ಉಡುಪಿ: ಕಾಂಗ್ರೆಸ್‌ಗಿಂತ ಬಿಜೆಪಿ ಅಭ್ಯರ್ಥಿಯದ್ದೇ ಕುತೂಹಲ


Team Udayavani, Mar 9, 2023, 7:34 AM IST

ಉಡುಪಿ: ಕಾಂಗ್ರೆಸ್‌ಗಿಂತ ಬಿಜೆಪಿ ಅಭ್ಯರ್ಥಿಯದ್ದೇ ಕುತೂಹಲ

ಉಡುಪಿ: ಜಿಲ್ಲಾ ಕೇಂದ್ರದ ಉಡುಪಿ ವಿಧಾನಸಭಾ ಕ್ಷೇತ್ರ ವಿಶಿಷ್ಟವಾದ ಕ್ಷೇತ್ರ. ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡನ್ನೂ ಬೆಂಬಲಿಸಿದ ಕ್ಷೇತ್ರ. ಸದ್ಯಕ್ಕೆ ಬಿಜೆಪಿಯ ಕೋಟೆ. ದಕ್ಷಿಣ ಭಾರತದಲ್ಲಿ ಜನಸಂಘದ ಕಾಲದಲ್ಲಿ ಮೊದಲ ಪುರಸಭೆ ಗೆದ್ದು ಗದ್ದುಗೆ ಏರಿದ ಖ್ಯಾತಿಯೂ ಉಡುಪಿ ಬಿಜೆಪಿಯದ್ದು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸಾಕಷ್ಟು ಬಾರಿ ಈ ಕ್ಷೇತ್ರದ ಮತದಾರರು ಬೆಂಬಲಿಸಿದ್ದಾರೆ.

1962ರಿಂದ 78ರ ವರೆಗೂ ಕಾಂಗ್ರೆಸ್‌ನ ಮಲ್ಪೆ ಮಧ್ವರಾಜ್‌, ಮನೋರಮಾ ಮಧ್ವರಾಜ್‌, ಎಸ್‌.ಕೆ. ಅಮೀನ್‌ ಶಾಸಕರಾಗಿದ್ದರು. 1983ರಲ್ಲಿ ಕಾಂಗ್ರೆಸ್‌ನ ಈ ಸರಪಳಿಯನ್ನು ತುಂಡರಿಸಿದವರು ಬಿಜೆಪಿಯ ಡಾ| ವಿ.ಎಸ್‌. ಆಚಾರ್ಯ. ಅದೂ ಕಾಂಗ್ರೆಸೇತರ ಪಕ್ಷಗಳತ್ತ ಇಡೀ ರಾಜ್ಯದ ಗಾಳಿ ಬೀಸುತ್ತಿದ್ದ ಕಾಲ. ಈ ಖುಷಿ ಇದ್ದದ್ದು ಎರಡೇ ವರ್ಷ. 1985ರಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಮತ್ತೆ ಕಾಂಗ್ರೆಸ್‌ ಬೆಂಬಲಿಸಿದ ಪರಿಣಾಮ ಮನೋರಮಾ ಮಧ್ವರಾಜ್‌ ಗೆದ್ದರು. ಅನಂತರದ ಚುನಾವಣೆಯಲ್ಲಿ ಮನೋರಮಾ ಗೆದ್ದರೆ, 1994ರಲ್ಲಿ ಎಸ್‌. ಬಂಗಾರಪ್ಪ ನೇತೃತ್ವದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಯು. ಸಭಾಪತಿ ವಿಜಯಶಾಲಿಯಾದರು. ಸಭಾಪತಿ ಕಾಂಗ್ರೆಸ್‌ಗೆ ಬಂದು 1999ರಲ್ಲೂ ಕ್ಷೇತ್ರವನ್ನು ಪ್ರತಿನಿಧಿಸಿದರು.

ಅದಾದ ಬಳಿಕ 2004, 2008ರಲ್ಲಿ ಬಿಜೆಪಿಯ ಕೆ. ರಘುಪತಿ ಭಟ್‌ ಕ್ಷೇತ್ರವನ್ನು ಗೆದ್ದರು. 2013 ರಲ್ಲಿ ಮತದಾರರು ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌ ಅವರಿಗೆ ಜಯದ ಮೊಹರು ಒತ್ತಿದರು. 2018ರಲ್ಲಿ ಮೋದಿ ಅಲೆಯೂ ರಾಜ್ಯಾದ್ಯಂತ ಭರ್ಜರಿಯಾಗಿದ್ದ ಪರಿಣಾಮ ಬಿಜೆಪಿಯ ಕೆ. ರಘುಪತಿ ಭಟ್‌ ಮತ್ತೆ ಆಯ್ಕೆಯಾದರು.

