ಜಿಲ್ಲಾ ಪೊಲೀಸ್‌ ಶ್ವಾನದಳಕ್ಕೆ ಉಡುಪಿಯ ಬ್ರೌನಿ ಸೇರ್ಪಡೆ


Team Udayavani, Mar 13, 2019, 1:00 AM IST

browni.png

ಉಡುಪಿ: ಜಿಲ್ಲಾ ಪೊಲೀಸ್‌ ಶ್ವಾನದಳ ವಿಭಾಗದಲ್ಲಿ ಅತ್ಯಂತ ಹೆಚ್ಚು ಅಪರಾಧ ಪ್ರಕರಣಗಳನ್ನು ಭೇದಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಶ್ವಾನ ಅರ್ಜುನನ ಸ್ಥಾನಕ್ಕೆ ಉಡುಪಿ ಮೂಲದ ಶ್ವಾನ ಬ್ರೌನಿ ಭರ್ತಿಯಾಗಿದ್ದಾನೆ.
ಬ್ರೌನಿ ಮೂರು ತಿಂಗಳ ಮರಿಯಾಗಿದ್ದಾಗ ಎಸ್ಪಿ ಲಕ್ಷ್ಮಣ ಬ. ನಿಂಬರಗಿ ಅವರು ಜಿಲ್ಲಾ ಶ್ವಾನದಳ ವಿಭಾಗಕ್ಕೆ ಆಯ್ಕೆ ಮಾಡಿದ್ದರು. ಅಲ್ಲಿಂದ ನೇರವಾಗಿ ಬೆಂಗಳೂರಿನ ಆಡುಗೋಡಿಯ ಪೊಲೀಸ್‌ ಶ್ವಾನ ತರಬೇತಿ ಕೇಂದ್ರದಲ್ಲಿ ಆರು ತಿಂಗಳ ಕಾಲ ವಿಶೇಷ ತರಬೇತಿ ನೀಡಲಾಗಿತ್ತು. ಅಲ್ಲಿ ನಡೆಸುವ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ “ಬಿ’ ರ್‍ಯಾಂಕ್‌ ಪಡೆದುಕೊಂಡಿದೆ.

ಚುರುಕಿನ “ಬ್ರೌನಿ’
ಅಪರಾಧ ಸೇರಿದಂತೆ ವಿವಿಧ ವಿಭಾಗದ ನುರಿತ ತಜ್ಞರಿಂದ ತರಬೇತುಗೊಂಡ ಬ್ರೌನಿ ಉತ್ತಮ ಜಾಣ್ಮೆ ತೋರಿ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ತರಬೇತಿ ಅವಧಿಯÇÉೇ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪರೇಡ್‌ನ‌ಲ್ಲಿ ಭಾಗವಹಿಸಿದ ಕೀರ್ತಿ ಬ್ರೌನಿಗೆ ಸಲ್ಲುತ್ತದೆ. ಶ್ವಾನ ಆಯ್ಕೆ ವಿಷಯದಲ್ಲಿ ಇಲಾಖೆ ಹೆಚ್ಚಿನ ಕಾಳಜಿ ವಹಿಸುತ್ತದೆ. ಡಾಬರ್‌ ಮೆನ್‌ ತಳಿ, ಚುರುಕುತನ, ಗ್ರಹಿಕೆ ಮೊದಲಾದ ವಿಷಯಗಳನ್ನು ಪರಾಮರ್ಶಿಸಲಾಗುತ್ತದೆ.

ಅರ್ಜುನನಿಗೆ ನೋವಿನ ವಿದಾಯ
9 ವರ್ಷದ ಅವಧಿಯಲ್ಲಿ 500 ಪ್ರಕರಣಗಳಲ್ಲಿ 120 ಅಪರಾಧ ಪ್ರಕರಣಗಳ ಅಪರಾಧಿಗಳ ಜಾಡು ಹಾಗೂ 5 ಪ್ರಮುಖ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿದ ಅರ್ಜುನ ಸೇವೆಯಿಂದ ನಿವೃತ್ತಿಯಾಗಿದೆ. 

ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಇದು ಪ್ರಮುಖ ಪತ್ತೆದಾರಿ ಶ್ವಾನವಾಗಿತ್ತು. ಬೆಂಗಳೂರಿನ ಆಡುಗೋಡಿನಲ್ಲಿರುವ ಪೊಲೀಸ್‌ ಶ್ವಾನ ತರಬೇತಿ ಕೇಂದ್ರದಲ್ಲಿ ತರಬೇತುಗೊಂಡು 2011ರ ಫೆ. 7ರಂದು ಉಡುಪಿ ಅಪರಾಧ ಪತ್ತೆ ದಳದಲ್ಲಿ ಸೇಪೆìಡೆಯಾಗಿತ್ತು.

ಮಹತ್ವದ ಸುಳಿವು ನೀಡಿತ್ತು
2015ರ ಜೂನ್‌ನಲ್ಲಿ ನಡೆದಿದ್ದ ಬೈಂದೂರಿನ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಮಹತ್ವದ ಸುಳಿವು ನೀಡಿ ಆರೋಪಿಗಳನ್ನು ಬಂಧಿಸುವಲ್ಲಿ ಬ್ರೌನಿ ನೆರವಾಗಿತ್ತು. ಸೇವೆಯಿಂದ ವಿಮುಖವಾಗುವ ಶ್ವಾನಗಳನ್ನು ನಿಯಮದಂತೆ ಷರತ್ತುಬದ್ಧವಾಗಿ ಸಶಸ್ತ್ರ ಮೀಸಲು ಪಡೆಯ ಡಾಗ್‌ ಹ್ಯಾಂಡ್ಲರ್‌ ತಮ್ಮ ಬಳಿ ಇಟ್ಟು ಕೊಳ್ಳಬಹುದಾಗಿದೆ.

ಪೊಲೀಸ್‌ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿದ ಶ್ವಾನಗಳಿಗೆ ನಿವೃತ್ತಿ ಘೋಷಿಸುವುದು ಸಾಮಾನ್ಯ. ಆದರೆ ಅರ್ಜುನನಿಗೆ ಇತ್ತೀಚೆಗೆ ಮೂಲವ್ಯಾಧಿ ಸಮಸ್ಯೆ ತೀವ್ರವಾಗಿ ಬಾಧಿಸುತ್ತಿರುವ ಹಿನ್ನಲೆಯಲ್ಲಿ ನಿವೃತ್ತಿಗೆ ಇನ್ನೂ ಒಂದು ವರ್ಷ ಇರುವಾಗಲೇ ಇಲಾಖೆಯು ಅರ್ಜುನ್‌ಗೆ ನಿವೃತ್ತಿ ಘೋಷಿಸಿದೆ. ತನ್ನ ಅತೀ ಸೂಕ್ಷ್ಮ ಬುದ್ಧಿಯಿಂದ ಅಪರಾಧ ಪ್ರಕರಣಗಳ ಪ್ರಮುಖ ಆರೋಪಿಗಳನ್ನು ಹಿಡಿಯುವಲ್ಲಿ ಮಹತ್ವದ ಸುಳಿವು ನೀಡಿತ್ತು.
-ಪೆಂಚಲ್‌ ರಾವ್‌,   ಅರ್ಜುನ್‌ ಶ್ವಾನ ನಿರ್ವಾಹಕ,ಪೊಲೀಸ್‌ ಶ್ವಾನದಳ, ಉಡುಪಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.