ಉಡುಪಿ: 23,000 ಪ್ರಕರಣದ ಇತ್ಯರ್ಥ ಬಾಕಿ: ವೆಂಕಟೇಶ್‌ ನಾಯ್ಕ


Team Udayavani, Jul 15, 2017, 2:15 AM IST

140717ppe1.jpg

ಉಡುಪಿ: ದೇಶದಲ್ಲಿರುವ ನ್ಯಾಯಾಧೀಶರ ಸಂಖ್ಯೆ ಕಡಿಮೆ ಇರುವುದರಿಂದ ನ್ಯಾಯಾಲಯಕ್ಕೆ ಬಂದ ಪ್ರಕರಣಗಳ ವಿಲೇವಾರಿ ತಡವಾಗುತ್ತಿದೆ. ಉಡುಪಿ ಜಿಲ್ಲೆಯೊಂದರಲ್ಲಿಯೇ 1968 ರಿಂದ ಈವರೆಗೆ 23 ಸಾವಿರ ಕಡತಗಳ ವಿಲೇವಾರಿ ಬಾಕಿ ಇದೆ. ಮಧ್ಯಸ್ಥಿಕೆ ವಹಿಸುವ ಪ್ರಕ್ರಿಯೆ ಹೆಚ್ಚಾದಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥ ಸಾಧ್ಯ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ ಟಿ. ಹೇಳಿದರು. 

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಉಡುಪಿ ಸಂಯುಕ್ತಾಶ್ರಯದಲ್ಲಿ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಮಧ್ಯಸ್ಥಿಕೆದಾರರಿಗೆ ಜಿಲ್ಲಾ ಮಟ್ಟದ 3 ದಿನಗಳ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. 

ಪ್ರಾಚೀನ ದಿನಗಳಲ್ಲಿ ನ್ಯಾಯ ದೊರಕಿಸುವ ಪ್ರಕ್ರಿಯೆ ಸರಳ ಹಾಗೂ ಸುಲಭವಾಗಿತ್ತು. ಹಳ್ಳಿಕಟ್ಟೆ, ಪಂಚಾಯತ್‌ ಕಟ್ಟೆಗಳಲ್ಲಿ ಒಂದೇ ದಿನದಲ್ಲಿ ಪ್ರಕರಣ ಇತ್ಯರ್ಥವಾಗುತ್ತಿತ್ತು. ಆದರೆ ಈಗ ಕಾನೂನು ಹೆಚ್ಚು ಸಂಕೀರ್ಣತೆಗೊಳ್ಳುತ್ತಿದ್ದು, ಇದರಿಂದ ನೀತಿ ತತ್ವದಡಿ ಶೀಘ್ರ ಅರ್ಜಿಯನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಎರಡೂ ಕಡೆಯವರನ್ನು ಮಾತುಕತೆಗೆ ಕರೆದು ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸುವುದು ಉತ್ತಮ ಮಾರ್ಗ. ಮಧ್ಯಸ್ಥಿಕೆದಾರರಿಗೆ ಆಳವಾದ ಕಾನೂನಿನ ಜ್ಞಾನ, ವಿಷಯದ ಜ್ಞಾನ ಅತ್ಯಗತ್ಯ. ಮಧ್ಯಸ್ಥಿಕೆಯಿಂದ ಶೇ. 25 ರಷ್ಟು ಪ್ರಕರಣಗಳನ್ನು ಕಡಿಮೆಗೊಳಿಸಲು ಸಾಧ್ಯ ಎಂದರು. 

ವಕೀಲರ ಸಂಘದ ಮಾಜಿ ಅಧ್ಯಕ್ಷ ಮಾಧವ ಆಚಾರ್‌ ಮಾತನಾಡಿ ಯಾವುದೇ ಸಂಕೀರ್ಣತೆ ಇರುವ ಪ್ರಕರಣಗಳನ್ನು ರಾಜಿಯಲ್ಲಿ ಕೊನೆಗೊಳಿಸುವುದರಿಂದ ಎರಡೂ ಕಡೆಯವರಿಗೂ ಅನ್ಯಾಯವಾಗುವುದಿಲ್ಲ. ಇದರಿಂದ ಸಾಮಾಜಿಕ ನ್ಯಾಯ ಸಾಧ್ಯ. ಇದು ನ್ಯಾಯಾಂಗದ ಉತ್ತಮ ಕಾರ್ಯ ಎಂದರು. 

ಉಡುಪಿ ವಕೀಲರ ಸಂಘದ ಅಧ್ಯಕ್ಷ ಎಚ್‌. ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಹಿರಿಯ ಸವಿಲ್‌ ನ್ಯಾಯಾಧೀಶ, ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿವೇಕಾನಂದ ಎಸ್‌. ಪಂಡಿತ್‌, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ತರಬೇತಿದಾರರಾದ ಎಸ್‌. ಎನ್‌. ಪ್ರಶಾಂತ್‌ ಚಂದ್ರ, ಜೊ. ಜೋಸೆಫ್, ತಾ.ಪಂ. ಅಧ್ಯಕ್ಷ ನಳಿನಿ ಪ್ರದೀಪ್‌ ರಾವ್‌ ಉಪಸ್ಥಿತರಿದ್ದರು. ಹಿರಿಯ ಸಿವಿಲ್‌ ನ್ಯಾಯಾಧೀಶೆ ಲತಾ ಸ್ವಾಗತಿಸಿದರು. ಶ್ರೀಶ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. 
 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.