ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಬಳಿ ಯುವಕನ ಮೃತದೇಹ ಪತ್ತೆ
Team Udayavani, Jul 21, 2022, 3:52 PM IST
ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಬಳಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಕುಂಜಿಬೆಟ್ಟುವಿನ ನಿವಾಸಿ ಭೀಮಪ್ಪ (31) ಎಂದು ಗುರುತಿಸಲಾಗಿದೆ.
ಇವರು ಕಾಂಕ್ರೀಟ್ ಸ್ಲ್ಯಾಬ್ ಹಾಕುವ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಉಡುಪಿಗೆ ಹೋಗಿದ್ದರು. ಮಧ್ಯಾಹ್ನದ ವೇಳೆಗೆ ನೆರೆಮನೆಯವರು ತಿಳಿಸಿದಂತೆ ಇಂದ್ರಾಳಿ ಬ್ರಿಡ್ಜ್ ಕೆಳ ಭಾಗದಲ್ಲಿ ಭೀಮಪ್ಪರವರ ತಲೆ ಮತ್ತು ಮುಖದಲ್ಲಿ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆ್ಯಂಬುಲೆನ್ಸ್ನಲ್ಲಿ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತಪಟ್ಟಿರುವ ವಿಚಾರ ತಿಳಿದುಬಂದಿದೆ.
ಭೀಮಪ್ಪ ಮನೆಗೆ ಬರಲು ಹತ್ತಿರವಾಗುತ್ತದೆ ಎಂಬ ಉದ್ದೇಶದಿಂದ ಯಾವಾಗಲು ರೈಲ್ವೇ ಬ್ರಿಡ್ಜ್ನ ದಾರಿಯ ರೈಲ್ವೇ ಹಳಿಯ ಬಳಿ ನಡೆದುಕೊಂಡು ಬರುತ್ತಿದ್ದರು. ಜು.20ರಂದು ಕೂಡ ಕೆಲಸಕ್ಕೆ ಹೋದವರು ಕೆಲಸ ಸಿಗದೇ ವಾಪಾಸು ಮನೆಗೆ ರೈಲ್ವೇ ಹಳಿಯ ಬಳಿ ನಡೆದುಕೊಂಡು ಬರುವಾಗ ಬಾರ್ಕೂರು – ಉಡುಪಿ ಮಧ್ಯೆ ಸಂಚರಿಸುವ ಯಾವುದೋ ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಮದುವೆ ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಸಾವು
ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರ ಪತ್ನಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