ಮಳೆಗಾಲಕ್ಕೆ ಇನ್ನೂ ಸಿದ್ಧಗೊಂಡಿಲ್ಲ ಉಡುಪಿ ನಗರ

ನಿರ್ವಹಣೆ ಇಲ್ಲದೆ ಸೊರಗಿ ಹೋದ ಚರಂಡಿಗಳು

Team Udayavani, May 20, 2019, 6:00 AM IST

1905UDPS2

ಉಡುಪಿ: ಮುಂಗಾರು ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಮಳೆಗಾಲ ಎದುರಿಸಲು ನಗರ ಸಕಲ ರೀತಿಯಲ್ಲಿ ಸಜ್ಜಾಗಬೇಕಿದೆ. ಪ್ರಸ್ತುತ ಚರಂಡಿ, ನೀರಿನ ಪೈಪ್‌ಲೈನ್‌, ರಸ್ತೆ ರಿಪೇರಿ ಸಹಿತ ಪ್ರಮುಖ ಕಾಮಗಾರಿಗಳು ಅರ್ಧಾವಸ್ಥೆಯಲ್ಲಿದ್ದು, ನಿಧಾನಗತಿ ಯಲ್ಲಿ ಸಾಗುತ್ತಿದೆ.

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ
ಈ ಕ್ಷಣಕ್ಕೆ ಮಳೆ ಸುರಿದರೆ ಉಡುಪಿ-ಮಣಿಪಾಲ ರಸ್ತೆ ಕೆಸರುಮಯ ವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಒಂದೆಡೆ ಆಮೆಗತಿ ಯಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆ ಕಾಮಗಾರಿ ಮತ್ತೂಂದೆಡೆ ರಸ್ತೆಗಳ ಇಕ್ಕೆಲಗಳನ್ನು ಅಗೆದಿರುವುದರಿಂದ ವಾಹನ ಸವಾರರ ಸಹಿತ ಪಾದಚಾರಿಗಳು ಇಲ್ಲಿ ಸಂಚರಿಸುವಾಗ ಸಮಸ್ಯೆ ಉಂಟಾಗುವ ಸಾಧ್ಯತೆಯೇ ಹೆಚ್ಚು.

ವಾರ್ಡ್‌ಗಳಲ್ಲೂ ಸಮಸ್ಯೆ
ಅರೆಬರೆ ಕಾಮಗಾರಿ, ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಪ್ರತೀ ವಾರ್ಡ್‌ಗಳಲ್ಲೂ ಚರಂಡಿ ಸಮಸ್ಯೆ ಎದ್ದು ಕಾಣುತ್ತಿದೆ. ಕಿನ್ನಿಮೂಲ್ಕಿ, ತೆಂಕಪೇಟೆ, ಸರಳೇಬೆಟ್ಟು, ಬನ್ನಂಜೆ, ಅಜ್ಜರಕಾಡು, ಮಣಿಪಾಲ, ಪರ್ಕಳ ಭಾಗಗಳಲ್ಲಿ ಚರಂಡಿಯಲ್ಲಿ ಕಸಕಡ್ಡಿ, ಪ್ಲಾಸ್ಟಿಕ್‌ಗಳು ತುಂಬಿಹೋಗಿದ್ದು, ನೀರು ಹರಿಯುವುದೇ ಅಸಾಧ್ಯ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ.

ಪರ್ಕಳದಲ್ಲಿ ಚರಂಡಿಯೇ ಮಾಯ!
ಪರ್ಕಳ ವಾರ್ಡ್‌ನ ರಾ.ಹೆ.ಬದಿಯ ಚರಂಡಿ ಸಹಿತ ವಿವಿಧ ಕಡೆಗಳಲ್ಲಿರುವ ಚರಂಡಿ ಹೂಳು ತೆರವಾಗಿಲ್ಲ. ಕೆಳಪರ್ಕಳದಲ್ಲಿರುವ ಗೋಪಾಲಕೃಷ್ಣ ದೇವಸ್ಥಾನದ ಬಳಿ ಮಳೆಗಾಲದಲ್ಲಿ ನೀರು ಹರಿಯುವ ದೊಡ್ಡ ತೋಡು ಇದೆ. ಇದರಲ್ಲಿ ರಾಶಿಗಟ್ಟಲೆ ಕಸ ತುಂಬಿದ್ದು, ಮಳೆಗಾಲದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಲಿದೆ.

ಹೆದ್ದಾರಿ ಕಾಮಗಾರಿ ಪ್ರಗತಿ ಯಲ್ಲಿರುವುದರಿಂದ ಪರ್ಕಳ ಗಾಂಧಿ ಮೈದಾನದಿಂದ ಕೆಳಗೆ ಚರಂಡಿಯೇ ಇಲ್ಲದಂತಾಗಿದೆ. ಪರ್ಕಳ ಪೇಟೆಯಲ್ಲಿರುವ ಕಿರುಚರಂಡಿಯಲ್ಲಿ ಹೂಳು, ಕಲ್ಲುಗಳು ತುಂಬಿ ಹೋಗಿದ್ದು, ತಡೆ ಉಂಟಾಗಿದೆ. ಮಳೆಗಾಲದಲ್ಲಿ ನೀರು ರಸ್ತೆ ಮೇಲೆ ಹರಿಯುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದೆನಿಸುತ್ತದೆ.

