ಉಡುಪಿ ಬನ್ನಂಜೆ ಬಾಬು ಅಮೀನ್‌ ಪ್ರಶಸ್ತಿ ಪ್ರದಾನ


Team Udayavani, Oct 15, 2019, 5:39 AM IST

131019ASTRO02

ಉಡುಪಿ: ಯುವವಾಹಿನಿ ಉಡುಪಿ ಘಟಕ ನೀಡುವ ಬನ್ನಂಜೆ ಬಾಬು ಅಮೀನ್‌ ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಹಿರಿಯ ಲೇಖಕಿ ಯಶವಂತಿ ಎಸ್‌. ಸುವರ್ಣ ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಚಿತ್ರಕಲಾವಿದ ಪಿ.ಎನ್‌. ಆಚಾರ್ಯ ಅವರಿಗೆ ರವಿವಾರ ಬಲಾಯಿಪಾದೆ ಗರಡಿಮನೆ ನಾಗಪ್ಪ ಪೂಜಾರಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.

ಅಭಿನಂದನಾ ಭಾಷಣ ಮಾಡಿದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ದುಗ್ಗಪ್ಪ ಕಜೆಕಾರು, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಸಾಕಷ್ಟು ಹೋರಾಟಗಳು ನಡೆದಿವೆ. ಆದರೆ ಪರಿಣಾಮಕಾರಿಯಾದ ಒಗ್ಗಟ್ಟಿನ ಚಳುವಳಿ ಆಗಿಲ್ಲ. ಚಳುವಳಿಗೆ ಅಗತ್ಯವಿರುವ ಪುಸ್ತಕ ಹಾಗೂ ಬೇಕಾದ ಜನರ ಬಳಕೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ ಪ್ರಭಾವ ಬಳಸಿ
ತುಳು ಭಾಷೆಯ ನಿರ್ಲಕ್ಷ್ಯ ಮಾಡಿದರೆ, ಮುಂದಿನ ಪೀಳಿಗೆಗೆ ಇಂಟರ್‌ನೆಟ್‌ ಮೂಲಕ ತುಳು ಭಾಷೆ, ಶಬ್ದಗಳನ್ನು ತೋರಿಸಬೇಕಾದ ಪರಿಸ್ಥಿತಿ ಎದುರಾಗಲಿದೆ. ತುಳು ಭಾಷಿಗರು ಒಂದಾಗಿ ರಾಜಕೀಯ ಪ್ರಭಾವ ಬಳಸಿ ಚಳುವಳಿ ಮಾಡಿದರೆ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಸಾಧ್ಯ ಎಂದರು.

ಪ್ರಶಸ್ತಿಗೆ ಪ್ರಯತ್ನ
ತುಳು ಅಕಾಡೆಮಿ ಅಧ್ಯಕ್ಷ ಸ್ಥಾನ, ಗೌರವ ಡಾಕ್ಟರೇಟ್‌, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಯಾವುದಾದರೂ ಒಂದನ್ನು ಬನ್ನಂಜೆ ಬಾಬು ಅಮೀನ್‌ ಅವರಿಗೆ ಕೊಡುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಪ್ರಶಸ್ತಿ ಭಿನ್ನವಾಗಿದೆ
ಇಂದು ಮಾನದಂಡ ಇಲ್ಲದೆ ಕೊಡುವ ಹಲವು ಪ್ರಶಸ್ತಿಗಳಿವೆ. ಆದರೆ ಬನ್ನಂಜೆ ಬಾಬು ಅಮಿನ್‌ ಜಾನಪದ ಪ್ರಶಸ್ತಿ ಭಿನ್ನವಾಗಿದೆ. ಸಾಧನೆ ಮಾಡಿದ ಕಲಾವಿದರಿಗೆ, ವಿದ್ವಾಂಸರಿಗೆ ಈ ಪ್ರಶಸ್ತಿ ಲಭಿಸುತ್ತಿದೆ. ಇದು ರಾಜ್ಯಮಟ್ಟದ ಮನ್ನಣೆಯನ್ನು ಪಡೆದುಕೊಂಡಿದೆ. ಇವತ್ತು ಪ್ರಭಾವ, ಶಿಫಾರಸಿಗೆ ಪ್ರಶಸ್ತಿ ಪಡೆಯಲು ಸಾಧ್ಯವಿದೆ. ಜಾನಪದ ಎಂಬ ಬ್ಯಾಚ್‌ ಹಾಕಿಕೊಂಡು ತಿರುಗುವವರು ತುಂಬಾ ಮಂದಿ ಇದ್ದಾರೆ. ಆದರೆ ಅದರ ಸ್ಪಷ್ಟ ಜ್ಞಾನ, ನಿರೂಪಣೆ ಮಾಡುವವರು ಬೆರಳೆಣಿಗೆ ಮಂದಿ ಮಾತ್ರಯಿದ್ದು, ಅದರಲ್ಲಿ ಬಾಬು ಅಮೀನ್‌ ಪ್ರಮುಖರಾಗಿದ್ದಾರೆ ಎಂದರು.

ಉಡುಪಿ ತುಳುಕೂಟದ ಗೌರವಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಶಸ್ತಿ ಪ್ರದಾನ ಮಾಡಿದರು. ಉಡುಪಿ ಯುವವಾಹಿನಿ ಘಟಕದ ಅಧ್ಯಕ್ಷ ನಾರಾಯಣ ಬಿ.ಎಸ್‌. ಅಧ್ಯಕ್ಷತೆ ವಹಿಸಿದರು.

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್‌ ಕುಮಾರ್‌ ಸಸಿಹಿತ್ಲು, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌, ಬನ್ನಂಜೆ ಬಾಬು ಅಮೀನ್‌ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ, ಕಾರ್ಯದರ್ಶಿ ಮಹಾಬಲ ಅಮೀನ್‌, ಕೋಶಾಧಿಕಾರಿ ಭಾರತಿ ಭಾಸ್ಕರ್‌ ಸುವರ್ಣ, ಮಹಿಳಾ ಸಂಚಾಲಕಿ ಶಕುಂತಳಾ ಸುಕೇಶ್‌, ಉದಯ ಅಮೀನ್‌, ಪದಾಧಿಕಾರಿ ಸಂತೋಷ್‌ ಕುಮಾರ್‌ ಉಪಸ್ಥಿತರಿದ್ದರು. ದಯಾನಂದ ಅವರು ನಿರೂಪಿಸಿದರು.

ರಾಜಕೀಯ ಪ್ರಭಾವ ಬಳಸಿ
ತುಳು ಭಾಷೆಯ ನಿರ್ಲಕ್ಷ್ಯ ಮಾಡಿದರೆ, ಮುಂದಿನ ಪೀಳಿಗೆಗೆ ಇಂಟರ್‌ನೆಟ್‌ ಮೂಲಕ ತುಳು ಭಾಷೆ, ಶಬ್ದಗಳನ್ನು ತೋರಿಸಬೇಕಾದ ಪರಿಸ್ಥಿತಿ ಎದುರಾಗಲಿದೆ. ತುಳು ಭಾಷಿಗರು ಒಂದಾಗಿ ರಾಜಕೀಯ ಪ್ರಭಾವ ಬಳಸಿ ಚಳುವಳಿ ಮಾಡಿದರೆ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಸಾಧ್ಯ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.