2023ರ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದಲ್ಲಿ ಹೊಸ ಮುಖವನ್ನು ಪರಿಚಯಿಸಬೇಕೆಂಬ ಒತ್ತಡವೂ ಸಾಕಷ್ಟಿದೆ. ಜತೆಗೆ ಕ್ಷೇತ್ರದ ವಿಶೇಷ ಗುಣವೆಂದರೆ ಮತದಾರರ ಒಲವು ವ್ಯಕ್ತಿಗಳಿಗಿಂತ ಪಕ್ಷಗಳ ಕಡೆಗೇ ಹೆಚ್ಚು. ಇದು ಈ ಹಿಂದಿನ ಚುನಾವಣೆಗಳಲ್ಲಿ ಸಾಬೀತಾಗಿರುವ ಅಂಶ. ಇದು ಬಿಜೆಪಿಯ ಹೊಸ ಮುಖದ ಪ್ರಯೋಗಕ್ಕೆ ಹುಮ್ಮಸ್ಸು ತುಂಬಿದರೂ ಅಚ್ಚರಿಯಿಲ್ಲ. ಹಾಗೆಯೇ ಸಚಿವರೂ ಆಗಿದ್ದ ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌ ಈಗ ಬಿಜೆಪಿಯಲ್ಲಿದ್ದಾರೆ. ಆದ ಕಾರಣ ಕಾಂಗ್ರೆಸ್‌ ಪ್ರಬಲ ಅಭ್ಯರ್ಥಿಯ ಹುಡುಕಾಟದಲ್ಲಿದೆ.

ಬಿಜೆಪಿಯಲ್ಲಿ ಹಾಲಿ ಶಾಸಕ ಕೆ. ರಘುಪತಿ ಭಟ್‌ ವಿವಿಧ ಉತ್ಸವಗಳನ್ನು ಸಂಘಟಿಸುತ್ತಾ ಪಕ್ಷದ ವರಿಷ್ಠರ ಗಮನ ಸೆಳೆಯುವ ಪ್ರಯತ್ನದಲ್ಲಿದ್ದರೆ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಕೂಡ ಸ್ಪರ್ಧಿಸುವ ಒಲವು ತೋರಿ ದ್ದಾರೆ ಎನ್ನಲಾಗಿದೆ. ಸಂಘ ಪರಿವಾರದ ಹಿನ್ನೆಲೆಯ ಗಣೇಶ್‌ ನಾಯಕ್‌ ಶಿರಿಯಾರ ಸಹ ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ನಗರಸಭೆ ಸದಸ್ಯರಾದ ವಿಜಯ ಕೊಡ ವೂರು ಅವರೂ ಆನ್‌ಲೈನ್‌ನಲ್ಲಿ ಪ್ರಚಾರ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದಲ್ಲದೆ, ವಿವಿಧ ಕಾರ್ಯಕ್ರಮಗಳನ್ನು ವಾರ್ಡ್‌ ಮಟ್ಟದಿಂದ ಕ್ಷೇತ್ರಮಟ್ಟಕ್ಕೆ ವಿಸ್ತರಿಸಿ ಕ್ರಿಯಾಶೀಲರಾಗಿದ್ದಾರೆ.

ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಕೆ. ಉದಯ್‌ ಕುಮಾರ್‌ ಶೆಟ್ಟಿಯವರ ಹೆಸರೂ ಚಾಲ್ತಿಯಲ್ಲಿದೆ. ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಇವರಲ್ಲದೆ ಇನ್ನೂ ಹಲವರು ಕಾರ್ಯಶೀಲರಾಗಿದ್ದಾರೆ.

ಅನಿರೀಕ್ಷಿತ ಬದಲಾವಣೆಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಿದರೆ ಮಾಜಿ ಶಾಸಕ ಪ್ರಮೋದ್‌ ಮಧ್ವರಾಜ್‌, ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ. ಸುವರ್ಣ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್‌ ಅವರ ಹೆಸರೂ ಮುನ್ನೆಲೆಗೆ ಬರಬಹುದು.

ಕಾಂಗ್ರೆಸ್‌ ನಲ್ಲೂ ಪಟ್ಟಿ ದೊಡ್ಡದು
ಕಾಂಗ್ರೆಸ್‌ನಲ್ಲೂ ಆಕಾಂಕ್ಷಿಗಳ ಪಟ್ಟಿ ಚಿಕ್ಕದಿಲ್ಲ. ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮುಖಂಡರಾದ ಪ್ರಸಾದ್‌ರಾಜ್‌ ಕಾಂಚನ್‌, ರಮೇಶ್‌ ಕಾಂಚನ್‌, ಕೃಷ್ಣಮೂರ್ತಿ ಆಚಾರ್ಯ, ಅಮೃತ್‌ ಶೆಣೈ, ಪ್ರಖ್ಯಾತ್‌ ಶೆಟ್ಟಿ, ಶಂಕರ್‌ ಕುಂದರ್‌, ದಿವಾಕರ್‌ ಕುಂದರ್‌ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಸುತ್ತಾಟ ಆರಂಭಿಸಿದ್ದಾರೆ. ಜಾತಿ, ವರ್ಚಸ್ಸು ಮತ್ತು ಸಂಘಟನ ಶಕ್ತಿ, ಪಕ್ಷ ನಿಷ್ಠೆ ಇತ್ಯಾದಿಗಳನ್ನು ಪರಿಗಣಿಸಿ ಟಿಕೆಟ್‌ ಹಂಚಿಕೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.