ಲಕ್ಷ್ಮೀಂದ್ರ ನಗರದಲ್ಲಿ ಚರಂಡಿ ಅರ್ಧಕ್ಕೆ ಕಟ್‌
ಸಿಂಡಿಕೇಟ್‌ ಸರ್ಕಲ್‌ನಿಂದ ಮುಂದಕ್ಕೆ ಹಾದು ಹೋಗುವ ಚರಂಡಿಯು ಅರ್ಧಕ್ಕೆ ಮೊಟಕುಗೊಂಡಿದೆ. ಇಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಚರಂಡಿಯನ್ನು ಅರ್ಧಕ್ಕೆ ನಿಲ್ಲಿಸಿ ಕಾಂಕ್ರೀಟ್‌ ಹಾಕಿ ಮುಚ್ಚಲಾಗಿದೆ. ನೀರು ಹರಿಯಲು ಪೈಪ್‌ಲೈನ್‌ ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದರೆ ರಾ.ಹೆ. ನದಿಯಂತಾಗುವ ಸಾಧ್ಯತೆ ದೂರವಿಲ್ಲ.

ಚರಂಡಿಯಲ್ಲಿ ಬೆಳೆದುನಿಂತ ಗಿಡಗಂಟಿಗಳು
ತೆಂಕಪೇಟೆ ವಾರ್ಡ್‌ನಲ್ಲಿನ ಚರಂಡಿ ನಿರ್ವಹಣೆ ಇಲ್ಲದಂತಾಗಿದೆ. ಗಿಡಗಳು ಬೆಳೆದುನಿಂತಿದ್ದು, ಹೂಳು ತುಂಬಿಕೊಂಡಿವೆ. ಕಸಕಡ್ಡಿಗಳು, ತ್ಯಾಜ್ಯಗಳಿಂದ ತುಂಬಿ ಹೋಗಿದ್ದು, ನೀರು ಹರಿಯುವುದು ಕಷ್ಟ ಎಂಬಂತಿದೆ. ವಾರ್ಡ್‌ ನಿವಾಸಿಗಳು ಕೂಡ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದು, ಇದು ಕೂಡ ಸಮಸ್ಯೆಗೆ ಕಾರಣವಾಗಿದೆ.

ಗಮನಹರಿಸದೆ ಇರುವುದು ವಿಪರ್ಯಾಸ
ಈ ಹಿಂದೆ ನಗರಸಭೆಯ ವತಿಯಿಂದ ಚರಂಡಿಯ ಹುಲ್ಲು ತೆಗೆಯಲೆಂದು ವಾರದಲ್ಲಿ 2 ಬಾರಿ ಬರುತ್ತಿದ್ದರು. ಆದರೆ ಈಗ ಒಂದು ಬಾರಿ ಮಾತ್ರ ಬರುತ್ತಿದ್ದಾರೆ. ಅವರಿಂದಲೇ ಚರಂಡಿಯ ಹೂಳು ತೆಗೆಯುವ ಕೆಲಸ ಮಾಡಿಸುತ್ತಿದ್ದೇವೆ. ಮಳೆಗಾಲ ಸಮೀಪಿಸುತ್ತಿದ್ದರೂ ನಗರಸಭೆ ಈ ಬಗ್ಗೆ ಇನ್ನೂ ಗಮನಹರಿಸದಿರುವುದು ವಿಪರ್ಯಾಸ.
ಗಿರೀಶ್‌ ಎಂ. ಅಂಚನ್‌,
ಕುಂಜಿಬೆಟ್ಟು ವಾರ್ಡ್‌ ಸದಸ್ಯರು

ಕೃತಕ ನೆರೆ ಭೀತಿ
ಚರಂಡಿಗಳಲ್ಲಿ ಹೂಳು ತುಂಬಿರುವ ಕಾರಣ ಕಳೆದ ವರ್ಷ ಮಳೆಗಾಲದ ಸಂದರ್ಭ ಕಲ್ಸಂಕ, ಬೈಲಕೆರೆ, ಬನ್ನಂಜೆ ಸಹಿತ ಹಲವಾರು ವಾರ್ಡ್‌ಗಳ ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿತ್ತು. ಸಾರ್ವಜನಿಕರ ಸಹಿತ ವಾಹನ ಸವಾರರು ಹಲವು ರೀತಿಯ ತೊಂದರೆ ಎದುರಿಸಿದ್ದರು. ಅಪಾರ ನಷ್ಟವೂ ಉಂಟಾಗಿತ್ತು. ಸಮಸ್ಯೆ ಈ ಬಾರಿಯೂ ಹಾಗೆಯೇ ಇದೆ. ಆದರೆ ನಗರಸಭೆ ಮಾತ್ರ ಈ ಬಗ್ಗೆ ಇನ್ನೂ ಕ್ರಮಕೈಗೊಂಡಿಲ್ಲ.

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.