮಾವರ, ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು ಮೊದಲಾದೆಡೆ ಉತ್ತಮ ಮಳೆಯಾಯಿತು.
ಉಡುಪಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಮತ್ತು ಶನಿವಾರ ಬೆಳಗ್ಗಿನ ಜಾವ ಬೀಸಿದ ಬಲವಾದ ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಬಿದ್ದಿವೆ. ಮಣಿಪಾಲ ಪರಿಸರದಲ್ಲಿ ಸುಮಾರು 20ರಷ್ಟು ಕಂಬಗಳಿಗೆ ಹಾನಿಯಾಗಿದೆ. ವಿದ್ಯುತ್ ಮರುಸಂಪರ್ಕ ಮಾಡುವ ಕೆಲಸಗಳು ನಡೆಯುತ್ತಿವೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಉದ್ಯಾವರ ಪಡುಕೆರೆಯಲ್ಲಿ ಸುಂದರಿ ಅವರ ಮನೆಗೆ ತೆಂಗಿನ ಮರ ಬಿದ್ದು 20,000 ರೂ. ಹಾನಿಯಾಗಿದೆ. ಶನಿವಾರ ಸಂಜೆ ಪರ್ಕಳ ಗರೋಡಿ ರಸ್ತೆಯಲ್ಲಿ ವಿದ್ಯುತ್ ಕಂಬ ಮತ್ತು ರಸ್ತೆಗೆ ಮರಬಿದ್ದಿತ್ತು. ಅನಂತರ ಅಗ್ನಿಶಾಮಕ ದಳದವರುಬಂದು ರಸ್ತೆ ತೆರವುಗೊಳಿಸಿದರು. ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಬ್ರಹ್ಮಾವರ: ಮನೆಗಳಿಗೆ ಹಾನಿ
ಬ್ರಹ್ಮಾವರ: ಗಾಳಿ ಮಳೆ ಪರಿಣಾಮ ವಾರಂಬಳ್ಳಿ ಗ್ರಾಮ ಉಪ್ಪಿನಕೋಟೆಯ ಎಸ್ಪೆಥಿನ ಡಿ’ಸೋಜಾ, ಆರೂರು ಬೆಳಾರಿನ ಕೂಸು ಪೂಜಾರಿ ಅವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