ಉಡುಪಿಯ ಆದರ್ಶ ಆಸ್ಪತ್ರೆ: ವೈದ್ಯರ ದಿನಾಚರಣೆ
Team Udayavani, Jul 2, 2018, 6:45 AM IST
ಉಡುಪಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಖಾಸಗಿ ಆಸ್ಪತ್ರೆಗಳು ದತ್ತು ತೆಗೆದುಕೊಳ್ಳುವಂತೆ ನಾವು ವಿನಂತಿ ಮಾಡಲಿದ್ದೇವೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಅವರು ರವಿವಾರ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಎಷ್ಟೋ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ. ಉಡುಪಿಗೆ ಸಮೀಪದ ಮಲ್ಪೆಯ ಪಡುಕರೆ ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ವೈದ್ಯರೇ ಇಲ್ಲ. ಗ್ರಾಮೀಣ ಭಾಗದಲ್ಲಿ ಇಂತಹ ಸಮಸ್ಯೆ ಬಹಳಷ್ಟು ಇದೆ. ಇದಕ್ಕೆ ಖಾಸಗಿ ಆಸ್ಪತ್ರೆಗಳು ಒಂದೊಂದು ಪ್ರಾಥಮಿಕ ಆರೋಗ್ಯವನ್ನು ದತ್ತು ತೆಗೆದುಕೊಂಡು ನಿಮ್ಮ ಒಬ್ಬರು ವೈದ್ಯರ ಸೇವೆಯನ್ನು ಅಲ್ಲಿ ನೀಡಿದರೂ ಸಾಕು. ಬಹಳಷ್ಟು ಬಡವರಿಗೆ ಅನುಕೂಲವಾಗುತ್ತದೆ ಈ ಕುರಿತು ಮೊನ್ನೆ ನಡೆದ ಜಿಲ್ಲಾ ಸರ್ಜನ್ ಮತ್ತು ವೈದ್ಯಾಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲೂ ಈ ಕುರಿತು ಪ್ರಸ್ತಾಪ ಮಾಡಿದ್ದೇನೆ ಎಂದರು.
ಈ ಸಂದರ್ಭ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ ಡಾ| ವೆಂಕಟಗಿರಿ ರಾವ್ ಎ. ಕೆ., ಡಾ| ರಮೇಶ್ ರಾವ್, ಡಾ| ನಿತ್ಯಾನಂದ ನಾಯಕ್, ಡಾ| ನೀನಾ ರಾಣಿ ಹೆಗ್ಡೆ , ಡಾ| ರಾಜೇಶ್ವರಿ ಇವರನ್ನು ಸಮ್ಮಾನಿಸಲಾಯಿತು. ನೂತನ ಶಾಸಕರಾಗಿ ಆಯ್ಕೆಯಾದ ರಘುಪತಿ ಭಟ್ ಅವರನ್ನು ಗೌರವಿಸಲಾಯಿತು.
ಹಿರಿಯ ನರರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಪ್ರೊ| ಎ. ರಾಜಾ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಜಿ.ಎಸ್ ಚಂದ್ರಶೇಖರ್ ಸ್ವಾಗತಿಸಿ, ಪ್ರಕಾಶ್ ಟಿ. ಕೆ. ವಂದಿಸಿ, ಡಿಯಾಗೋ ಕ್ವಾರ್ಡಸ್ ನಿರೂಪಿಸಿದರು.
ಮಕ್ಕಳ ಆಸ್ಪತ್ರೆಗೆ ಸಂಪೂರ್ಣ ಖಾಸಗಿ ನಿರ್ವಹಣೆ ಸಲ್ಲ
ಹೆಂಗಸರ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಂಪೂರ್ಣ ಖಾಸಗಿಯವರು ನಿರ್ವಹಿಸುವುದು ನನಗೆ ಸರಿ ಕಾಣುವುದಿಲ್ಲ. ಮುಂದಿನ ದಿನಗಳಲ್ಲಿ ಇದು ಗೊಂದಲಕ್ಕೆ ಎಡೆ ಮಾಡುತ್ತದೆ. ಹಾಜಿ ಅಬ್ದುಲ್ಲಾ ಸಾಹೇಬರು ಈ ಆಸ್ಪತ್ರೆ ಸಂಪೂರ್ಣ ಧರ್ಮಾಸ್ಪತ್ರೆಯಾಗಿರಬೇಕೆಂದು ದಾನ ಪತ್ರ ನೀಡಿದ್ದರು. ಆದರೆ ಹಿಂದಿನ ಸರಕಾರ ಈ ಕುರಿತು ತಪ್ಪನ್ನು ಎಸಗಿದ್ದಾರೆ. ಈ ತಪ್ಪನ್ನು ಈಗಿನ ಸರಕಾರ ಸರಿಪಡಿಸಿಕೊಳ್ಳಬೇಕು
– ರಘುಪತಿ ಭಟ್,ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