ಉಡುಪಿ: ಚಿತ್ತರಂಜನ್ ಸರ್ಕಲ್ “ಚಾರ್ಲಿ” ಸಾವು; ಅಂತಿಮ ಗೌರವದೊಂದಿಗೆ ಅಂತ್ಯಸಂಸ್ಕಾರ
Team Udayavani, Aug 14, 2022, 2:56 PM IST
ಉಡುಪಿ: ಚಿತ್ತರಂಜನ್ ಸರ್ಕಲ್ ಬಳಿ, ಕಳೆದ ಹದಿನಾರು ವರ್ಷಗಳಿಂದ ನೆಲೆಕಂಡಿದ್ದ ಹೆಣ್ಣು ಶ್ವಾನವೊಂದು ವಯೋಸಹಜ ಕಾಯಿಲೆಯಿಂದ ಬಳಲುತಿತ್ತು. ಇದನ್ನು ಕಂಡ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು, ಪಶುವೈದ್ಯ ಡಾ.ದಯಾನಂದ ಪೈ ಅವರ ಮೂಲಕ ಚಿಕಿತ್ಸೆ ಒಳಪಡಿಸಿದ್ದರು. ಹಲವು ದಿನಗಳಿಂದ ಆರೈಕೆಯಲ್ಲಿದ್ದ ನಾಯಿ ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತಪಟ್ಟಿದೆ.
ಈ ಜೂಲಿ ಎಂದು ಕರೆಯಲ್ಪಡುತ್ತಿದ್ದ ಈ ಬೀದಿ ನಾಯಿಗೆ, ಚಾರ್ಲಿ ಸಿನಿಮಾ ಬಂದ ಬಳಿಕ ಶ್ವಾನ ಪ್ರಿಯರು ಚಾರ್ಲಿ ಎಂದು ಕರೆಯುತ್ತಿದ್ದರು. ಪರಿಸರದ ಜನರ ಪ್ರೀತಿಗೆ ಒಳಪಟ್ಟ ಚಾರ್ಲಿ ಅಂಗಡಿಗಳ ಕಾವಲುಗಾರನಾಗಿ ನಿಷ್ಠೆಯಿಂದ ಸೇವೆ ಸಲ್ಲಿಸುತಿತ್ತು.
ಇದನ್ನೂ ಓದಿ: ಮಂಗಳೂರು: ಯುವಕ-ಯುವತಿ ಮೊಬೈಲ್ ನಲ್ಲಿ ಚಾಟ್; ವಿಮಾನ ಸಂಚಾರ ಮೊಟಕುಗೊಳಿಸಿ ತೀವ್ರ ತಪಾಸಣೆ!
ಚಾರ್ಲಿಯ ಸಾವಿಗೆ ಪರಿಸರದ ಜನರು ನೊಂದಿದ್ದು, ನಾಗರಿಕ ಸಮಿತಿಯ ಕಾರ್ಯಕರ್ತರು ಅಗಲಿದ ಶ್ವಾನದ ಕಳೇಬರಕ್ಕೆ ಹೂ ಹಾರ ಸಮರ್ಪಿಸಿ ಅಂತಿಮ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲು ನಗರಸಭೆಗೆ ಒಪ್ಪಿಸಿದರು. ಈ ಸಂದರ್ಭದಲ್ಲಿ ನಿತ್ಯಾನಂದ ಒಳಕಾಡು, ಕೆ.ಬಾಲಗಂಗಾಧರ ರಾವ್, ಪಾಪುಲರ್ ಬಣ್ಣದ ಮಳಿಗೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