ಪರ್ಯಾಯ ಸ್ವಚ್ಛತೆಗೆ 100 ಹೊರಗುತ್ತಿಗೆ ಪೌರ ಕಾರ್ಮಿಕರು

ಪೌರಕಾರ್ಮಿಕರ ಕೊರತೆ: 49 ಹುದ್ದೆಗಳು ಖಾಲಿ

Team Udayavani, Jan 4, 2022, 5:10 AM IST

ಪರ್ಯಾಯ ಸ್ವಚ್ಛತೆಗೆ 100 ಹೊರಗುತ್ತಿಗೆ ಪೌರ ಕಾರ್ಮಿಕರು

ಉಡುಪಿ: ಉಡುಪಿ ನಗರಸಭೆ ಸ್ವಚ್ಛತೆ ವಿಚಾರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ವಿಶೇಷ ಮನ್ನಣೆ ಪಡೆದಿದ್ದು, ನಗರಸಭೆಯಲ್ಲಿ ಪೌರ ಕಾರ್ಮಿಕ ಹುದ್ದೆಗಳು ಖಾಲಿ ಇರುವುದು ನಗರದ ಸ್ವಚ್ಛತಾ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ.
ಹೀಗಿರುವ ಪೌರಕಾರ್ಮಿಕರೇ ಹೆಚ್ಚುವರಿ ಕೆಲಸಗಳನ್ನು ಮಾಡುವ ಮೂಲಕ ಸ್ವಚ್ಛತೆಗಾಗಿ ಶ್ರಮಿಸುತ್ತಿದ್ದಾರೆ.

ನಗರದಲ್ಲಿ ಮುಂಬರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವ ಉಡುಪಿ ಅಣಿಯಾಗುತ್ತಿದೆ. ಇದಕ್ಕಾಗಿ ನಗರಸಭೆ ಹೆಚ್ಚುವರಿಯಾಗಿ ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇಮಿಸಿಕೊಂಡಿದೆ.

ಉಡುಪಿ ನಗರ ಸಭೆಯಲ್ಲಿ ಮಂಜೂರಾತಿ ಹುದ್ದೆಗಳು 219 ಇದ್ದು, 170 ಮಂದಿ ಹುದ್ದೆಗಳು ಭರ್ತಿ ಇದೆ. 49 ಹುದ್ದೆಗಳು ಖಾಲಿ ಇವೆ. 170 ಪೌರಕಾರ್ಮಿಕರು ಕಚೇರಿ, ನಗರದ ಮುಖ್ಯ ರಸ್ತೆಗಳ ಸ್ವಚ್ಛತೆ, ಸಾರ್ವಜನಿಕ ಸ್ಥಳದಲ್ಲಿಸ್ವಚ್ಛ ಕಾರ್ಯ, ಬ್ಲಾಕ್‌ ಸ್ಪಾಟ್‌ಗಳ ತೆರವು, ಅಲ್ಲದೆ 35 ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಸಂಬಂಧಿಸಿ ಚರಂಡಿ ಹೂಳು ತೆರವು ಸಹಿತ ಮೊದಲಾದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದರಲ್ಲಿ ಶೇ.10ರಿಂದ 20 ಮಂದಿ ವಾರದ ರಜೆ. ಅನಾರೋಗ್ಯ, ವಿವಿಧ ಸಭೆ, ಸಮಾರಂಭ ಕಾರಣಗಳಿಂದ ರಜೆಯಲ್ಲಿರುತ್ತಾರೆ. ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇರುವುದರಿಂದ ಬಹುತೇಕ ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಪ್ರಸ್ತುತ ಇರುವ ಪೌರಕಾರ್ಮಿಕರು ಹೆಚ್ಚುವರಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ.

ಹೊರಗುತ್ತಿಗೆಯಲ್ಲೂ ಕೆಲಸ
ಡ್ರೈನೇಜ್‌ ವ್ಯವಸ್ಥೆ ಸರಿಪಡಿಸಲು, ತ್ಯಾಜ್ಯ ಸಂಗ್ರಹ ಇನ್ನಿತರ ಕೆಲಸಗಳಿಗೆ ಹೊರಗುತ್ತಿಗೆಯಲ್ಲಿಯೂ ಕೆಲವು ಮಂದಿ
ಪೌರಕಾರ್ಮಿಕರು ತೊಡಗಿಸಿಕೊಂಡಿದ್ದಾರೆ.

