ಗಮನಿಸದಿದ್ದರೆ ಅಪಾಯ ಖಚಿತ

ನಗರದ ರಸ್ತೆಗಳಿಗೆ ಬೇಕಿದೆ ತುರ್ತು ನೆರವು

Team Udayavani, Sep 16, 2019, 5:42 AM IST

1409GK1

ಉಡುಪಿ: ಈ ವರ್ಷದಲ್ಲಿ ಸುರಿದ ಮಳೆಗೆ ನಗರಾದ್ಯಂತ ಹಲವೆಡೆ ರಸ್ತೆಗಳು ಹಾನಿಗೀಡಾಗಿವೆ. ನಗರ ಆಡಳಿತದವರು ಇದನ್ನು ಸರಿಯಾಗಿ ನಿರ್ವಹಿಸದಿರುವುದರಿಂದ ಸಾರ್ವಜನಿಕರಿಗೆ ಸಹಿತ ವಾಹನ ಸವಾರರಿಗೆ ತೊಂದರೆಯುಂಟಾಗುತ್ತಿದೆ.

ಭಾರೀ ಮಳೆಯಾದ ಅನಂತರ ಕಿನ್ನಿಮುಲ್ಕಿ, ಜೋಡುಕಟ್ಟೆ, ಡಯಾನಾ ಸರ್ಕಲ್‌, ಸಹಿತ ನಗರದ ಎಲ್ಲ ವಾರ್ಡ್‌ಗಳ ರಸ್ತೆಯಲ್ಲೂ ಹೊಂಡಗಳು ಗೋಚರಿಸುತ್ತಿವೆ. ಸಣ್ಣಗಾತ್ರದ ಹೊಂಡಗಳೇ ಮುಂದೆ ಹಿರಿದಾಗುತ್ತಾ ಅಪಾಯವನ್ನು ಆಹ್ವಾನಿಸುತ್ತಿದೆ.

ಈ ಹೆಚ್ಚಿನ ರಸ್ತೆ ವಿಸ್ತರಣೆ ಕಾಮ ಗಾರಿಗಳು ಸಂಪೂರ್ಣವಾಗಿ ಹಾನಿಗೊಳಗಾದ ಕಾರಣ ಸರಳ ಪ್ಯಾಚ್‌ವರ್ಕ್‌ ಕೆಲಸಗಳು ಪರಿಹಾರ ಕಾಣಲು ಅಸಾಧ್ಯ. ನಗರದಿಂದ ಕೊರಂಗ್ರಪಾಡಿಗೆ ಹೋಗುವ ರಸ್ತೆ ದುಃಸ್ವಪ್ನವಾಗಿದೆ. ವಿಶೇಷವಾಗಿ ದ್ವಿಚಕ್ರ ವಾಹನಗಳನ್ನು ಓಡಿಸುವವರಿಗೆ ಉಡುಪಿ ಮತ್ತು ಬೈಲೂರು ನಡುವಿನ ವಿಸ್ತಾರದಲ್ಲಿ ಹಾದುಹೋಗುವ ವಾಹನಗಳು ಗುಂಡಿಗಳಿಂದ ಪಾದಚಾರಿಗಳ ಮೇಲೆ ನೀರು ಚೆಲ್ಲುತ್ತದೆ ಎಂದು ತಿಳಿಸುತ್ತಾರೆ ಬೈಲೂರು ವಾರ್ಡ್‌ ನಿವಾಸಿಗಳು.

ಕಾಂಕ್ರೀಟ್‌ ಒಂದೇ ಪರಿಹಾರ
ರಸ್ತೆಯಲ್ಲಿರುವ ಹೊಂಡ-ಗುಂಡಿಗಳಿಗೆ ಕಡಿವಾಣ ಹಾಕಬೇಕಿದ್ದರೆ ನಗರದ ರಸ್ತೆಗಳಿಗೆ ಕಾಂಕ್ರೀಟ್‌ ಹಾಕುವುದೊಂದೇ ಸದ್ಯಕ್ಕೆ ಪರಿಹಾರವಾಗಲಿದೆ. ಚಿಟಾ³ಡಿ ಬಳಿಯ ಮತ್ತೂಂದು ರಸ್ತೆ ವಿಸ್ತರಣೆಯು ಕಳಪೆ ಸ್ಥಿತಿಯಲ್ಲಿದ್ದು, ಹಲವಾರು ಗುಂಡಿಗಳು ಬಿದ್ದಿವೆ.

