ಉಡುಪಿ ನಗರ: ಇನ್ನು 15 ದಿನಕ್ಕೆ ಮಾತ್ರ ನೀರು


Team Udayavani, May 6, 2017, 1:18 PM IST

water.jpg

ಉಡುಪಿ: ಉಡುಪಿ ನಗರಕ್ಕೆ ನೀರು ಪೂರೈಸುವ ಬಜೆ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌ಗೆ ತಲುಪಿದ್ದು, ಈಗ ಅಲ್ಲಲ್ಲಿ ಡ್ರೆಜ್ಜಿಂಗ್‌ ಮಾಡಿ ನೀರು ಪೂರೈಸಲಾಗುತ್ತಿದೆ. ಸುಮಾರು 15 ದಿನಗಳ ವರೆಗೆ ಅಂದರೆ ಮೇ 20ರ ವರೆಗೆ ದಿನ ಬಿಟ್ಟು ದಿನ ನೀರು ಪೂರೈಸಲಾಗುವುದು ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ನಡೆದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಮಾಯ ಗುಂಡಿ, ಶೀರೂರು ಮಠದ ಬಳಿ ಡ್ರೆಜ್ಜಿಂಗ್‌ ಮಾಡಲಾಗಿದ್ದು, ಅಲ್ಲಿಂದ ಭಂಡಾರಿ ಬೆಟ್ಟುವಿಗೆ ಅಲ್ಲಿಂದ ಪುತ್ತಿಗೆಯಲ್ಲಿ ಡ್ರೆಜ್ಜಿಂಗ್‌ ಮಾಡಿ ಅಲ್ಲಿಂದ ಬಜೆ ಜಲಾಶಯಕ್ಕೆ ನೀರು ಪಂಪಿಂಗ್‌ ಮಾಡಲಾಗುತ್ತಿದೆ. ಈಗ ಮಾಣಾಯಿ ಯಲ್ಲಿ ಡ್ರೆಜ್ಜಿಂಗ್‌ ಮಾಡಲಾಗುತ್ತಿದೆ. ನಗರಕ್ಕೆ ಒಟ್ಟು 23 ದಶಲಕ್ಷ ಲೀಟರ್‌ ನೀರು ಅಗತ್ಯವಿದ್ದು, ಈಗ 10 ಗಂಟೆ ಪಂಪಿಂಗ್‌ ಮಾಡಿ 10 ದಶಲಕ್ಷ ಲೀಟರ್‌ ನೀರು ಪೂರೈಸಲಾಗುತ್ತಿದೆ. ಡ್ರೆಜ್ಜಿಂಗ್‌ ಮಾಡಿ 300ರಿಂದ 350 ಲೀಟರ್‌ ನೀರು ಸಿಗಲಿದ್ದು, ದಿನಕ್ಕೆ ಸುಮಾರು 10 ದಶಲಕ್ಷ ಲೀಟರ್‌ ಹಾಗೆ ಜೂ. 5ರ ವರೆಗೂ ಮಳೆ ಬರದಿದ್ದರೆ ಕೊಡುವ ಪ್ರಯತ್ನ ಮಾಡಲಾಗುವುದು ಎಂದು ಅಧಿ ಕಾರಿಗಳು ತಿಳಿಸಿದರು. 

ನೀರಿನ ಗುಣಮಟ್ಟ ಪರಿಶೀಲಿಸಿ: ಟ್ಯಾಂಕರ್‌ಗಳಿಂದ ಪೂರೈಕೆ ಮಾಡುತ್ತಿರುವ ನೀರಿನ ಗುಣಮಟ್ಟ ಪರಿಶೀಲಿಸಿ. ಪ್ರತಿಯೊಂದು ಟ್ಯಾಂಕರ್‌ಗೂ ಒಬ್ಬ ಅಧಿಕಾರಿ ನೇಮಿಸಿ. ನೀರು ಪೂರೈಕೆ ಸರಿಯಾಗುತ್ತಿದೆಯೇ ಎನ್ನುವುದರ ಕುರಿತು ನಿಗಾವಹಿಸಿ. ಸದ್ಯ ನಗರಸಭೆ ಟೆಂಡರ್‌ ಮೂಲಕ 13 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗು ತ್ತಿದ್ದು, ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಟ್ಯಾಂಕರ್‌ ಬಳಸಿ. ಈ ವರ್ಷ 12 ಸಾವಿರ ಲೀ.ನ ಒಂದು ಟ್ಯಾಂಕರ್‌ಗೆ 1,400 ರೂ. ಹಣ ನೀಡಲಾಗುತ್ತಿದೆ. ಕೊಳವೆ ಮೂಲಕ ನೀರು ಪೂರೈಕೆ ಮಾಡ ಲಾಗದ ಕಡೆಗೆ ಟ್ಯಾಂಕರ್‌ನಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚನೆ ನೀಡಿದರು. 

ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಸುಮಾರು 1.5 ಮೀ. ನಷ್ಟು ಕಡಿಮೆ ನೀರು ಸಂಗ್ರಹ ಮಟ್ಟ ತಲುಪಿದೆ. ಹಾಗಾಗಿ ಹೆಚ್ಚಿನ ಮುತುವರ್ಜಿಯಿಂದ ಅಗತ್ಯವಿರುವೆಡೆ ನೀರು ಪೂರೈಸಲಾಗುತ್ತಿದೆ. ನೀರು ಪೂರೈಕೆಗೆ ಹಣದ ಸಮಸ್ಯೆ ಇಲ್ಲ. ಕುಡಿಯುವ ನೀರಿಗಾಗಿ ತಮ್ಮ ಸರಕಾರ ಪ್ರಥಮ ಆದ್ಯತೆ ನೀಡುತ್ತಿದೆ ಎಂದರು. 

ಎ, ಬಿ, ಸಿ. ಯಂತೆ ವಿಂಗಡಿಸಿ ನಗರಕ್ಕೆ ತೀವ್ರತರದ ಕುಡಿಯುವ ನೀರಿನ ತೊಂದರೆ ಎದುರಾಗಿರುವುದರಿಂದ ಈ ಸಮಸ್ಯೆ ನಿವಾರಿಸಲು ಪೂರಕವಾಗುವಂತೆ ನೀರಿನ ತೀವ್ರ ಅಭಾವಕ್ಕೆ ಅನುಸಾರವಾಗಿ ನಗರಸಭಾ ವಾರ್ಡ್‌ಗಳನ್ನು ಎ, ಬಿ ಮತ್ತು ಸಿ ಎಂದು ವಿಂಗಡಣೆ ಮಾಡಿ, ಟ್ಯಾಂಕರ್‌ ಮೂಲಕ ನೀರು ಪೂರೈಸಿ. ಅದಕ್ಕಾ ಗಿಯೇ ವಾರ್ಡ್‌ಗೊಬ್ಬ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ಅವರ ಮೊಬೈಲ್‌ 24 ಗಂಟೆ ಕೂಡ ಚಾಲ್ತಿಯಲ್ಲಿರಲಿ ಎಂದು ಸೂಚನೆ ನೀಡಿದರು. ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಪೌರಾಯುಕ್ತ ಡಿ. ಮಂಜುನಾಥಯ್ಯ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ, ಸದಸ್ಯರು ಉಪಸ್ಥಿತರಿದ್ದರು. 

ವಾರಾಹಿ ಅಥವಾ ಶಿಂಬ್ರಾ ಅಣೆಕಟ್ಟು ನಿರ್ಮಾಣ
ಸ್ವರ್ಣ ನದಿಯಲ್ಲಿ ವರ್ಷಪೂರ್ತಿ ನೀರು ಸಿಗುವುದು ಕಷ್ಟ. ಹೀಗಾಗಿ 102 ಕೋ. ರೂ. ಕುಡ್ಸೆಂಪ್‌ ಯೋಜನೆಯಡಿ ಶಿಂಬ್ರಾ ಅಣೆಕಟ್ಟು ನಿರ್ಮಿಸಿ ಅಲ್ಲಿ ಹಾಗೂ ಬಜೆ ಅಣೆಕಟ್ಟಿನಲ್ಲಿ ನೀರು ನಿಲ್ಲುವ ಯೋಜನೆ ಇದೆ. 6 ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣವಾಗಲಿದೆ. ಅದಲ್ಲದೆ ವರ್ಷ ಪೂರ್ತಿ ನೀರಿರುವ ವಾರಾಹಿ ಯೋಜನೆ ಈಗ ಉಡುಪಿ ನಗರದ ಸಮೀಪದ ವರೆಗೆ ಬಂದಿದ್ದು, ಅದನ್ನು ತೆಂಕನಿಡಿಯೂರು ಹಾಗೂ ಚಾಂತಾರು ಗ್ರಾ.ಪಂ.ನ ಬಹುಗ್ರಾಮ ಯೋಜನೆ 82 ಕೋ. ರೂ. ಹಾಗೂ ಕುಡ್ಸೆಂಪ್‌ವಿನ 102 ಕೋ. ರೂ. ಒಟ್ಟು ಸೇರಿಸಿ ನಗರಕ್ಕೆ ನೀರು ಪೂರೈಸುವ ಯೋಜನೆಯಿದೆ. ಈಗ ನೀರಿನ ಸಮಸ್ಯೆ ಇರುವ 110 ದಿನಗಳಿಗೆ ಈ 2 ಯೋಜನೆಗಳಲ್ಲಿ ಯಾವುದು ಹೆಚ್ಚು ಅನುಕೂಲ ಅದನ್ನು ಹೈಡ್ರೋಲಾಜಿಕಲ್‌ ಸರ್ವೇ ಮಾಡಿ ನಿರ್ಧರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.