![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Udupi; ಹಲ್ಲೆ: ದೂರು, ಪ್ರತಿದೂರು ದಾಖಲು
Team Udayavani, Feb 25, 2024, 12:39 AM IST
![Udupi; ಹಲ್ಲೆ: ದೂರು, ಪ್ರತಿದೂರು ದಾಖಲು](https://www.udayavani.com/wp-content/uploads/2024/02/complaint-4-620x365.jpg)
ಉಡುಪಿ: ಹೊಟೇಲ್ ವ್ಯವಹಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ಯಾಗಿರುವ ಬಗ್ಗೆ ದೂರು, ಪ್ರತಿದೂರು ದಾಖಲಾಗಿದೆ.
ಈ ಬಗ್ಗೆ ಮೂಡನಿಡಂಬೂರು ಗ್ರಾಮದ ರಾಘವೇಂದ್ರ (46) ನೀಡಿದ ದೂರಿನಂತೆ ಆದರ್ಶ (32) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಮತ್ತು ದೂರುದಾರರ ನಡುವೆ ಹೊಟೇಲ್ ವ್ಯವಹಾರದ ಬಗ್ಗೆ ಒಪ್ಪಂದವಾಗಿದ್ದು, ಇದನ್ನು ರದ್ದುಪಡಿಸಿ ಆರೋಪಿ ನೀಡಿದ್ದ ಮುಂಗಡ ಹಣವನ್ನು ವಾಪಸ್ ನೀಡುವ ಬಗ್ಗೆ ಫೆ. 23ರಂದು ಮಾತುಕತೆ ನಡೆಯುತ್ತಿತ್ತು. ಈ ಸಂದರ್ಭ ಆರೋಪಿಯು ಏಕಾಏಕಿ ರೊಚ್ಚಿಗೆದ್ದು ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿದೂರು
ತಾನು ರಾಘವೇಂದ್ರ ಹಾಗೂ ಇತರರ ಪಾಲುದಾರಿಕೆಯ ಹೊಟೇಲಿನ ವ್ಯವಹಾರದ ಬಗ್ಗೆ ಮಾತನಾಡಲೆಂದು ಅವರ ಕಚೇರಿಗೆ ಹೋಗಿದ್ದು, ಮುಂಗಡ ನೀಡಿದ್ದ 2 ಲಕ್ಷ ರೂ. ಅನ್ನು ವಾಪಸ್ ನೀಡುವಂತೆ ಕೇಳಿದ್ದೆ. ಆಗ ಕೋಪಗೊಂಡ ರಾಘವೇಂದ್ರ ಹಾಗೂ ಇತರರು ನನ್ನ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ನನ್ನ 4 ಪವನ್ ತೂಕದ ಚಿನ್ನದ ಸರ ಹಾಗೂ 10 ಸಾ.ರೂ. ಇದ್ದ ಪರ್ಸ್ ಕಾಣೆಯಾಗಿದೆ ಎಂದು ಆದರ್ಶ್ ಆರೋಪಿಸಿದ್ದಾರೆ. ಈ ಸಂಬಂಧ ಮಂಜುನಾಥ, ರಾಘವೇಂದ್ರ, ಹೇಮಂತ್, ದಿನೇಶ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.