ಕಿನ್ನಿಮುಲ್ಕಿಯಿಂದ ಡಯಾನಾ ವೃತ್ತದವರೆಗೆ ಹಲವಾರು ಬಸ್ಸುಗಳು ಸಹಿತ ವಾಹನಗಳು ಸಂಚರಿಸುತ್ತವೆ. ಆದರೆ ದೈತ್ಯಾಕಾರ ಗಾತ್ರದ ಗುಂಡಿಗಳು ಇತ್ತೀಚಿನ ದಿನಗಳಲ್ಲಿ ಹಲವಾರು ಅಪಘಾತಗಳಿಗೆ ಕಾರಣವಾಗುತ್ತಿದೆ.

ನಗರದೊಳಗೂ ಹೊಂಡ-ಗುಂಡಿಗಳು
ಉಡುಪಿ ನಗರದೊಳಗೂ ಹೊಂಡ-ಗುಂಡಿಗಳು ಕಾಣಸಿಗುತ್ತವೆ. ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲೂ ಹೊಂಡ-ಗುಂಡಿಗಳಿಗೇನೂ ಕೊರತೆ ಇಲ್ಲ. ಆದರೆ ಇದನ್ನು ಸರಿಯಾಗಿ ನಿರ್ವಹಿಸುವವರ ಕೊರತೆ ಕಾಡುತ್ತಿದೆ. ಮಳೆಗಾಲ ದಲ್ಲಿನ ಹೊಂಡಗಳಲ್ಲಿ ನೀರು ನಿಲ್ಲುವುದರಿಂದ ಸವಾರರ ಗಮನಕ್ಕೆ ಬಾರದೆ ಅವಘಡಗಳು ನಡೆ ಯುವಂತಹ ಘಟನೆಗಳೂ ನಡೆಯುತ್ತಿವೆ.

ಕಳಪೆ ಗುಣಮಟ್ಟ
ಉಡುಪಿ ನಗರಸಭೆ ಮಾಡಿದ ಪ್ಯಾಚ್‌ವರ್ಕ್‌ಗಳು ಮಳೆಗಾಲದಲ್ಲಿ ಎಲ್ಲ ಎದ್ದು ಹೋಗಿವೆ. ರಸ್ತೆಗಳ ಈ ದುಃಸ್ಥಿತಿಗೆ ಕಳಪೆ ಕಾಮಗಾರಿಗಳೇ ಕಾರಣ. ನಗರಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಕ್ರಮತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಗುಂಡಿಗಳ ಕೇಂದ್ರ
ಕರಾವಳಿ ಬೈಪಾಸ್‌
ನಗರಕ್ಕೆ ಸಂಪರ್ಕಿಸುವ ಕರಾವಳಿ ಬೈಪಾಸ್‌ ವಾಹನ ಸವಾರರನ್ನು ಹೊಂಡಗಳಿಂದ ಸ್ವಾಗತಿಸುತ್ತದೆ. ಇದು ಅತ್ಯಂತ ಅಪಾಯಕಾರಿ ಸ್ಥಳವಾದರೂ ಹೊಂಡ-ಗುಂಡಿಗಳಿರುವ ಕಾರಣ ವಾಹನಗಳಿಗೆ ತನ್ನಿಂತಾನೇ ಬ್ರೇಕ್‌ ಬೀಳುತ್ತಿದೆ. ಈ ಬಗ್ಗೆ ಹಲವಾರು ಬಾರಿ ಪತ್ರಿಕೆಗಳಲ್ಲಿ ಎಚ್ಚರಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಆಶ್ಚರ್ಯ ಉಂಟುಮಾಡುತ್ತಿದೆ.

ನಷ್ಟ ಪರಿಹಾರದ ಅಂದಾಜು
ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಉಂಟಾದ ನಷ್ಟವನ್ನು ಅಧಿಕಾರಿಗಳು ಅಂದಾಜು ಮಾಡುತ್ತಿದ್ದಾರೆ. ನಗರದ ರಸ್ತೆ ವಿಸ್ತರಣೆಯನ್ನು ಸರಿಪಡಿಸಲು ಗಮನಹರಿಸಲಾಗುವುದು. ಟೆಂಡರ್‌ ಪ್ರಕ್ರಿಯೆ ನಡೆದು ರಸ್ತೆ ದುರಸ್ತಿ ಕಾರ್ಯವನ್ನು ಆದ್ಯತೆಯ ಆಧಾರದ ಮೇಲೆ ಕೈಗೊಳ್ಳಲಾಗುವುದು.
-ಆನಂದ್‌ ಕಲ್ಲೋಳಿಕರ್‌,
ಪೌರಾಯುಕ್ತರು, ಉಡುಪಿ ನಗರಸಭೆ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.