ಹಲವಾರು ವರ್ಷಗಳಿಂದ ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದೇವೆ. ನಮಗೂ ಸರಕಾರ ಖಾಯಂ ನೇಮಕಾತಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಪ್ಯಾಂಗಾಂಗ್‌ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿದೆ ಚೀನಾ! ಉಪಗ್ರಹ ಚಿತ್ರದಿಂದ ಸ್ಪಷ್ಟ

ಪರ್ಯಾಯ ಸ್ವಚ್ಛತಾ ಕಾರ್ಯಕ್ಕೆ 100 ಮಂದಿ
ಪರ್ಯಾಯ ಸ್ವಚ್ಛತಾ ಕಾರ್ಯದ ಸಲುವಾಗಿ ನಗರಸಭೆ ವ್ಯವಸ್ಥಿತ ಯೋಜನೆ ರೂಪಿಸಿದೆ. 100 ಮಂದಿ ಪೌರಕಾರ್ಮಿಕರನ್ನು ತಾತ್ಕಾಲಿಕವಾಗಿ ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳಲಾಗಿದೆ ಜ. 4 ರಿಂದ 15 ದಿನಗಳವರೆಗೆ ಇವರು ನಗರದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ. ಕೃಷ್ಣ ಮಠದ ರಥ ಬೀದಿ, ರಾಜಾಂಗಣ, ಪಾರ್ಕಿಂಗ್‌, ರಾಯಲ್‌ ಗಾರ್ಡನ್‌ ಪಾರ್ಕಿಂಗ್‌, ಮಠಕ್ಕೆ ಹೋಗುವ ರಸ್ತೆಗಳಾದ ತೆಂಕಪೇಟೆ, ಬಡಗುಪೇಟೆ, ಸರ್ವಿಸ್‌ ಮತ್ತು ಸಿಟಿ ಬಸ್‌ ನಿಲ್ದಾಣದಿಂದ ಮಠಕ್ಕೆ ಹೋಗುವ ರಸ್ತೆಗಳು ಹಾಗೂ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ಸರ್ವಿಸ್‌ ಮತ್ತು ಸಿಟಿ ಬಸ್‌ ನಿಲ್ದಾಣ, ಪರ್ಯಾಯ ಮಹೋತ್ಸವದ ಮೆರವಣಿಗೆ ರಸ್ತೆಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಹಗಲೂ ಮತ್ತು ರಾತ್ರಿ ಸಮಯಗಳಲ್ಲಿ ನಿರ್ವಹಿಸಬೇಕಾಗಿರುತ್ತದೆ. ಇದರಂತೆ 100 ಜನ ಪೌರಕಾರ್ಮಿಕರನ್ನು ತಲಾ 50 ಜನರ 2 ತಂಡಗಳನ್ನಾಗಿ ವಿಭಾಗಿಸಿ ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಸ್ವಚ್ಛತೆ ಕೆಲಸಗಳನ್ನು ನಡೆಸಲಾಗುತ್ತದೆ. ಉದ್ದದ ಹಿಡಿ ಪೊರಕೆ, ಮೆಟಲ್‌ ಟ್ರೇ, ಪ್ಲಾಸ್ಟಿಕ್‌ ಬುಟ್ಟಿ, ಪ್ಲಾಸ್ಕ್, ಮಾಸ್ಕ್, ಗ್ಲೌಸ್‌, ಗುರುತಿನ ಚೀಟಿ, ರೇಡಿಯಂ ಜಾಕೆಟ್‌ ತಳ್ಳುಗಾಡಿ ಮತ್ತು 1 ಲಕ್ಷ ರೂ ವೆಚ್ಚದಲ್ಲಿ ಫಿನಾಯಿಲ್‌, ಬೈಟೆಕ್ಸ್‌, ಬ್ಲೀಚಿಂಗ್‌ ಪೌಡರ್‌ ಒದಗಿಸಲಾಗುತ್ತದೆ. ನಗರದ 34 ಕಡೆಗಳಲ್ಲಿ ಮೊಬೈಲ್‌ ಟಾಯ್ಲೆಟ್‌ ಬ್ಲಾಕ್‌ಗಳನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಕೊರತೆ ಮತ್ತು ನೇಮಕಾತಿ ಸಂಬಂಧಿಸಿ ಈಗಾಗಲೆ ನಗರಸಭೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಸರಕಾರದ ಮಟ್ಟದಲ್ಲಿಯೂ ಈ ಬಗ್ಗೆ ಪರಿಶೀಲನೆಯಾಗಬೇಕಿದೆ. ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸ್ವಚ್ಛತಾ ಕಾರ್ಯಕ್ಕೆ ಹೆಚ್ಚುವರಿ ಹೊರಗುತ್ತಿಗೆಯಲ್ಲಿ ಪೌರ ಕಾರ್ಮಿಕರನ್ನು ನೇಮಿಸಲಾಗುತ್ತದೆ.
– ಸುಮಿತ್ರಾ ನಾಯಕ್‌, ಅಧ್ಯಕ್ಷೆ , ಉಡುಪಿ ನಗರಸಭೆ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.