ಉಡುಪಿ: 10 ಸಾವಿರ ಮೆಟ್ರಿಕ್‌ ಟನ್‌ ಮರಳು ಪೂರೈಕೆ

ಸಮಸ್ಯೆ ತಕ್ಕ ಮಟ್ಟಿಗೆ ನಿವಾರಣೆ ; 2020ಕ್ಕೆ ಉಡುಪಿಯಲ್ಲೂ ಸ್ಯಾಂಡ್‌ ಬಜಾರ್‌ ಆ್ಯಪ್‌

Team Udayavani, Oct 9, 2019, 4:31 AM IST

S-23

ಉಡುಪಿ: ಜಿಲ್ಲೆಯಲ್ಲಿ ಮರಳುಗಾರಿಕೆ ಸಮಸ್ಯೆ ತಕ್ಕ ಮಟ್ಟಿಗೆ ನಿವಾರಣೆಯಾಗುತ್ತಿದೆ. ಇಲ್ಲಿಯವರೆಗೆ 10 ಸಾವಿರ ಮೆ. ಟನ್‌ಗಳಷ್ಟು ಮರಳು ಒದಗಿಸಲಾಗಿದೆ. ಪರವಾನಿಗೆ ನೀಡುವ ಕೆಲಸ ನಡೆಯುತ್ತಿದ್ದು, 170 ಮಂದಿ ಪರವಾನಿಗೆದಾರರಲ್ಲಿ 158 ಮಂದಿ ಅರ್ಹರು ಎಂದು ಗುರುತಿಸಲಾಗಿದೆ. 120 ಮಂದಿಗೆ ಪರವಾನಿಗೆ ನೀಡಲಾಗಿದೆ. ರಜೆ ಇದ್ದ ಕಾರಣ ಎರಡು ದಿನಗಳಿಂದ ಈ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮರಳು ಸಾಗಾಟದ ಎಲ್ಲ ಲಾರಿಗಳಿಗೆ ಜಿಪಿಎಸ್‌ ಅಳವಡಿಸಲಾಗಿದ್ದು, ಜಿಲ್ಲೆಯಿಂದ ಮರಳು ಹೊರಗೆ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಉಲ್ಲಂ ಸಿದರೆ ಪ್ರಕರಣ ಪರವಾನಗಿದಾರರಿಗೆ 28 ಷರತ್ತು ವಿಧಿಸಲಾಗಿದೆ. ಯಾವುದೇ ಅಂಶ ಉಲ್ಲಂಘನೆಯಾದರೂ ದಂಡ ತಪ್ಪಿದ್ದಲ್ಲ. ಮರಳು ದಿಬ್ಬ ತೆರವಿಗೆ 170ಕ್ಕಿಂತ ಹೆಚ್ಚು ಪರವಾನಗಿ ನೀಡದಿರಲು ಜಿಲ್ಲೆಯ ಏಳು ಸದಸ್ಯರ ಸಮಿತಿ ನಿರ್ಧರಿಸಿದೆ. 2011ಕ್ಕಿಂತ ಮೊದಲು ಸಾಂಪ್ರದಾಯಿಕ ಮರಳು ದಿಬ್ಬ ತೆರವು ಮಾಡುತ್ತಿದ್ದ 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣವಿದೆ.

2020ಕ್ಕೆ ಸ್ಯಾಂಡ್‌ ಬಜಾರ್‌ ಆ್ಯಪ್‌
ಈಗಾಗಲೇ 7.96 ಲಕ್ಷ ಮೆ. ಟನ್‌ಗಳಷ್ಟು ಮರಳು ತೆರವಿಗೆ ಆದೇಶ ಬಂದಿದ್ದು, ಈ ಪ್ರಕ್ರಿಯೆ ಡಿಸೆಂಬರ್‌ ಅಂತ್ಯದವರೆಗೂ ನಡೆಯಲಿದೆ. ಅನಂತರ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಸಾರ್ವಜನಿಕರು ಸಮೀಪದಿಂದಲೇ ಮರಳು ಪಡೆಯಬಹುದು. ಆನ್‌ಲೈನ್‌ನಲ್ಲಿ ಮರಳಿನ ದರ ತಿಳಿದು ಹಣವನ್ನೂ ಅಲ್ಲಿಯೇ ಪಾವತಿಸಿದರೆ ಮನೆ ಬಾಗಿಲಿಗೆ ಮರಳು ತಲುಪಲಿದೆ. ಇದಕ್ಕಾಗಿ ಪ್ರತ್ಯೇಕ ವಾಹನ ಬಾಡಿಗೆ ಪಾವತಿಸುವ ಅಗತ್ಯವಿಲ್ಲ. ಮರಳು ಬುಕ್‌ ಮಾಡಿದ ಅನಂತರ ಮರಳು ಲೋಡ್‌ ಆದಲ್ಲಿಂದ ಪ್ರತೀ ಮಾಹಿತಿ ಗ್ರಾಹಕರ ಮೊಬೈಲಿಗೆ ಬರಲಿದೆ. ಅತ್ಯಂತ ಪಾರದರ್ಶಕವಾಗಿ ಮರಳು ವಿತರಣೆ ಪ್ರಕ್ರಿಯೆ ನಡೆಯಲಿದೆ. ಮರಳು ಗುತ್ತಿಗೆದಾರರ ಮತ್ತು ಮರಳು ಸಾಗಾಟ ಮಾಡುವ ವಾಹನಗಳ ನೋಂದಣಿ ಕೂಡ ಆ್ಯಪ್‌ನಲ್ಲಿ ನಡೆಯಲಿದೆ.

ಹೀಗಿದೆ ಮರಳು ದರ
ಮರಳು ಸಾಗಿಸುವ 600 ಲಾರಿಗಳಿಗೆ ಜಿಪಿಎಸ್‌, ಮರಳು ಧಕ್ಕೆಗೆ ಜಿಪಿಎಸ್‌ ಸಹಿತ ಜಿಯೋ ಫೆನ್ಸಿಂಗ್‌ ಅಳವಡಿಸಲಾಗಿದೆ. 10 ಟನ್‌ ಮರಳಿಗೆ 5,500 ರೂ. ದರ ನಿಗದಿಪಡಿಸಿದ್ದು, ಪ್ರತಿ ಟನ್‌ ಮರಳು ಸಾಗಾಟಕ್ಕೆ 96 ರೂ. ರಾಜಧನ ಪಾವತಿಸಬೇಕು. 20 ಕಿ.ಮೀ. ವ್ಯಾಪ್ತಿಯೊಳಗೆ ಸಣ್ಣ ವಾಹನದ ಮೂಲಕ ಮರಳು ಸಾಗಾಟಕ್ಕೆ 1,500 ರೂ., ಬಳಿಕದ ಪ್ರತಿ ಕಿ.ಮೀ.ಗೆ 35 ರೂ. ಸಾಗಣೆ ವೆಚ್ಚ ನಿಗದಿಯಾಗಿದೆ. 20 ಕಿ. ಮೀ. ಒಳಗೆ ದೊಡ್ಡ ವಾಹನದಲ್ಲಿ ಮರಳು ಸಾಗಿಸಲು 2,500 ರೂ. ಮತ್ತು ಹೆಚ್ಚುವರಿ ಪ್ರತಿ ಕಿ.ಮೀ.ಗೆ 50 ರೂ.ನಂತೆ ದರ ವಸೂಲಿ ಮಾಡಲಾಗುತ್ತಿದೆ.

ಅಪಾರ ಬೇಡಿಕೆ
3 ತಿಂಗಳುಗಳ ಕಾಲ ಪರವಾನಿಗೆ ನೀಡುವ ಕೆಲಸ ನಡೆಯಲಿದೆ. ಮರಳು ಲಭ್ಯತೆ ಇರುವ ಧಕ್ಕೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಹಲವರಿಂದ ಬೇಡಿಕೆ ವ್ಯಕ್ತವಾಗಿದ್ದು, ಪರವಾನಿಗೆ ಪೂರ್ಣಗೊಂಡ ಅನಂತರ ಬೇಡಿಕೆಗೆ ಅನುಸಾರ ಪೂರೈಸಲಾಗುವುದು. ಮುಂದಿನ ವರ್ಷಕ್ಕೆ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಮರಳು ವಿತರಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
-ರಾನ್ಜಿ ನಾಯಕ್‌,
ಹಿರಿಯ ಭೂ ವಿಜ್ಞಾನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.